Homeಕರೋನಾ ತಲ್ಲಣದೆಹಲಿ ಲಾಕ್‌ಡೌನ್‌ ಮಾಡಲ್ಲ, ಭಯಬೇಡ: ಅರವಿಂದ್ ಕೇಜ್ರಿವಾಲ್

ದೆಹಲಿ ಲಾಕ್‌ಡೌನ್‌ ಮಾಡಲ್ಲ, ಭಯಬೇಡ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಮುಖ್ಯಮಂತ್ರಿ ಅರವಿಂದ್‌‌ ಕೇಜ್ರಿವಾಲ್‌, ‘ದೆಹಲಿಯಲ್ಲಿ ಯಾವುದೇ ಲಾಕ್‌ಡೌನ್ ಇಲ್ಲ’ ಎಂದು ಮಂಗಳವಾರ ಹೇಳಿದ್ದಾರೆ. ದೆಹಲಿಯಲ್ಲಿ ಕೊರೊನಾ ಪಾಸಿಟಿವಿಟಿ ದರವು ಏಳು ತಿಂಗಳ ಗರಿಷ್ಠ ಮಟ್ಟವನ್ನು ತಲುಪಿದ್ದು, 25% ದಷ್ಟಿದೆ.

ಕೊರೊನಾ ಪ್ರಕರಣಗಳ ಏರಿಕೆಯ ಕುರಿತು ಮಾತನಾಡಿದ ಕೇಜ್ರಿವಾಲ್‌, “ಭಯಪಡಬೇಡಿ, ನಾವು ಲಾಕ್‌ಡೌನ್ ಅನ್ನು ವಿಧಿಸುವುದಿಲ್ಲ” ಎಂದು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಸುಮಾರು 22,000 ಹೊಸ ಪ್ರಕರಣಗಳು ವರದಿಯಾಗುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:ಕೊರೊನಾ ಉಲ್ಭಣ: ಗುರುವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಮೋದಿ?

ದೆಹಲಿಯಲ್ಲಿ ಈಗಾಗಲೆ ಎಲ್ಲಾ ಖಾಸಗಿ ಕಚೇರಿಗಳನ್ನು ಮುಚ್ಚಲು ಮತ್ತು ಅಲ್ಲಿನ ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡಿಸುವಂತೆ ಆದೇಶಿಸಲಾಗಿದೆ. ಅಗತ್ಯ ಸೇವೆಗಳನ್ನು ಒದಗಿಸುವವರಿಗೆ ಮಾತ್ರ ಹೊಸ ನಿಯಮದಿಂದ ವಿನಾಯಿತಿ ಪಡೆಯಲಿದ್ದಾರೆ ಎಂದು ದೆಹಲಿ ವಿಪತ್ತು ನಿರ್ವಹಣಾ ಸಂಸ್ಥೆ (ಡಿಡಿಎಂಎ) ಸಭೆ ನಿರ್ಧರಿಸಿದೆ. ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳನ್ನು ಸಹ ಮುಚ್ಚಲಾಗಿದ್ದು, ಪಾರ್ಸೆಲ್‌ ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿಸಲಾಗಿದೆ.

“ನಗರದಲ್ಲಿ ಮುಂದಿನ 48 ಗಂಟೆಗಳಲ್ಲಿ ಅಥವಾ ಈ ವಾರದಲ್ಲಿ ಪ್ರಕರಣಗಳು ಖಂಡಿತಾ ಗರಿಷ್ಠಗೊಳ್ಳಬಹುದು” ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಸೋಮವಾರ ಹೇಳಿದ್ದರು. ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆಯಿದ್ದರೂ ಮತ್ತೊಂದು ಕರ್ಫ್ಯೂ ಸಾಧ್ಯ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ:ಕೊರೊನಾ: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 12 ಸಾವಿರ ಕೇಸ್, ಬೆಂಗಳೂರಿನಲ್ಲಿ 9 ಸಾವಿರ ಪ್ರಕರಣ

“ಪ್ರಕರಣದ ಉತ್ತುಂಗ(ಪೀಕ್‌) ಈಗಾಗಲೇ ತಲುಪಿದೆ ಅಥವಾ ಒಂದೆರೆಡು ದಿನಗಳಲ್ಲಿ ತಲುಪಲಿದೆ. ಈ ವಾರ ಖಂಡಿತವಾಗಿ ಪೀಕ್‌ ಆಗುತ್ತದೆ. ಅದರ ನಂತರ ಪ್ರಕರಣಗಳು ಕಡಿಮೆಯಾಗಲು ಪ್ರಾರಂಭವಾಗುತ್ತದೆ. ಆದರೆ ಜನರು ಎಚ್ಚರ ತಪ್ಪದಂತೆ ನೆನಪಿಸಲು ನಾವು ಮತ್ತೊಂದು ಕರ್ಫ್ಯೂ ಅನ್ನು ಜಾರಿಗೊಳಿಸುವ ಸಾಧ್ಯತೆಯಿದೆ” ಎಂದು ಸತ್ಯೇಂದ್ರ ಸೋಮವಾರ ತಿಳಿಸಿದ್ದರು.

ಖಾಸಗಿ ಬ್ಯಾಂಕ್‌ಗಳು, ಅಗತ್ಯ ಸೇವೆಗಳನ್ನು ಒದಗಿಸುವ ಕಚೇರಿಗಳು, ವಿಮಾ ಕಂಪನಿಗಳು, ಫಾರ್ಮಾ ಕಂಪನಿಗಳು, ಮೈಕ್ರೋಫೈನಾನ್ಸ್ ಕಂಪನಿಗಳು, ವಕೀಲರ ಕಚೇರಿಗಳು ಮತ್ತು ಕೊರಿಯರ್ ಸೇವೆಗಳಿಗೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...