Homeಮುಖಪುಟನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು ನೀಡಿದ ನಂತರ ನ್ಯಾಯಮೂರ್ತಿಗಳು ಸಂಭ್ರಮಾಚರಣೆ ಮಾಡಿದ್ದು ಸರಿಯೇ ಪ್ರಶ್ನೆ ಕೇಳಿಬಂದಿದೆ.

ವಿವಾದಿತ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಬಗ್ಗೆ ತೀರ್ಪು ಪ್ರಕಟಿಸಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಆತ್ಮ ಚರಿತ್ರೆ “ಜಸ್ಟೀಸ್ ಫಾರ್ ದಿ ಜಡ್ಜ್” ಎಂಬ ಪುಸ್ತಕದಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನದ ಸಂಜೆಯನ್ನು ವಿವರಿಸಿದ್ದಾರೆ. ‘ಮಹತ್ವದ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂಬ ಶೀರ್ಷಿಕೆಯೊಂದಿಗೆ ಅಂದು ಪೀಠದಲ್ಲಿದ್ದ ಇತರ ನ್ಯಾಯಾಧೀಶರೊಂದಿಗೆ ಐಷಾರಾಮಿ ಹೋಟೆಲ್‌ನಲ್ಲಿ ಊಟ ಮಾಡುತ್ತಿರುವ ಮತ್ತು ಒಟ್ಟಿಗೆ ಕೈಜೋಡಿಸಿ ನಿಂತಿರುವ ಫೋಟೋಗಳು ಪುಸ್ತಕದಲ್ಲಿವೆ.

ಇದನ್ನೂ ಓದಿ:ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಈ ಬಗ್ಗೆ ಎನ್‌ಡಿಟಿವಿ ಜೊತೆಗಿನ ಸಂದರ್ಶನದಲ್ಲಿ ‘ವಿವಾದಿತ ಅಯೋಧ್ಯೆ ತೀರ್ಪು ಸಂಭ್ರಮಾಚರಣೆಯ ವಿಷಯವೇ’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಂಜನ್ ಗೊಗೊಯ್, ಪುಸ್ತಕದಲ್ಲಿನ ಫೋಟೋ ಶೀರ್ಷಿಕೆಯಲ್ಲಿ ಇರುವ ಪದಗಳನ್ನು ನಿರಾಕರಿಸಿ, “ಅದು ಆಚರಣೆಯಲ್ಲ, ಐದು ಜನ ನ್ಯಾಯಾಧೀಶರು ಈ ತೀರ್ಪಿಗಾಗಿ ನಾಲ್ಕು ತಿಂಗಳನ್ನು ಕಳೆದುಕೊಂಡೆವು. ಅದನ್ನು ನಾನು ಹೇಗೆ ಮರುಗಳಿಸುವುದು? ಅದಕ್ಕಾಗಿ ನಾಲ್ಕು ತಿಂಗಳ ಪ್ರಯಾಸಕರ ಕೆಲಸಗಳ ನಂತರ ಸ್ನೇಹಿತರುಗಳು ನಡೆಸಿದ ಸಭೆ. ಹೊರಗೆ ಊಟ ಮಾಡುವುದು ಅಪರಾಧವಲ್ಲ. ನಮ್ಮ ನ್ಯಾಯಾಧೀಶರುಗಳು ಸತತ ಪರಿಶ್ರಮದ ನಡುವೆ ತೆಗೆದುಕೊಂಡ ಸಣ್ಣ ವಿರಾಮ ಅದು” ಎಂದು ಹೇಳಿದ್ದಾರೆ.

ಎನ್‌ಡಿಟಿವಿಯ ಅನುಭವಿ ಪತ್ರಕರ್ತ ಶ್ರೀನಿವಾಸನ್ ಜೈನ್ ಕಠಿಣ ಪ್ರಶ್ನೆಗಳನ್ನು ನಿವೃತ್ತ ಸಿಜೆಐಗೆ ಕೇಳಿದ್ದಾರೆ. ನೀವು ಬಹಳ ಪ್ರಯಾಸಕರವಾಗಿ ಈ ತೀರ್ಪನ್ನು ನಿಭಾಯಿಸಿದ್ದೆವು, ಕೆಲಸ ಮುಗಿದಿದೆ ಎಂದು ಹೇಳಿಕೆ ನೀಡಿದ್ದೀರಿ ಎಂಬ ಪ್ರಶ್ನೆಯನ್ನು ತುಂಡರಿಸಿದ ಗೊಗೊಯ್ ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದರು. ಅಲ್ಲದೆ ನೀವು ಏಕೆ ಕೆಲವು ವಾಕ್ಯಗಳನ್ನು ತೆಗೆದುಕೊಳ್ಳುತ್ತಿರಿ? ಆ ಸಂದರ್ಭದಲ್ಲಿ ನಾನು ನೀಡಿದ ಪೂರ್ಣ ಹೇಳಿಕೆಯನ್ನು ಗಮನಿಸಿ ಎಂದರು.

ನೀವು ನೀಡಿದ ತೀರ್ಪಿನಿಂದ ಬಹಳಷ್ಟು ಜನ ಬಹಳಷ್ಟು ಕಳೆದುಕೊಂಡ ನೋವಿನ ಪರಿಸ್ಥಿತಿಯಲ್ಲಿದ್ದರು. ಅಂದು ನೀವು ಆಚರಣೆ ಮಾಡಿ ಊಟ ಮಾಡಿದ ಫೋಟೊ ಹಾಕುವುದು ಅಸೂಕ್ಷ್ಮತೆಯಲ್ಲವೇ ಎಂಬ ಪ್ರಶ್ನೆಗೆ ಸಿಜೆಐ ಕೆಂಡಮಂಡಲವಾದರು. “ಮಿಸ್ಟರ್ ಶ್ರೀನಿವಾಸನ್ ಒಬ್ಬ ಪತ್ರಕರ್ತರಾಗಿ ನೀವು ಬಹಳಷ್ಟು ಜನರ ನೋವಿಗೆ ಕಾರಣರಾಗುತ್ತೀರಿ, ನಿಮಗದು ಗೊತ್ತೆ? ಹಾಗೆಂದು ನೀವು ಡಿನ್ನರ್‌ಗೆ ಹೋಗುವುದಿಲ್ಲವೇ? ನೀವು ಏನೂ ತಿನ್ನದೆ ಮನೆಯಲ್ಲಿಯೇ ಕುಳಿದು ದುಃಖಿಸುತ್ತೀರೆ? ನನ್ನ ಸಂದರ್ಶನ, ಸ್ಟೋರಿ ಅರ್ಧಸತ್ಯ, ಸುಳ್ಳುಗಳಿಂದ ಕೂಡಿದ್ದು ಇತರರಿಗೆ ನೋವು ನೀಡಿದೆ ಎಂದು ನೀವು ಉಳಿದೆಲ್ಲಾ ದಿನ ದುಃಖಿಸುತ್ತೀರಾ? ನಾಲ್ಕು ತಿಂಗಳ ಶ್ರಮದ ನಂತರ ಊಟ ಮಾಡಿದ್ದು ತಪ್ಪಲ್ಲ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯ ಅಶೋಕ ಚಕ್ರದ ಕೆಳಗೆ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್‌ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name God; ಸಾಕ್ಷ್ಯಚಿತ್ರ ನೋಡಿ

ರಂಜನ್‌ ಗೊಗೊಯ್ ಅವರ ಆತ್ಮಚರಿತ್ರೆಯಲ್ಲಿರುವ ಒಂದು ಪುಟದ ಚಿತ್ರ

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...