Homeಮುಖಪುಟನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು ನೀಡಿದ ನಂತರ ನ್ಯಾಯಮೂರ್ತಿಗಳು ಸಂಭ್ರಮಾಚರಣೆ ಮಾಡಿದ್ದು ಸರಿಯೇ ಪ್ರಶ್ನೆ ಕೇಳಿಬಂದಿದೆ.

ವಿವಾದಿತ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಬಗ್ಗೆ ತೀರ್ಪು ಪ್ರಕಟಿಸಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಆತ್ಮ ಚರಿತ್ರೆ “ಜಸ್ಟೀಸ್ ಫಾರ್ ದಿ ಜಡ್ಜ್” ಎಂಬ ಪುಸ್ತಕದಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನದ ಸಂಜೆಯನ್ನು ವಿವರಿಸಿದ್ದಾರೆ. ‘ಮಹತ್ವದ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂಬ ಶೀರ್ಷಿಕೆಯೊಂದಿಗೆ ಅಂದು ಪೀಠದಲ್ಲಿದ್ದ ಇತರ ನ್ಯಾಯಾಧೀಶರೊಂದಿಗೆ ಐಷಾರಾಮಿ ಹೋಟೆಲ್‌ನಲ್ಲಿ ಊಟ ಮಾಡುತ್ತಿರುವ ಮತ್ತು ಒಟ್ಟಿಗೆ ಕೈಜೋಡಿಸಿ ನಿಂತಿರುವ ಫೋಟೋಗಳು ಪುಸ್ತಕದಲ್ಲಿವೆ.

ಇದನ್ನೂ ಓದಿ:ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಈ ಬಗ್ಗೆ ಎನ್‌ಡಿಟಿವಿ ಜೊತೆಗಿನ ಸಂದರ್ಶನದಲ್ಲಿ ‘ವಿವಾದಿತ ಅಯೋಧ್ಯೆ ತೀರ್ಪು ಸಂಭ್ರಮಾಚರಣೆಯ ವಿಷಯವೇ’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಂಜನ್ ಗೊಗೊಯ್, ಪುಸ್ತಕದಲ್ಲಿನ ಫೋಟೋ ಶೀರ್ಷಿಕೆಯಲ್ಲಿ ಇರುವ ಪದಗಳನ್ನು ನಿರಾಕರಿಸಿ, “ಅದು ಆಚರಣೆಯಲ್ಲ, ಐದು ಜನ ನ್ಯಾಯಾಧೀಶರು ಈ ತೀರ್ಪಿಗಾಗಿ ನಾಲ್ಕು ತಿಂಗಳನ್ನು ಕಳೆದುಕೊಂಡೆವು. ಅದನ್ನು ನಾನು ಹೇಗೆ ಮರುಗಳಿಸುವುದು? ಅದಕ್ಕಾಗಿ ನಾಲ್ಕು ತಿಂಗಳ ಪ್ರಯಾಸಕರ ಕೆಲಸಗಳ ನಂತರ ಸ್ನೇಹಿತರುಗಳು ನಡೆಸಿದ ಸಭೆ. ಹೊರಗೆ ಊಟ ಮಾಡುವುದು ಅಪರಾಧವಲ್ಲ. ನಮ್ಮ ನ್ಯಾಯಾಧೀಶರುಗಳು ಸತತ ಪರಿಶ್ರಮದ ನಡುವೆ ತೆಗೆದುಕೊಂಡ ಸಣ್ಣ ವಿರಾಮ ಅದು” ಎಂದು ಹೇಳಿದ್ದಾರೆ.

ಎನ್‌ಡಿಟಿವಿಯ ಅನುಭವಿ ಪತ್ರಕರ್ತ ಶ್ರೀನಿವಾಸನ್ ಜೈನ್ ಕಠಿಣ ಪ್ರಶ್ನೆಗಳನ್ನು ನಿವೃತ್ತ ಸಿಜೆಐಗೆ ಕೇಳಿದ್ದಾರೆ. ನೀವು ಬಹಳ ಪ್ರಯಾಸಕರವಾಗಿ ಈ ತೀರ್ಪನ್ನು ನಿಭಾಯಿಸಿದ್ದೆವು, ಕೆಲಸ ಮುಗಿದಿದೆ ಎಂದು ಹೇಳಿಕೆ ನೀಡಿದ್ದೀರಿ ಎಂಬ ಪ್ರಶ್ನೆಯನ್ನು ತುಂಡರಿಸಿದ ಗೊಗೊಯ್ ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದರು. ಅಲ್ಲದೆ ನೀವು ಏಕೆ ಕೆಲವು ವಾಕ್ಯಗಳನ್ನು ತೆಗೆದುಕೊಳ್ಳುತ್ತಿರಿ? ಆ ಸಂದರ್ಭದಲ್ಲಿ ನಾನು ನೀಡಿದ ಪೂರ್ಣ ಹೇಳಿಕೆಯನ್ನು ಗಮನಿಸಿ ಎಂದರು.

ನೀವು ನೀಡಿದ ತೀರ್ಪಿನಿಂದ ಬಹಳಷ್ಟು ಜನ ಬಹಳಷ್ಟು ಕಳೆದುಕೊಂಡ ನೋವಿನ ಪರಿಸ್ಥಿತಿಯಲ್ಲಿದ್ದರು. ಅಂದು ನೀವು ಆಚರಣೆ ಮಾಡಿ ಊಟ ಮಾಡಿದ ಫೋಟೊ ಹಾಕುವುದು ಅಸೂಕ್ಷ್ಮತೆಯಲ್ಲವೇ ಎಂಬ ಪ್ರಶ್ನೆಗೆ ಸಿಜೆಐ ಕೆಂಡಮಂಡಲವಾದರು. “ಮಿಸ್ಟರ್ ಶ್ರೀನಿವಾಸನ್ ಒಬ್ಬ ಪತ್ರಕರ್ತರಾಗಿ ನೀವು ಬಹಳಷ್ಟು ಜನರ ನೋವಿಗೆ ಕಾರಣರಾಗುತ್ತೀರಿ, ನಿಮಗದು ಗೊತ್ತೆ? ಹಾಗೆಂದು ನೀವು ಡಿನ್ನರ್‌ಗೆ ಹೋಗುವುದಿಲ್ಲವೇ? ನೀವು ಏನೂ ತಿನ್ನದೆ ಮನೆಯಲ್ಲಿಯೇ ಕುಳಿದು ದುಃಖಿಸುತ್ತೀರೆ? ನನ್ನ ಸಂದರ್ಶನ, ಸ್ಟೋರಿ ಅರ್ಧಸತ್ಯ, ಸುಳ್ಳುಗಳಿಂದ ಕೂಡಿದ್ದು ಇತರರಿಗೆ ನೋವು ನೀಡಿದೆ ಎಂದು ನೀವು ಉಳಿದೆಲ್ಲಾ ದಿನ ದುಃಖಿಸುತ್ತೀರಾ? ನಾಲ್ಕು ತಿಂಗಳ ಶ್ರಮದ ನಂತರ ಊಟ ಮಾಡಿದ್ದು ತಪ್ಪಲ್ಲ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯ ಅಶೋಕ ಚಕ್ರದ ಕೆಳಗೆ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್‌ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name God; ಸಾಕ್ಷ್ಯಚಿತ್ರ ನೋಡಿ

ರಂಜನ್‌ ಗೊಗೊಯ್ ಅವರ ಆತ್ಮಚರಿತ್ರೆಯಲ್ಲಿರುವ ಒಂದು ಪುಟದ ಚಿತ್ರ

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...