Homeಮುಖಪುಟನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು ನೀಡಿದ ನಂತರ ನ್ಯಾಯಮೂರ್ತಿಗಳು ಸಂಭ್ರಮಾಚರಣೆ ಮಾಡಿದ್ದು ಸರಿಯೇ ಪ್ರಶ್ನೆ ಕೇಳಿಬಂದಿದೆ.

ವಿವಾದಿತ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಬಗ್ಗೆ ತೀರ್ಪು ಪ್ರಕಟಿಸಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಆತ್ಮ ಚರಿತ್ರೆ “ಜಸ್ಟೀಸ್ ಫಾರ್ ದಿ ಜಡ್ಜ್” ಎಂಬ ಪುಸ್ತಕದಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನದ ಸಂಜೆಯನ್ನು ವಿವರಿಸಿದ್ದಾರೆ. ‘ಮಹತ್ವದ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂಬ ಶೀರ್ಷಿಕೆಯೊಂದಿಗೆ ಅಂದು ಪೀಠದಲ್ಲಿದ್ದ ಇತರ ನ್ಯಾಯಾಧೀಶರೊಂದಿಗೆ ಐಷಾರಾಮಿ ಹೋಟೆಲ್‌ನಲ್ಲಿ ಊಟ ಮಾಡುತ್ತಿರುವ ಮತ್ತು ಒಟ್ಟಿಗೆ ಕೈಜೋಡಿಸಿ ನಿಂತಿರುವ ಫೋಟೋಗಳು ಪುಸ್ತಕದಲ್ಲಿವೆ.

ಇದನ್ನೂ ಓದಿ:ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಈ ಬಗ್ಗೆ ಎನ್‌ಡಿಟಿವಿ ಜೊತೆಗಿನ ಸಂದರ್ಶನದಲ್ಲಿ ‘ವಿವಾದಿತ ಅಯೋಧ್ಯೆ ತೀರ್ಪು ಸಂಭ್ರಮಾಚರಣೆಯ ವಿಷಯವೇ’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಂಜನ್ ಗೊಗೊಯ್, ಪುಸ್ತಕದಲ್ಲಿನ ಫೋಟೋ ಶೀರ್ಷಿಕೆಯಲ್ಲಿ ಇರುವ ಪದಗಳನ್ನು ನಿರಾಕರಿಸಿ, “ಅದು ಆಚರಣೆಯಲ್ಲ, ಐದು ಜನ ನ್ಯಾಯಾಧೀಶರು ಈ ತೀರ್ಪಿಗಾಗಿ ನಾಲ್ಕು ತಿಂಗಳನ್ನು ಕಳೆದುಕೊಂಡೆವು. ಅದನ್ನು ನಾನು ಹೇಗೆ ಮರುಗಳಿಸುವುದು? ಅದಕ್ಕಾಗಿ ನಾಲ್ಕು ತಿಂಗಳ ಪ್ರಯಾಸಕರ ಕೆಲಸಗಳ ನಂತರ ಸ್ನೇಹಿತರುಗಳು ನಡೆಸಿದ ಸಭೆ. ಹೊರಗೆ ಊಟ ಮಾಡುವುದು ಅಪರಾಧವಲ್ಲ. ನಮ್ಮ ನ್ಯಾಯಾಧೀಶರುಗಳು ಸತತ ಪರಿಶ್ರಮದ ನಡುವೆ ತೆಗೆದುಕೊಂಡ ಸಣ್ಣ ವಿರಾಮ ಅದು” ಎಂದು ಹೇಳಿದ್ದಾರೆ.

ಎನ್‌ಡಿಟಿವಿಯ ಅನುಭವಿ ಪತ್ರಕರ್ತ ಶ್ರೀನಿವಾಸನ್ ಜೈನ್ ಕಠಿಣ ಪ್ರಶ್ನೆಗಳನ್ನು ನಿವೃತ್ತ ಸಿಜೆಐಗೆ ಕೇಳಿದ್ದಾರೆ. ನೀವು ಬಹಳ ಪ್ರಯಾಸಕರವಾಗಿ ಈ ತೀರ್ಪನ್ನು ನಿಭಾಯಿಸಿದ್ದೆವು, ಕೆಲಸ ಮುಗಿದಿದೆ ಎಂದು ಹೇಳಿಕೆ ನೀಡಿದ್ದೀರಿ ಎಂಬ ಪ್ರಶ್ನೆಯನ್ನು ತುಂಡರಿಸಿದ ಗೊಗೊಯ್ ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದರು. ಅಲ್ಲದೆ ನೀವು ಏಕೆ ಕೆಲವು ವಾಕ್ಯಗಳನ್ನು ತೆಗೆದುಕೊಳ್ಳುತ್ತಿರಿ? ಆ ಸಂದರ್ಭದಲ್ಲಿ ನಾನು ನೀಡಿದ ಪೂರ್ಣ ಹೇಳಿಕೆಯನ್ನು ಗಮನಿಸಿ ಎಂದರು.

ನೀವು ನೀಡಿದ ತೀರ್ಪಿನಿಂದ ಬಹಳಷ್ಟು ಜನ ಬಹಳಷ್ಟು ಕಳೆದುಕೊಂಡ ನೋವಿನ ಪರಿಸ್ಥಿತಿಯಲ್ಲಿದ್ದರು. ಅಂದು ನೀವು ಆಚರಣೆ ಮಾಡಿ ಊಟ ಮಾಡಿದ ಫೋಟೊ ಹಾಕುವುದು ಅಸೂಕ್ಷ್ಮತೆಯಲ್ಲವೇ ಎಂಬ ಪ್ರಶ್ನೆಗೆ ಸಿಜೆಐ ಕೆಂಡಮಂಡಲವಾದರು. “ಮಿಸ್ಟರ್ ಶ್ರೀನಿವಾಸನ್ ಒಬ್ಬ ಪತ್ರಕರ್ತರಾಗಿ ನೀವು ಬಹಳಷ್ಟು ಜನರ ನೋವಿಗೆ ಕಾರಣರಾಗುತ್ತೀರಿ, ನಿಮಗದು ಗೊತ್ತೆ? ಹಾಗೆಂದು ನೀವು ಡಿನ್ನರ್‌ಗೆ ಹೋಗುವುದಿಲ್ಲವೇ? ನೀವು ಏನೂ ತಿನ್ನದೆ ಮನೆಯಲ್ಲಿಯೇ ಕುಳಿದು ದುಃಖಿಸುತ್ತೀರೆ? ನನ್ನ ಸಂದರ್ಶನ, ಸ್ಟೋರಿ ಅರ್ಧಸತ್ಯ, ಸುಳ್ಳುಗಳಿಂದ ಕೂಡಿದ್ದು ಇತರರಿಗೆ ನೋವು ನೀಡಿದೆ ಎಂದು ನೀವು ಉಳಿದೆಲ್ಲಾ ದಿನ ದುಃಖಿಸುತ್ತೀರಾ? ನಾಲ್ಕು ತಿಂಗಳ ಶ್ರಮದ ನಂತರ ಊಟ ಮಾಡಿದ್ದು ತಪ್ಪಲ್ಲ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯ ಅಶೋಕ ಚಕ್ರದ ಕೆಳಗೆ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್‌ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name God; ಸಾಕ್ಷ್ಯಚಿತ್ರ ನೋಡಿ

ರಂಜನ್‌ ಗೊಗೊಯ್ ಅವರ ಆತ್ಮಚರಿತ್ರೆಯಲ್ಲಿರುವ ಒಂದು ಪುಟದ ಚಿತ್ರ

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...