Homeಮುಖಪುಟನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು ನೀಡಿದ ನಂತರ ನ್ಯಾಯಮೂರ್ತಿಗಳು ಸಂಭ್ರಮಾಚರಣೆ ಮಾಡಿದ್ದು ಸರಿಯೇ ಪ್ರಶ್ನೆ ಕೇಳಿಬಂದಿದೆ.

ವಿವಾದಿತ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಬಗ್ಗೆ ತೀರ್ಪು ಪ್ರಕಟಿಸಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಆತ್ಮ ಚರಿತ್ರೆ “ಜಸ್ಟೀಸ್ ಫಾರ್ ದಿ ಜಡ್ಜ್” ಎಂಬ ಪುಸ್ತಕದಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನದ ಸಂಜೆಯನ್ನು ವಿವರಿಸಿದ್ದಾರೆ. ‘ಮಹತ್ವದ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂಬ ಶೀರ್ಷಿಕೆಯೊಂದಿಗೆ ಅಂದು ಪೀಠದಲ್ಲಿದ್ದ ಇತರ ನ್ಯಾಯಾಧೀಶರೊಂದಿಗೆ ಐಷಾರಾಮಿ ಹೋಟೆಲ್‌ನಲ್ಲಿ ಊಟ ಮಾಡುತ್ತಿರುವ ಮತ್ತು ಒಟ್ಟಿಗೆ ಕೈಜೋಡಿಸಿ ನಿಂತಿರುವ ಫೋಟೋಗಳು ಪುಸ್ತಕದಲ್ಲಿವೆ.

ಇದನ್ನೂ ಓದಿ:ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಈ ಬಗ್ಗೆ ಎನ್‌ಡಿಟಿವಿ ಜೊತೆಗಿನ ಸಂದರ್ಶನದಲ್ಲಿ ‘ವಿವಾದಿತ ಅಯೋಧ್ಯೆ ತೀರ್ಪು ಸಂಭ್ರಮಾಚರಣೆಯ ವಿಷಯವೇ’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಂಜನ್ ಗೊಗೊಯ್, ಪುಸ್ತಕದಲ್ಲಿನ ಫೋಟೋ ಶೀರ್ಷಿಕೆಯಲ್ಲಿ ಇರುವ ಪದಗಳನ್ನು ನಿರಾಕರಿಸಿ, “ಅದು ಆಚರಣೆಯಲ್ಲ, ಐದು ಜನ ನ್ಯಾಯಾಧೀಶರು ಈ ತೀರ್ಪಿಗಾಗಿ ನಾಲ್ಕು ತಿಂಗಳನ್ನು ಕಳೆದುಕೊಂಡೆವು. ಅದನ್ನು ನಾನು ಹೇಗೆ ಮರುಗಳಿಸುವುದು? ಅದಕ್ಕಾಗಿ ನಾಲ್ಕು ತಿಂಗಳ ಪ್ರಯಾಸಕರ ಕೆಲಸಗಳ ನಂತರ ಸ್ನೇಹಿತರುಗಳು ನಡೆಸಿದ ಸಭೆ. ಹೊರಗೆ ಊಟ ಮಾಡುವುದು ಅಪರಾಧವಲ್ಲ. ನಮ್ಮ ನ್ಯಾಯಾಧೀಶರುಗಳು ಸತತ ಪರಿಶ್ರಮದ ನಡುವೆ ತೆಗೆದುಕೊಂಡ ಸಣ್ಣ ವಿರಾಮ ಅದು” ಎಂದು ಹೇಳಿದ್ದಾರೆ.

ಎನ್‌ಡಿಟಿವಿಯ ಅನುಭವಿ ಪತ್ರಕರ್ತ ಶ್ರೀನಿವಾಸನ್ ಜೈನ್ ಕಠಿಣ ಪ್ರಶ್ನೆಗಳನ್ನು ನಿವೃತ್ತ ಸಿಜೆಐಗೆ ಕೇಳಿದ್ದಾರೆ. ನೀವು ಬಹಳ ಪ್ರಯಾಸಕರವಾಗಿ ಈ ತೀರ್ಪನ್ನು ನಿಭಾಯಿಸಿದ್ದೆವು, ಕೆಲಸ ಮುಗಿದಿದೆ ಎಂದು ಹೇಳಿಕೆ ನೀಡಿದ್ದೀರಿ ಎಂಬ ಪ್ರಶ್ನೆಯನ್ನು ತುಂಡರಿಸಿದ ಗೊಗೊಯ್ ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದರು. ಅಲ್ಲದೆ ನೀವು ಏಕೆ ಕೆಲವು ವಾಕ್ಯಗಳನ್ನು ತೆಗೆದುಕೊಳ್ಳುತ್ತಿರಿ? ಆ ಸಂದರ್ಭದಲ್ಲಿ ನಾನು ನೀಡಿದ ಪೂರ್ಣ ಹೇಳಿಕೆಯನ್ನು ಗಮನಿಸಿ ಎಂದರು.

ನೀವು ನೀಡಿದ ತೀರ್ಪಿನಿಂದ ಬಹಳಷ್ಟು ಜನ ಬಹಳಷ್ಟು ಕಳೆದುಕೊಂಡ ನೋವಿನ ಪರಿಸ್ಥಿತಿಯಲ್ಲಿದ್ದರು. ಅಂದು ನೀವು ಆಚರಣೆ ಮಾಡಿ ಊಟ ಮಾಡಿದ ಫೋಟೊ ಹಾಕುವುದು ಅಸೂಕ್ಷ್ಮತೆಯಲ್ಲವೇ ಎಂಬ ಪ್ರಶ್ನೆಗೆ ಸಿಜೆಐ ಕೆಂಡಮಂಡಲವಾದರು. “ಮಿಸ್ಟರ್ ಶ್ರೀನಿವಾಸನ್ ಒಬ್ಬ ಪತ್ರಕರ್ತರಾಗಿ ನೀವು ಬಹಳಷ್ಟು ಜನರ ನೋವಿಗೆ ಕಾರಣರಾಗುತ್ತೀರಿ, ನಿಮಗದು ಗೊತ್ತೆ? ಹಾಗೆಂದು ನೀವು ಡಿನ್ನರ್‌ಗೆ ಹೋಗುವುದಿಲ್ಲವೇ? ನೀವು ಏನೂ ತಿನ್ನದೆ ಮನೆಯಲ್ಲಿಯೇ ಕುಳಿದು ದುಃಖಿಸುತ್ತೀರೆ? ನನ್ನ ಸಂದರ್ಶನ, ಸ್ಟೋರಿ ಅರ್ಧಸತ್ಯ, ಸುಳ್ಳುಗಳಿಂದ ಕೂಡಿದ್ದು ಇತರರಿಗೆ ನೋವು ನೀಡಿದೆ ಎಂದು ನೀವು ಉಳಿದೆಲ್ಲಾ ದಿನ ದುಃಖಿಸುತ್ತೀರಾ? ನಾಲ್ಕು ತಿಂಗಳ ಶ್ರಮದ ನಂತರ ಊಟ ಮಾಡಿದ್ದು ತಪ್ಪಲ್ಲ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯ ಅಶೋಕ ಚಕ್ರದ ಕೆಳಗೆ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್‌ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name God; ಸಾಕ್ಷ್ಯಚಿತ್ರ ನೋಡಿ

ರಂಜನ್‌ ಗೊಗೊಯ್ ಅವರ ಆತ್ಮಚರಿತ್ರೆಯಲ್ಲಿರುವ ಒಂದು ಪುಟದ ಚಿತ್ರ

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...