HomeಅಂಕಣಗಳುKarnataka against SIRಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

- Advertisement -
- Advertisement -

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಚುನಾವಣಾ ಆಯೋಗದ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಫಾರ್ಮ್ ಅನ್ನು ಹಸ್ತಾಂತರಿಸುವ ಮೂಲಕ ರಾಜ್ಯಾದ್ಯಂತ ನಡೆಯಲಿರುವ ಈ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಅಭಿಯಾನವು ಜುಲೈ 29 ರವರೆಗೆ ಮುಂದುವರಿಯಲಿದೆ.

ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಅರ್ಹ ನಾಗರಿಕರೆಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬೇಕು, ಇದುವರೆಗೆ ಹೆಸರನ್ನು ನೋಂದಾಯಿಸದವರು ತಕ್ಷಣವೇ ನೋಂದಣಿ ಮಾಡಿಕೊಳ್ಳಬೇಕು ಮತ್ತು ಯಾವುದೇ ಗೊಂದಲವಿಲ್ಲದೆ ಪರಿಶೀಲನೆ ಪ್ರಕ್ರಿಯೆ ನಡೆಯಲು ತಮ್ಮ ವೈಯಕ್ತಿಕ ವಿವರಗಳು ಹಾಗೂ ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕು (ಅಪ್‌ಡೇಟ್) ಎಂದು ಕರೆ ನೀಡಿದರು.

ರಾಮನಗರ ಅಧಿಕಾರಿಗಳು ನನ್ನ ಮನೆಗೆ ಬಂದಿದ್ದರು:

“ಇಂದು ನನ್ನ ಸ್ವಕ್ಷೇತ್ರವಾದ ರಾಮನಗರ ಜಿಲ್ಲೆಯ ಅಧಿಕಾರಿಗಳು ನನ್ನ ಮನೆಗೆ ಬಂದಿದ್ದರು. ನನಗೇ ಎಲ್ಲಾ ವಿವರಗಳನ್ನು ದಾಖಲಿಸುವುದು ಸ್ವಲ್ಪ ಕಷ್ಟ ಎನಿಸಿತು. ಅಧಿಕಾರಿಗಳು ಈ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನವನ್ನು ನಮ್ಮಿಂದಲೇ ಆರಂಭಿಸಿದ್ದಾರೆ. ನಾನು ಫಾರ್ಮ್ ಭರ್ತಿ ಮಾಡಿ ಸಹಿ ಮಾಡಿಕೊಟ್ಟಿದ್ದೇನೆ,” ಎಂದು ಹೇಳಿದರು.

ಒಟಿಪಿ (OTP) ಆಧಾರಿತ ಪರಿಶೀಲನೆಗಾಗಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ನೀಡುವುದು ಎಷ್ಟು ಮುಖ್ಯ ಎಂಬುದನ್ನು ಮುಖ್ಯಮಂತ್ರಿಗಳು ಒತ್ತಿ ಹೇಳಿದರು. “ಒಂದು ವೇಳೆ ನಿಮ್ಮ ಬಳಿ ಹಳೆಯ ಮೊಬೈಲ್ ಸಂಖ್ಯೆ ಇಲ್ಲದಿದ್ದರೆ, ಅಧಿಕಾರಿಗಳಿಗೆ ನಿಮ್ಮ ಹೊಸ ನಂಬರ್ ನೀಡಿ. ಆ ನಂಬರ್‌ಗೆ ಅವರು ಒಟಿಪಿ ಕಳುಹಿಸುತ್ತಾರೆ. ಇದರ ಮೂಲಕ ನೀವು ನಿಮ್ಮ ಹೆಸರು, ವಿಳಾಸದ ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದು ಹಾಗೂ ಫೋಟೋವನ್ನು ಸಹ ಅಪ್‌ಡೇಟ್ ಮಾಡಬಹುದು. ಬಿಎಲ್‌ಒ (BLO), ಬಿಎಲ್‌ಎ (BLA) ಮತ್ತು ಮೇಲ್ವಿಚಾರಕರು ಈಗಾಗಲೇ ವಾಟ್ಸಾಪ್ ಗ್ರೂಪ್‌ಗಳನ್ನು ರಚಿಸಿದ್ದಾರೆ. ನೀವು ಸಹ ಒಂದು ಕೌಟುಂಬಿಕ ಗ್ರೂಪ್ ರಚಿಸಿ ಅಲ್ಲಿ ಮಾಹಿತಿಯನ್ನು ಹಂಚಿಕೊಳ್ಳಬಹುದು,” ಎಂದರು.

ಜುಲೈ 29 ರೊಳಗೆ ಪ್ರಕ್ರಿಯೆ ಮುಗಿಸಲು ಮನವಿ:

ನಿಗದಿತ ಗಡುವಿನೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮತ್ತು ಚುನಾವಣಾ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಶಿವಕುಮಾರ್ ಅವರು ನಾಗರಿಕರಲ್ಲಿ ಮನವಿ ಮಾಡಿದರು. “ಒಂದು ವೇಳೆ ನೀವು ಮನೆಯಲ್ಲಿ ಇಲ್ಲದಿದ್ದರೆ, ಸರಿಯಾದ ವಿವರಗಳನ್ನು ಹೊಂದಿರುವ ಕುಟುಂಬದ ಯಾವುದೇ ಜವಾಬ್ದಾರಿಯುತ ಸದಸ್ಯರು ಫಾರ್ಮ್‌ಗೆ ಸಹಿ ಮಾಡಬಹುದು. ಮುಂದಿನ ಏಳು ದಿನಗಳಲ್ಲಿ ಎಲ್ಲಾ ಮನೆಗಳಿಗೂ ಈ ದಾಖಲಾತಿ ಫಾರ್ಮ್‌ಗಳನ್ನು ವಿತರಿಸಲಾಗುವುದು. ನೀವು ಅದನ್ನು ಭರ್ತಿ ಮಾಡಿ ಜುಲೈ 29 ರೊಳಗೆ ಹಿಂತಿರುಗಿಸಬೇಕು. ಅನೇಕ ಜನರು ತಮ್ಮ ಫೋನ್ ನಂಬರ್ ಬದಲಾಯಿಸಿದ್ದಾರೆ, ನೀವು ನಿಮ್ಮ ಹೊಸ ನಂಬರ್ ಅನ್ನೇ ನೀಡಬೇಕು. ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈ ಪ್ರಯತ್ನ ಮಾಡಲೇಬೇಕು,” ಎಂದು ಅವರು ಹೇಳಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಹಾಗೇ ಮುಂದುವರಿಯಲು ಪೂರಕವಾಗಿ, ಅಗತ್ಯವಿರುವ ಕಡೆಗಳಲ್ಲಿ ವಾಸಸ್ಥಳ ದೃಢೀಕರಣ ಪತ್ರ ಅಥವಾ ಜಾತಿ ಪ್ರಮಾಣಪತ್ರದಂತಹ ಪರ್ಯಾಯ ದಾಖಲೆಗಳನ್ನು ಸಹ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

“2002 ರಿಂದ ಮತದಾನ ಮಾಡುತ್ತಿರುವವರು ಹಾಗೂ ಹೊಸ ಮತದಾರರಿಗೆ ಅಗತ್ಯವಿರುವ ಪ್ರಮಾಣಪತ್ರಗಳನ್ನು ಒದಗಿಸಲು ನಾವು ಅವಕಾಶ ಕಲ್ಪಿಸಿದ್ದೇವೆ. ನಮ್ಮ ಬಳಿ ಎಲ್ಲಾ ದಾಖಲೆಗಳು ಇಲ್ಲದೇ ಇರಬಹುದು, ಆದರೆ ಚುನಾವಣಾ ಆಯೋಗದ ಕೋರಿಕೆಯ ಮೇರೆಗೆ ವಾಸಸ್ಥಳ ಪ್ರಮಾಣಪತ್ರ ಅಥವಾ ಜಾತಿ ಪ್ರಮಾಣಪತ್ರವನ್ನು ನೀಡಬಹುದು. ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದು ವಿನಂತಿಸುತ್ತೇನೆ. ಒಂದು ವೇಳೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಭವಿಷ್ಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ನಿಮಗೆ ಕಷ್ಟವಾಗಬಹುದು,” ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...