Homeಮುಖಪುಟದೂರದರ್ಶನದಲ್ಲಿ ಇಂದಿನಿಂದ ರಾಮಾಯಣ - ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ ಪ್ರೇಕ್ಷಕರಿಗೆ ‘ರಾಮಾಯಣ’ ಮತ್ತು ‘ಮಹಾಭಾರತ’ ಮಹಾಕಾವ್ಯಗಳ ಧಾರವಾಹಿಯನ್ನು ಮರಳಿ ತರುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಮತ್ತು ಬಿ.ಆರ್.ಚೋಪ್ರಾ ನಿರ್ದೇಶನದ ‘ಮಹಾಭಾರತ್’ ಪ್ರಸಾರವನ್ನು ಕೋರಿದ್ದರು. ಮೂರು ದಿನಗಳ ಹಿಂದೆ ಪ್ರಸಾರ್ ಭಾರತಿ ಸಿಇಒ ಶಶಿ ಶೇಖರ್ ವೆಂಪತಿ ಅವರು “ಇದರ ಮೇಲೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜಾವಡೇಕರ್ ಟ್ವೀಟ್ ಮಾಡಿ “ಮಹಾಭಾರತ ಮತ್ತು ರಾಮಾಯಣ ನೋಡಲು ಇಂದು ಮತ್ತು ಪ್ರತಿದಿನ ಡಿಡಿ ನ್ಯಾಷನಲ್ ಹಾಗೂ ಡಿಡಿ ಭಾರತಿಗೆ ದಯವಿಟ್ಟು ಟ್ಯೂನ್ ಮಾಡಿ” ಎಂದು ಹೇಳಿದ್ದಾರೆ.

 

“ಡಿಡಿ ಅಧಿಕಾರಿಗಳ ಸಮರ್ಪಿತ ತಂಡವು ನಿನ್ನೆಯಿಂದ ರಾತ್ರಿಯಿಡೀ ಅವರ ಮನೆ ಮತ್ತು ಕುಟುಂಬಗಳಿಂದ ದೂರವಿದ್ದು ಈ ಕೆಲಸ ಮಾಡಿದರು. ವೀಕ್ಷಕರ ಅಪಾರ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಲು ಮಹಾಕಾವ್ಯಗಳನ್ನು ವೀಕ್ಷಿಸಿ” ಎಂದು ಅವರು ಮನವಿ ಮಾಡಿದ್ದಾರೆ.

‘ರಾಮಾಯಣ’ ಮೊದಲ ಬಾರಿಗೆ ದೂರದರ್ಶನದಲ್ಲಿ 1987 ರಲ್ಲಿ ಪ್ರಸಾರವಾಯಿತು ಮತ್ತು ದೇಶಾದ್ಯಂತ ಭಾರಿ ವೀಕ್ಷಕರನ್ನು ಹೊಂದಿತ್ತು. ಇದರಲ್ಲಿ ಶ್ರೀರಾಮನ ಪಾತ್ರದಲ್ಲಿ ಅರುಣ್ ಗೋವಿಲ್ ಮತ್ತು ಸೀತಾ ಪಾತ್ರದಲ್ಲಿ ದೀಪಿಕಾ ಚಿಖಲಿಯಾ, ಹನುಮಂತನ ಪಾತ್ರದಲ್ಲಿ ದಾರಾ ಸಿಂಗ್, ಮಂಥಾರ ಪಾತ್ರದಲ್ಲಿ ಲಲಿತಾ ಪವಾರ್, ವಿಜಯ್ ಅರೋರಾ ಇಂದ್ರಜಿತ್ ಪಾತ್ರದಲ್ಲಿ, ಅರವಿಂದ ತ್ರಿವೇದಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಸಾಗರ್ ಆರ್ಟ್ಸ್ ತೆರೆಗೆ ತಂದಿತ್ತು. ಹಾಗೆಯೆ ‘ಮಹಾಭಾರತ’ ಮೊದಲ ಬಾರಿಗೆ 1988 ರಲ್ಲಿ ಪ್ರಸಾರವಾಯಿತು, ಇದು ಅನೇಕ ನಟರನ್ನು ಅಪ್ರತಿಮ ಸ್ಥಾನಮಾನವನ್ನು ಗಳಿಸುವಂತೆ ಮಾಡಿತು.

ಇದೇ ಸಂದರ್ಭದಲ್ಲಿ ಸಚಿವರ ಈ ಕ್ರಮಕ್ಕೆ ಅಷ್ಟೇ ವಿರೋಧವೂ ಸಹ ವ್ಯಕ್ತವಾಗಿದೆ. ನಮಗೆ ಸದ್ಯಕ್ಕೆ ಬೇಕಿರುವುದು ಕೊರೊನಾ ಪರೀಕ್ಷಾ ಕಿಟ್‌ಗಳು, ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು, ಉತ್ತಮ ಆಸ್ಪತ್ರೆಗಳಾಗಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಅನಿವಾರ್ಯವಲ್ಲದರ ಕಡೆ ಗಮನಕೊಡುತ್ತಿದೆ ಎಂದು ಹಲವರು ದೂರಿದ್ದಾರೆ.

ಮತ್ತೊಂದು ನಿರುಪಯುಕ್ತ ಗ್ಯಾಂಗ್ ಇದು. ಯಾರಾದರೂ ರಾಮಾಯಣ ಮಹಾಭಾರತ ನೋಡಲು ಬಯಸಿದರೆ ಅವರು ಯಾವಾಗಲೂ ಯುಟ್ಯೂಬ್‌ನಲ್ಲಿ ಎಲ್ಲಾ ಸಂಚಿಕೆಗಳನ್ನು ವೀಕ್ಷಿಸಬಹುದು.
ಬಡವರು ಬಳಲುತ್ತಿದ್ದಾರೆ ಮತ್ತು ಪ್ರಧಾನ ಮಂತ್ರಿ ಕ್ಷೇತ್ರದಲ್ಲಿ ಮಕ್ಕಳು ಹುಲ್ಲು ತಿನ್ನುತ್ತಿದ್ದಾರೆ ಎಂಬುದನ್ನು ನೆನಪಿಡಿ. ನಿಮ್ಮ ಅಶ್ಲೀಲ ಹಿಂದುತ್ವ ಆರಾಧನೆಯನ್ನು ನಿಲ್ಲಿಸಿ ಎಂದು ಸೈಯದ್ ವಾಸನ್‌ ಮೈಕಲ್‌ ಎಂಬುವವರು ಆಗ್ರಹಿಸಿದ್ದಾರೆ.

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...