Homeಮುಖಪುಟದೂರದರ್ಶನದಲ್ಲಿ ಇಂದಿನಿಂದ ರಾಮಾಯಣ - ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ ಪ್ರೇಕ್ಷಕರಿಗೆ ‘ರಾಮಾಯಣ’ ಮತ್ತು ‘ಮಹಾಭಾರತ’ ಮಹಾಕಾವ್ಯಗಳ ಧಾರವಾಹಿಯನ್ನು ಮರಳಿ ತರುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಮತ್ತು ಬಿ.ಆರ್.ಚೋಪ್ರಾ ನಿರ್ದೇಶನದ ‘ಮಹಾಭಾರತ್’ ಪ್ರಸಾರವನ್ನು ಕೋರಿದ್ದರು. ಮೂರು ದಿನಗಳ ಹಿಂದೆ ಪ್ರಸಾರ್ ಭಾರತಿ ಸಿಇಒ ಶಶಿ ಶೇಖರ್ ವೆಂಪತಿ ಅವರು “ಇದರ ಮೇಲೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜಾವಡೇಕರ್ ಟ್ವೀಟ್ ಮಾಡಿ “ಮಹಾಭಾರತ ಮತ್ತು ರಾಮಾಯಣ ನೋಡಲು ಇಂದು ಮತ್ತು ಪ್ರತಿದಿನ ಡಿಡಿ ನ್ಯಾಷನಲ್ ಹಾಗೂ ಡಿಡಿ ಭಾರತಿಗೆ ದಯವಿಟ್ಟು ಟ್ಯೂನ್ ಮಾಡಿ” ಎಂದು ಹೇಳಿದ್ದಾರೆ.

 

“ಡಿಡಿ ಅಧಿಕಾರಿಗಳ ಸಮರ್ಪಿತ ತಂಡವು ನಿನ್ನೆಯಿಂದ ರಾತ್ರಿಯಿಡೀ ಅವರ ಮನೆ ಮತ್ತು ಕುಟುಂಬಗಳಿಂದ ದೂರವಿದ್ದು ಈ ಕೆಲಸ ಮಾಡಿದರು. ವೀಕ್ಷಕರ ಅಪಾರ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಲು ಮಹಾಕಾವ್ಯಗಳನ್ನು ವೀಕ್ಷಿಸಿ” ಎಂದು ಅವರು ಮನವಿ ಮಾಡಿದ್ದಾರೆ.

‘ರಾಮಾಯಣ’ ಮೊದಲ ಬಾರಿಗೆ ದೂರದರ್ಶನದಲ್ಲಿ 1987 ರಲ್ಲಿ ಪ್ರಸಾರವಾಯಿತು ಮತ್ತು ದೇಶಾದ್ಯಂತ ಭಾರಿ ವೀಕ್ಷಕರನ್ನು ಹೊಂದಿತ್ತು. ಇದರಲ್ಲಿ ಶ್ರೀರಾಮನ ಪಾತ್ರದಲ್ಲಿ ಅರುಣ್ ಗೋವಿಲ್ ಮತ್ತು ಸೀತಾ ಪಾತ್ರದಲ್ಲಿ ದೀಪಿಕಾ ಚಿಖಲಿಯಾ, ಹನುಮಂತನ ಪಾತ್ರದಲ್ಲಿ ದಾರಾ ಸಿಂಗ್, ಮಂಥಾರ ಪಾತ್ರದಲ್ಲಿ ಲಲಿತಾ ಪವಾರ್, ವಿಜಯ್ ಅರೋರಾ ಇಂದ್ರಜಿತ್ ಪಾತ್ರದಲ್ಲಿ, ಅರವಿಂದ ತ್ರಿವೇದಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಸಾಗರ್ ಆರ್ಟ್ಸ್ ತೆರೆಗೆ ತಂದಿತ್ತು. ಹಾಗೆಯೆ ‘ಮಹಾಭಾರತ’ ಮೊದಲ ಬಾರಿಗೆ 1988 ರಲ್ಲಿ ಪ್ರಸಾರವಾಯಿತು, ಇದು ಅನೇಕ ನಟರನ್ನು ಅಪ್ರತಿಮ ಸ್ಥಾನಮಾನವನ್ನು ಗಳಿಸುವಂತೆ ಮಾಡಿತು.

ಇದೇ ಸಂದರ್ಭದಲ್ಲಿ ಸಚಿವರ ಈ ಕ್ರಮಕ್ಕೆ ಅಷ್ಟೇ ವಿರೋಧವೂ ಸಹ ವ್ಯಕ್ತವಾಗಿದೆ. ನಮಗೆ ಸದ್ಯಕ್ಕೆ ಬೇಕಿರುವುದು ಕೊರೊನಾ ಪರೀಕ್ಷಾ ಕಿಟ್‌ಗಳು, ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು, ಉತ್ತಮ ಆಸ್ಪತ್ರೆಗಳಾಗಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಅನಿವಾರ್ಯವಲ್ಲದರ ಕಡೆ ಗಮನಕೊಡುತ್ತಿದೆ ಎಂದು ಹಲವರು ದೂರಿದ್ದಾರೆ.

ಮತ್ತೊಂದು ನಿರುಪಯುಕ್ತ ಗ್ಯಾಂಗ್ ಇದು. ಯಾರಾದರೂ ರಾಮಾಯಣ ಮಹಾಭಾರತ ನೋಡಲು ಬಯಸಿದರೆ ಅವರು ಯಾವಾಗಲೂ ಯುಟ್ಯೂಬ್‌ನಲ್ಲಿ ಎಲ್ಲಾ ಸಂಚಿಕೆಗಳನ್ನು ವೀಕ್ಷಿಸಬಹುದು.
ಬಡವರು ಬಳಲುತ್ತಿದ್ದಾರೆ ಮತ್ತು ಪ್ರಧಾನ ಮಂತ್ರಿ ಕ್ಷೇತ್ರದಲ್ಲಿ ಮಕ್ಕಳು ಹುಲ್ಲು ತಿನ್ನುತ್ತಿದ್ದಾರೆ ಎಂಬುದನ್ನು ನೆನಪಿಡಿ. ನಿಮ್ಮ ಅಶ್ಲೀಲ ಹಿಂದುತ್ವ ಆರಾಧನೆಯನ್ನು ನಿಲ್ಲಿಸಿ ಎಂದು ಸೈಯದ್ ವಾಸನ್‌ ಮೈಕಲ್‌ ಎಂಬುವವರು ಆಗ್ರಹಿಸಿದ್ದಾರೆ.

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...