Homeಮುಖಪುಟದೂರದರ್ಶನದಲ್ಲಿ ಇಂದಿನಿಂದ ರಾಮಾಯಣ - ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ ಪ್ರೇಕ್ಷಕರಿಗೆ ‘ರಾಮಾಯಣ’ ಮತ್ತು ‘ಮಹಾಭಾರತ’ ಮಹಾಕಾವ್ಯಗಳ ಧಾರವಾಹಿಯನ್ನು ಮರಳಿ ತರುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಮತ್ತು ಬಿ.ಆರ್.ಚೋಪ್ರಾ ನಿರ್ದೇಶನದ ‘ಮಹಾಭಾರತ್’ ಪ್ರಸಾರವನ್ನು ಕೋರಿದ್ದರು. ಮೂರು ದಿನಗಳ ಹಿಂದೆ ಪ್ರಸಾರ್ ಭಾರತಿ ಸಿಇಒ ಶಶಿ ಶೇಖರ್ ವೆಂಪತಿ ಅವರು “ಇದರ ಮೇಲೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜಾವಡೇಕರ್ ಟ್ವೀಟ್ ಮಾಡಿ “ಮಹಾಭಾರತ ಮತ್ತು ರಾಮಾಯಣ ನೋಡಲು ಇಂದು ಮತ್ತು ಪ್ರತಿದಿನ ಡಿಡಿ ನ್ಯಾಷನಲ್ ಹಾಗೂ ಡಿಡಿ ಭಾರತಿಗೆ ದಯವಿಟ್ಟು ಟ್ಯೂನ್ ಮಾಡಿ” ಎಂದು ಹೇಳಿದ್ದಾರೆ.

 

“ಡಿಡಿ ಅಧಿಕಾರಿಗಳ ಸಮರ್ಪಿತ ತಂಡವು ನಿನ್ನೆಯಿಂದ ರಾತ್ರಿಯಿಡೀ ಅವರ ಮನೆ ಮತ್ತು ಕುಟುಂಬಗಳಿಂದ ದೂರವಿದ್ದು ಈ ಕೆಲಸ ಮಾಡಿದರು. ವೀಕ್ಷಕರ ಅಪಾರ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಲು ಮಹಾಕಾವ್ಯಗಳನ್ನು ವೀಕ್ಷಿಸಿ” ಎಂದು ಅವರು ಮನವಿ ಮಾಡಿದ್ದಾರೆ.

‘ರಾಮಾಯಣ’ ಮೊದಲ ಬಾರಿಗೆ ದೂರದರ್ಶನದಲ್ಲಿ 1987 ರಲ್ಲಿ ಪ್ರಸಾರವಾಯಿತು ಮತ್ತು ದೇಶಾದ್ಯಂತ ಭಾರಿ ವೀಕ್ಷಕರನ್ನು ಹೊಂದಿತ್ತು. ಇದರಲ್ಲಿ ಶ್ರೀರಾಮನ ಪಾತ್ರದಲ್ಲಿ ಅರುಣ್ ಗೋವಿಲ್ ಮತ್ತು ಸೀತಾ ಪಾತ್ರದಲ್ಲಿ ದೀಪಿಕಾ ಚಿಖಲಿಯಾ, ಹನುಮಂತನ ಪಾತ್ರದಲ್ಲಿ ದಾರಾ ಸಿಂಗ್, ಮಂಥಾರ ಪಾತ್ರದಲ್ಲಿ ಲಲಿತಾ ಪವಾರ್, ವಿಜಯ್ ಅರೋರಾ ಇಂದ್ರಜಿತ್ ಪಾತ್ರದಲ್ಲಿ, ಅರವಿಂದ ತ್ರಿವೇದಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಸಾಗರ್ ಆರ್ಟ್ಸ್ ತೆರೆಗೆ ತಂದಿತ್ತು. ಹಾಗೆಯೆ ‘ಮಹಾಭಾರತ’ ಮೊದಲ ಬಾರಿಗೆ 1988 ರಲ್ಲಿ ಪ್ರಸಾರವಾಯಿತು, ಇದು ಅನೇಕ ನಟರನ್ನು ಅಪ್ರತಿಮ ಸ್ಥಾನಮಾನವನ್ನು ಗಳಿಸುವಂತೆ ಮಾಡಿತು.

ಇದೇ ಸಂದರ್ಭದಲ್ಲಿ ಸಚಿವರ ಈ ಕ್ರಮಕ್ಕೆ ಅಷ್ಟೇ ವಿರೋಧವೂ ಸಹ ವ್ಯಕ್ತವಾಗಿದೆ. ನಮಗೆ ಸದ್ಯಕ್ಕೆ ಬೇಕಿರುವುದು ಕೊರೊನಾ ಪರೀಕ್ಷಾ ಕಿಟ್‌ಗಳು, ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು, ಉತ್ತಮ ಆಸ್ಪತ್ರೆಗಳಾಗಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಅನಿವಾರ್ಯವಲ್ಲದರ ಕಡೆ ಗಮನಕೊಡುತ್ತಿದೆ ಎಂದು ಹಲವರು ದೂರಿದ್ದಾರೆ.

ಮತ್ತೊಂದು ನಿರುಪಯುಕ್ತ ಗ್ಯಾಂಗ್ ಇದು. ಯಾರಾದರೂ ರಾಮಾಯಣ ಮಹಾಭಾರತ ನೋಡಲು ಬಯಸಿದರೆ ಅವರು ಯಾವಾಗಲೂ ಯುಟ್ಯೂಬ್‌ನಲ್ಲಿ ಎಲ್ಲಾ ಸಂಚಿಕೆಗಳನ್ನು ವೀಕ್ಷಿಸಬಹುದು.
ಬಡವರು ಬಳಲುತ್ತಿದ್ದಾರೆ ಮತ್ತು ಪ್ರಧಾನ ಮಂತ್ರಿ ಕ್ಷೇತ್ರದಲ್ಲಿ ಮಕ್ಕಳು ಹುಲ್ಲು ತಿನ್ನುತ್ತಿದ್ದಾರೆ ಎಂಬುದನ್ನು ನೆನಪಿಡಿ. ನಿಮ್ಮ ಅಶ್ಲೀಲ ಹಿಂದುತ್ವ ಆರಾಧನೆಯನ್ನು ನಿಲ್ಲಿಸಿ ಎಂದು ಸೈಯದ್ ವಾಸನ್‌ ಮೈಕಲ್‌ ಎಂಬುವವರು ಆಗ್ರಹಿಸಿದ್ದಾರೆ.

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...