Homeಮುಖಪುಟದೂರದರ್ಶನದಲ್ಲಿ ಇಂದಿನಿಂದ ರಾಮಾಯಣ - ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ ಪ್ರೇಕ್ಷಕರಿಗೆ ‘ರಾಮಾಯಣ’ ಮತ್ತು ‘ಮಹಾಭಾರತ’ ಮಹಾಕಾವ್ಯಗಳ ಧಾರವಾಹಿಯನ್ನು ಮರಳಿ ತರುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಮತ್ತು ಬಿ.ಆರ್.ಚೋಪ್ರಾ ನಿರ್ದೇಶನದ ‘ಮಹಾಭಾರತ್’ ಪ್ರಸಾರವನ್ನು ಕೋರಿದ್ದರು. ಮೂರು ದಿನಗಳ ಹಿಂದೆ ಪ್ರಸಾರ್ ಭಾರತಿ ಸಿಇಒ ಶಶಿ ಶೇಖರ್ ವೆಂಪತಿ ಅವರು “ಇದರ ಮೇಲೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜಾವಡೇಕರ್ ಟ್ವೀಟ್ ಮಾಡಿ “ಮಹಾಭಾರತ ಮತ್ತು ರಾಮಾಯಣ ನೋಡಲು ಇಂದು ಮತ್ತು ಪ್ರತಿದಿನ ಡಿಡಿ ನ್ಯಾಷನಲ್ ಹಾಗೂ ಡಿಡಿ ಭಾರತಿಗೆ ದಯವಿಟ್ಟು ಟ್ಯೂನ್ ಮಾಡಿ” ಎಂದು ಹೇಳಿದ್ದಾರೆ.

 

“ಡಿಡಿ ಅಧಿಕಾರಿಗಳ ಸಮರ್ಪಿತ ತಂಡವು ನಿನ್ನೆಯಿಂದ ರಾತ್ರಿಯಿಡೀ ಅವರ ಮನೆ ಮತ್ತು ಕುಟುಂಬಗಳಿಂದ ದೂರವಿದ್ದು ಈ ಕೆಲಸ ಮಾಡಿದರು. ವೀಕ್ಷಕರ ಅಪಾರ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಲು ಮಹಾಕಾವ್ಯಗಳನ್ನು ವೀಕ್ಷಿಸಿ” ಎಂದು ಅವರು ಮನವಿ ಮಾಡಿದ್ದಾರೆ.

‘ರಾಮಾಯಣ’ ಮೊದಲ ಬಾರಿಗೆ ದೂರದರ್ಶನದಲ್ಲಿ 1987 ರಲ್ಲಿ ಪ್ರಸಾರವಾಯಿತು ಮತ್ತು ದೇಶಾದ್ಯಂತ ಭಾರಿ ವೀಕ್ಷಕರನ್ನು ಹೊಂದಿತ್ತು. ಇದರಲ್ಲಿ ಶ್ರೀರಾಮನ ಪಾತ್ರದಲ್ಲಿ ಅರುಣ್ ಗೋವಿಲ್ ಮತ್ತು ಸೀತಾ ಪಾತ್ರದಲ್ಲಿ ದೀಪಿಕಾ ಚಿಖಲಿಯಾ, ಹನುಮಂತನ ಪಾತ್ರದಲ್ಲಿ ದಾರಾ ಸಿಂಗ್, ಮಂಥಾರ ಪಾತ್ರದಲ್ಲಿ ಲಲಿತಾ ಪವಾರ್, ವಿಜಯ್ ಅರೋರಾ ಇಂದ್ರಜಿತ್ ಪಾತ್ರದಲ್ಲಿ, ಅರವಿಂದ ತ್ರಿವೇದಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಸಾಗರ್ ಆರ್ಟ್ಸ್ ತೆರೆಗೆ ತಂದಿತ್ತು. ಹಾಗೆಯೆ ‘ಮಹಾಭಾರತ’ ಮೊದಲ ಬಾರಿಗೆ 1988 ರಲ್ಲಿ ಪ್ರಸಾರವಾಯಿತು, ಇದು ಅನೇಕ ನಟರನ್ನು ಅಪ್ರತಿಮ ಸ್ಥಾನಮಾನವನ್ನು ಗಳಿಸುವಂತೆ ಮಾಡಿತು.

ಇದೇ ಸಂದರ್ಭದಲ್ಲಿ ಸಚಿವರ ಈ ಕ್ರಮಕ್ಕೆ ಅಷ್ಟೇ ವಿರೋಧವೂ ಸಹ ವ್ಯಕ್ತವಾಗಿದೆ. ನಮಗೆ ಸದ್ಯಕ್ಕೆ ಬೇಕಿರುವುದು ಕೊರೊನಾ ಪರೀಕ್ಷಾ ಕಿಟ್‌ಗಳು, ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು, ಉತ್ತಮ ಆಸ್ಪತ್ರೆಗಳಾಗಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಅನಿವಾರ್ಯವಲ್ಲದರ ಕಡೆ ಗಮನಕೊಡುತ್ತಿದೆ ಎಂದು ಹಲವರು ದೂರಿದ್ದಾರೆ.

ಮತ್ತೊಂದು ನಿರುಪಯುಕ್ತ ಗ್ಯಾಂಗ್ ಇದು. ಯಾರಾದರೂ ರಾಮಾಯಣ ಮಹಾಭಾರತ ನೋಡಲು ಬಯಸಿದರೆ ಅವರು ಯಾವಾಗಲೂ ಯುಟ್ಯೂಬ್‌ನಲ್ಲಿ ಎಲ್ಲಾ ಸಂಚಿಕೆಗಳನ್ನು ವೀಕ್ಷಿಸಬಹುದು.
ಬಡವರು ಬಳಲುತ್ತಿದ್ದಾರೆ ಮತ್ತು ಪ್ರಧಾನ ಮಂತ್ರಿ ಕ್ಷೇತ್ರದಲ್ಲಿ ಮಕ್ಕಳು ಹುಲ್ಲು ತಿನ್ನುತ್ತಿದ್ದಾರೆ ಎಂಬುದನ್ನು ನೆನಪಿಡಿ. ನಿಮ್ಮ ಅಶ್ಲೀಲ ಹಿಂದುತ್ವ ಆರಾಧನೆಯನ್ನು ನಿಲ್ಲಿಸಿ ಎಂದು ಸೈಯದ್ ವಾಸನ್‌ ಮೈಕಲ್‌ ಎಂಬುವವರು ಆಗ್ರಹಿಸಿದ್ದಾರೆ.

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...