Homeಮುಖಪುಟದೂರದರ್ಶನದಲ್ಲಿ ಇಂದಿನಿಂದ ರಾಮಾಯಣ - ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ ಪ್ರೇಕ್ಷಕರಿಗೆ ‘ರಾಮಾಯಣ’ ಮತ್ತು ‘ಮಹಾಭಾರತ’ ಮಹಾಕಾವ್ಯಗಳ ಧಾರವಾಹಿಯನ್ನು ಮರಳಿ ತರುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಮತ್ತು ಬಿ.ಆರ್.ಚೋಪ್ರಾ ನಿರ್ದೇಶನದ ‘ಮಹಾಭಾರತ್’ ಪ್ರಸಾರವನ್ನು ಕೋರಿದ್ದರು. ಮೂರು ದಿನಗಳ ಹಿಂದೆ ಪ್ರಸಾರ್ ಭಾರತಿ ಸಿಇಒ ಶಶಿ ಶೇಖರ್ ವೆಂಪತಿ ಅವರು “ಇದರ ಮೇಲೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜಾವಡೇಕರ್ ಟ್ವೀಟ್ ಮಾಡಿ “ಮಹಾಭಾರತ ಮತ್ತು ರಾಮಾಯಣ ನೋಡಲು ಇಂದು ಮತ್ತು ಪ್ರತಿದಿನ ಡಿಡಿ ನ್ಯಾಷನಲ್ ಹಾಗೂ ಡಿಡಿ ಭಾರತಿಗೆ ದಯವಿಟ್ಟು ಟ್ಯೂನ್ ಮಾಡಿ” ಎಂದು ಹೇಳಿದ್ದಾರೆ.

 

“ಡಿಡಿ ಅಧಿಕಾರಿಗಳ ಸಮರ್ಪಿತ ತಂಡವು ನಿನ್ನೆಯಿಂದ ರಾತ್ರಿಯಿಡೀ ಅವರ ಮನೆ ಮತ್ತು ಕುಟುಂಬಗಳಿಂದ ದೂರವಿದ್ದು ಈ ಕೆಲಸ ಮಾಡಿದರು. ವೀಕ್ಷಕರ ಅಪಾರ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಲು ಮಹಾಕಾವ್ಯಗಳನ್ನು ವೀಕ್ಷಿಸಿ” ಎಂದು ಅವರು ಮನವಿ ಮಾಡಿದ್ದಾರೆ.

‘ರಾಮಾಯಣ’ ಮೊದಲ ಬಾರಿಗೆ ದೂರದರ್ಶನದಲ್ಲಿ 1987 ರಲ್ಲಿ ಪ್ರಸಾರವಾಯಿತು ಮತ್ತು ದೇಶಾದ್ಯಂತ ಭಾರಿ ವೀಕ್ಷಕರನ್ನು ಹೊಂದಿತ್ತು. ಇದರಲ್ಲಿ ಶ್ರೀರಾಮನ ಪಾತ್ರದಲ್ಲಿ ಅರುಣ್ ಗೋವಿಲ್ ಮತ್ತು ಸೀತಾ ಪಾತ್ರದಲ್ಲಿ ದೀಪಿಕಾ ಚಿಖಲಿಯಾ, ಹನುಮಂತನ ಪಾತ್ರದಲ್ಲಿ ದಾರಾ ಸಿಂಗ್, ಮಂಥಾರ ಪಾತ್ರದಲ್ಲಿ ಲಲಿತಾ ಪವಾರ್, ವಿಜಯ್ ಅರೋರಾ ಇಂದ್ರಜಿತ್ ಪಾತ್ರದಲ್ಲಿ, ಅರವಿಂದ ತ್ರಿವೇದಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಸಾಗರ್ ಆರ್ಟ್ಸ್ ತೆರೆಗೆ ತಂದಿತ್ತು. ಹಾಗೆಯೆ ‘ಮಹಾಭಾರತ’ ಮೊದಲ ಬಾರಿಗೆ 1988 ರಲ್ಲಿ ಪ್ರಸಾರವಾಯಿತು, ಇದು ಅನೇಕ ನಟರನ್ನು ಅಪ್ರತಿಮ ಸ್ಥಾನಮಾನವನ್ನು ಗಳಿಸುವಂತೆ ಮಾಡಿತು.

ಇದೇ ಸಂದರ್ಭದಲ್ಲಿ ಸಚಿವರ ಈ ಕ್ರಮಕ್ಕೆ ಅಷ್ಟೇ ವಿರೋಧವೂ ಸಹ ವ್ಯಕ್ತವಾಗಿದೆ. ನಮಗೆ ಸದ್ಯಕ್ಕೆ ಬೇಕಿರುವುದು ಕೊರೊನಾ ಪರೀಕ್ಷಾ ಕಿಟ್‌ಗಳು, ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು, ಉತ್ತಮ ಆಸ್ಪತ್ರೆಗಳಾಗಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಅನಿವಾರ್ಯವಲ್ಲದರ ಕಡೆ ಗಮನಕೊಡುತ್ತಿದೆ ಎಂದು ಹಲವರು ದೂರಿದ್ದಾರೆ.

ಮತ್ತೊಂದು ನಿರುಪಯುಕ್ತ ಗ್ಯಾಂಗ್ ಇದು. ಯಾರಾದರೂ ರಾಮಾಯಣ ಮಹಾಭಾರತ ನೋಡಲು ಬಯಸಿದರೆ ಅವರು ಯಾವಾಗಲೂ ಯುಟ್ಯೂಬ್‌ನಲ್ಲಿ ಎಲ್ಲಾ ಸಂಚಿಕೆಗಳನ್ನು ವೀಕ್ಷಿಸಬಹುದು.
ಬಡವರು ಬಳಲುತ್ತಿದ್ದಾರೆ ಮತ್ತು ಪ್ರಧಾನ ಮಂತ್ರಿ ಕ್ಷೇತ್ರದಲ್ಲಿ ಮಕ್ಕಳು ಹುಲ್ಲು ತಿನ್ನುತ್ತಿದ್ದಾರೆ ಎಂಬುದನ್ನು ನೆನಪಿಡಿ. ನಿಮ್ಮ ಅಶ್ಲೀಲ ಹಿಂದುತ್ವ ಆರಾಧನೆಯನ್ನು ನಿಲ್ಲಿಸಿ ಎಂದು ಸೈಯದ್ ವಾಸನ್‌ ಮೈಕಲ್‌ ಎಂಬುವವರು ಆಗ್ರಹಿಸಿದ್ದಾರೆ.

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...