Homeಮುಖಪುಟದೂರದರ್ಶನದಲ್ಲಿ ಇಂದಿನಿಂದ ರಾಮಾಯಣ - ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ ಪ್ರೇಕ್ಷಕರಿಗೆ ‘ರಾಮಾಯಣ’ ಮತ್ತು ‘ಮಹಾಭಾರತ’ ಮಹಾಕಾವ್ಯಗಳ ಧಾರವಾಹಿಯನ್ನು ಮರಳಿ ತರುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಮತ್ತು ಬಿ.ಆರ್.ಚೋಪ್ರಾ ನಿರ್ದೇಶನದ ‘ಮಹಾಭಾರತ್’ ಪ್ರಸಾರವನ್ನು ಕೋರಿದ್ದರು. ಮೂರು ದಿನಗಳ ಹಿಂದೆ ಪ್ರಸಾರ್ ಭಾರತಿ ಸಿಇಒ ಶಶಿ ಶೇಖರ್ ವೆಂಪತಿ ಅವರು “ಇದರ ಮೇಲೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜಾವಡೇಕರ್ ಟ್ವೀಟ್ ಮಾಡಿ “ಮಹಾಭಾರತ ಮತ್ತು ರಾಮಾಯಣ ನೋಡಲು ಇಂದು ಮತ್ತು ಪ್ರತಿದಿನ ಡಿಡಿ ನ್ಯಾಷನಲ್ ಹಾಗೂ ಡಿಡಿ ಭಾರತಿಗೆ ದಯವಿಟ್ಟು ಟ್ಯೂನ್ ಮಾಡಿ” ಎಂದು ಹೇಳಿದ್ದಾರೆ.

 

“ಡಿಡಿ ಅಧಿಕಾರಿಗಳ ಸಮರ್ಪಿತ ತಂಡವು ನಿನ್ನೆಯಿಂದ ರಾತ್ರಿಯಿಡೀ ಅವರ ಮನೆ ಮತ್ತು ಕುಟುಂಬಗಳಿಂದ ದೂರವಿದ್ದು ಈ ಕೆಲಸ ಮಾಡಿದರು. ವೀಕ್ಷಕರ ಅಪಾರ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಲು ಮಹಾಕಾವ್ಯಗಳನ್ನು ವೀಕ್ಷಿಸಿ” ಎಂದು ಅವರು ಮನವಿ ಮಾಡಿದ್ದಾರೆ.

‘ರಾಮಾಯಣ’ ಮೊದಲ ಬಾರಿಗೆ ದೂರದರ್ಶನದಲ್ಲಿ 1987 ರಲ್ಲಿ ಪ್ರಸಾರವಾಯಿತು ಮತ್ತು ದೇಶಾದ್ಯಂತ ಭಾರಿ ವೀಕ್ಷಕರನ್ನು ಹೊಂದಿತ್ತು. ಇದರಲ್ಲಿ ಶ್ರೀರಾಮನ ಪಾತ್ರದಲ್ಲಿ ಅರುಣ್ ಗೋವಿಲ್ ಮತ್ತು ಸೀತಾ ಪಾತ್ರದಲ್ಲಿ ದೀಪಿಕಾ ಚಿಖಲಿಯಾ, ಹನುಮಂತನ ಪಾತ್ರದಲ್ಲಿ ದಾರಾ ಸಿಂಗ್, ಮಂಥಾರ ಪಾತ್ರದಲ್ಲಿ ಲಲಿತಾ ಪವಾರ್, ವಿಜಯ್ ಅರೋರಾ ಇಂದ್ರಜಿತ್ ಪಾತ್ರದಲ್ಲಿ, ಅರವಿಂದ ತ್ರಿವೇದಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಸಾಗರ್ ಆರ್ಟ್ಸ್ ತೆರೆಗೆ ತಂದಿತ್ತು. ಹಾಗೆಯೆ ‘ಮಹಾಭಾರತ’ ಮೊದಲ ಬಾರಿಗೆ 1988 ರಲ್ಲಿ ಪ್ರಸಾರವಾಯಿತು, ಇದು ಅನೇಕ ನಟರನ್ನು ಅಪ್ರತಿಮ ಸ್ಥಾನಮಾನವನ್ನು ಗಳಿಸುವಂತೆ ಮಾಡಿತು.

ಇದೇ ಸಂದರ್ಭದಲ್ಲಿ ಸಚಿವರ ಈ ಕ್ರಮಕ್ಕೆ ಅಷ್ಟೇ ವಿರೋಧವೂ ಸಹ ವ್ಯಕ್ತವಾಗಿದೆ. ನಮಗೆ ಸದ್ಯಕ್ಕೆ ಬೇಕಿರುವುದು ಕೊರೊನಾ ಪರೀಕ್ಷಾ ಕಿಟ್‌ಗಳು, ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು, ಉತ್ತಮ ಆಸ್ಪತ್ರೆಗಳಾಗಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಅನಿವಾರ್ಯವಲ್ಲದರ ಕಡೆ ಗಮನಕೊಡುತ್ತಿದೆ ಎಂದು ಹಲವರು ದೂರಿದ್ದಾರೆ.

ಮತ್ತೊಂದು ನಿರುಪಯುಕ್ತ ಗ್ಯಾಂಗ್ ಇದು. ಯಾರಾದರೂ ರಾಮಾಯಣ ಮಹಾಭಾರತ ನೋಡಲು ಬಯಸಿದರೆ ಅವರು ಯಾವಾಗಲೂ ಯುಟ್ಯೂಬ್‌ನಲ್ಲಿ ಎಲ್ಲಾ ಸಂಚಿಕೆಗಳನ್ನು ವೀಕ್ಷಿಸಬಹುದು.
ಬಡವರು ಬಳಲುತ್ತಿದ್ದಾರೆ ಮತ್ತು ಪ್ರಧಾನ ಮಂತ್ರಿ ಕ್ಷೇತ್ರದಲ್ಲಿ ಮಕ್ಕಳು ಹುಲ್ಲು ತಿನ್ನುತ್ತಿದ್ದಾರೆ ಎಂಬುದನ್ನು ನೆನಪಿಡಿ. ನಿಮ್ಮ ಅಶ್ಲೀಲ ಹಿಂದುತ್ವ ಆರಾಧನೆಯನ್ನು ನಿಲ್ಲಿಸಿ ಎಂದು ಸೈಯದ್ ವಾಸನ್‌ ಮೈಕಲ್‌ ಎಂಬುವವರು ಆಗ್ರಹಿಸಿದ್ದಾರೆ.

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...