Homeಮುಖಪುಟದೂರದರ್ಶನದಲ್ಲಿ ಇಂದಿನಿಂದ ರಾಮಾಯಣ - ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ ಪ್ರೇಕ್ಷಕರಿಗೆ ‘ರಾಮಾಯಣ’ ಮತ್ತು ‘ಮಹಾಭಾರತ’ ಮಹಾಕಾವ್ಯಗಳ ಧಾರವಾಹಿಯನ್ನು ಮರಳಿ ತರುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಮತ್ತು ಬಿ.ಆರ್.ಚೋಪ್ರಾ ನಿರ್ದೇಶನದ ‘ಮಹಾಭಾರತ್’ ಪ್ರಸಾರವನ್ನು ಕೋರಿದ್ದರು. ಮೂರು ದಿನಗಳ ಹಿಂದೆ ಪ್ರಸಾರ್ ಭಾರತಿ ಸಿಇಒ ಶಶಿ ಶೇಖರ್ ವೆಂಪತಿ ಅವರು “ಇದರ ಮೇಲೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜಾವಡೇಕರ್ ಟ್ವೀಟ್ ಮಾಡಿ “ಮಹಾಭಾರತ ಮತ್ತು ರಾಮಾಯಣ ನೋಡಲು ಇಂದು ಮತ್ತು ಪ್ರತಿದಿನ ಡಿಡಿ ನ್ಯಾಷನಲ್ ಹಾಗೂ ಡಿಡಿ ಭಾರತಿಗೆ ದಯವಿಟ್ಟು ಟ್ಯೂನ್ ಮಾಡಿ” ಎಂದು ಹೇಳಿದ್ದಾರೆ.

 

“ಡಿಡಿ ಅಧಿಕಾರಿಗಳ ಸಮರ್ಪಿತ ತಂಡವು ನಿನ್ನೆಯಿಂದ ರಾತ್ರಿಯಿಡೀ ಅವರ ಮನೆ ಮತ್ತು ಕುಟುಂಬಗಳಿಂದ ದೂರವಿದ್ದು ಈ ಕೆಲಸ ಮಾಡಿದರು. ವೀಕ್ಷಕರ ಅಪಾರ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಲು ಮಹಾಕಾವ್ಯಗಳನ್ನು ವೀಕ್ಷಿಸಿ” ಎಂದು ಅವರು ಮನವಿ ಮಾಡಿದ್ದಾರೆ.

‘ರಾಮಾಯಣ’ ಮೊದಲ ಬಾರಿಗೆ ದೂರದರ್ಶನದಲ್ಲಿ 1987 ರಲ್ಲಿ ಪ್ರಸಾರವಾಯಿತು ಮತ್ತು ದೇಶಾದ್ಯಂತ ಭಾರಿ ವೀಕ್ಷಕರನ್ನು ಹೊಂದಿತ್ತು. ಇದರಲ್ಲಿ ಶ್ರೀರಾಮನ ಪಾತ್ರದಲ್ಲಿ ಅರುಣ್ ಗೋವಿಲ್ ಮತ್ತು ಸೀತಾ ಪಾತ್ರದಲ್ಲಿ ದೀಪಿಕಾ ಚಿಖಲಿಯಾ, ಹನುಮಂತನ ಪಾತ್ರದಲ್ಲಿ ದಾರಾ ಸಿಂಗ್, ಮಂಥಾರ ಪಾತ್ರದಲ್ಲಿ ಲಲಿತಾ ಪವಾರ್, ವಿಜಯ್ ಅರೋರಾ ಇಂದ್ರಜಿತ್ ಪಾತ್ರದಲ್ಲಿ, ಅರವಿಂದ ತ್ರಿವೇದಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಸಾಗರ್ ಆರ್ಟ್ಸ್ ತೆರೆಗೆ ತಂದಿತ್ತು. ಹಾಗೆಯೆ ‘ಮಹಾಭಾರತ’ ಮೊದಲ ಬಾರಿಗೆ 1988 ರಲ್ಲಿ ಪ್ರಸಾರವಾಯಿತು, ಇದು ಅನೇಕ ನಟರನ್ನು ಅಪ್ರತಿಮ ಸ್ಥಾನಮಾನವನ್ನು ಗಳಿಸುವಂತೆ ಮಾಡಿತು.

ಇದೇ ಸಂದರ್ಭದಲ್ಲಿ ಸಚಿವರ ಈ ಕ್ರಮಕ್ಕೆ ಅಷ್ಟೇ ವಿರೋಧವೂ ಸಹ ವ್ಯಕ್ತವಾಗಿದೆ. ನಮಗೆ ಸದ್ಯಕ್ಕೆ ಬೇಕಿರುವುದು ಕೊರೊನಾ ಪರೀಕ್ಷಾ ಕಿಟ್‌ಗಳು, ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು, ಉತ್ತಮ ಆಸ್ಪತ್ರೆಗಳಾಗಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಅನಿವಾರ್ಯವಲ್ಲದರ ಕಡೆ ಗಮನಕೊಡುತ್ತಿದೆ ಎಂದು ಹಲವರು ದೂರಿದ್ದಾರೆ.

ಮತ್ತೊಂದು ನಿರುಪಯುಕ್ತ ಗ್ಯಾಂಗ್ ಇದು. ಯಾರಾದರೂ ರಾಮಾಯಣ ಮಹಾಭಾರತ ನೋಡಲು ಬಯಸಿದರೆ ಅವರು ಯಾವಾಗಲೂ ಯುಟ್ಯೂಬ್‌ನಲ್ಲಿ ಎಲ್ಲಾ ಸಂಚಿಕೆಗಳನ್ನು ವೀಕ್ಷಿಸಬಹುದು.
ಬಡವರು ಬಳಲುತ್ತಿದ್ದಾರೆ ಮತ್ತು ಪ್ರಧಾನ ಮಂತ್ರಿ ಕ್ಷೇತ್ರದಲ್ಲಿ ಮಕ್ಕಳು ಹುಲ್ಲು ತಿನ್ನುತ್ತಿದ್ದಾರೆ ಎಂಬುದನ್ನು ನೆನಪಿಡಿ. ನಿಮ್ಮ ಅಶ್ಲೀಲ ಹಿಂದುತ್ವ ಆರಾಧನೆಯನ್ನು ನಿಲ್ಲಿಸಿ ಎಂದು ಸೈಯದ್ ವಾಸನ್‌ ಮೈಕಲ್‌ ಎಂಬುವವರು ಆಗ್ರಹಿಸಿದ್ದಾರೆ.

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...