Homeಕರ್ನಾಟಕದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

ದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

- Advertisement -
- Advertisement -

ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾಗಿ 15 ಜನರು ತೀರಿಹೋಗಿದ್ದು ದೊಡ್ಡ ದುರ್ಘಟನೆ. ಈ ಘಟನೆಯಲ್ಲಿ 10 ಜನ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದೋರನಹಳ್ಳಿಯಲ್ಲಿ ನಡೆದ ಸಿಲಿಂಡರ್ ಸ್ಪೋಟದಲ್ಲಿ ಮೃತಪಟ್ಟ 15 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳಂತೆ ಒಟ್ಟು 75 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಿ ಅವರು ಮಾತನಾಡಿದರು.

ಬಡವರು ಶುಭಕಾರ್ಯ ಮಾಡಿ ಸಂಭ್ರಮಿಸುವ ಸಂದರ್ಭದಲ್ಲಿ 15 ಜನ ತೀರಿಹೋಗಿರುವುದು ದೊಡ್ಡ ಅನಾಹುತ. ಅವರ ಕಟುಂಬದವರಿಗೆ ಕೇವಲ ಹಣ ಮಾತ್ರವಲ್ಲದೆ, ಎಲ್ಲಾ ರೀತಿಯ ಸಹಾಯವನ್ನು ಸರ್ಕಾರದ ವತಿಯಿಂದ ಮಾಡಲಾಗುವುದು ಎಂದರು.

ಇದು ತಿಳಿದ ತಕ್ಷಣವೇ ಜಿಲ್ಲಾಡಳಿತ, ಶಾಸಕರು ಎಲ್ಲಾ ಅಗತ್ಯ ನೆರವನ್ನು ನೀಡಿದ್ದಾರೆ. ಸೋಲ್ಹಾಪುರಕ್ಕೆ ಹೋದ ಗಾಯಾಳು ಒಬ್ಬರಿಗೆ ಸುಮಾರು 4 ಲಕ್ಷ ರೂ.ಗಳ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಿದ್ದು, ಬೆಂಗಳೂರಿಗೆ ಹಿಂತಿರುಗಿದ ತಕ್ಷಣ ಚೆಕ್‌ಗೆ ಸಹಿ ಮಾಡಿ ಮೊತ್ತವನ್ನು ಕಳುಹಿಸಲಾಗುವುದು ಎಂದು ಹೇಳಿದರು.

ವಿದ್ಯಾರ್ಹತೆಗೆ ತಕ್ಕ ಉದ್ಯೋಗಕ್ಕೆ ಕ್ರಮ: ಕೆಲವು ಕುಟುಂಬದವರಿಗೆ ಉದ್ಯೋಗವನ್ನು ನೀಡಬೇಕೆಂಬ ಬೇಡಿಕೆ ಇದ್ದು, ಅವರವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ನೌಕರಿ ನೀಡಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡಲಾಗುವುದು. ಕೆಲವರಿಗೆ ಸ್ಥಳೀಯವಾಗಿ ನೌಕರಿ ಹಾಗೂ ಇಂಜಿನಿಯರಿಂಗ್ ಮಾಡಿದವರಿಗೆ ಊರ ಹೊರಗಡೆಯೂ ಕೆಲಸ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಐಒಸಿ ಸಹಾಯ ಒದಗಿಸಬೇಕು: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕಂಪನಿ ಸಂತ್ರಸ್ಥರಿಗೆ ಸಹಾಯವನ್ನು ಮಾಡಬೇಕು. ತಾಂತ್ರಿಕ ಕಾರಣಗಳನ್ನು ಹೇಳುತ್ತಿದ್ದಾರೆ. ಅದ್ಯಾವುದನ್ನು ಹೇಳದೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ದೊಡ್ಡ ಸಹಾಯವನ್ನು ಮಾಡಲೇಬೇಕು ಎಂದು ಬೆಂಗಳೂರಿನಲ್ಲಿರುವ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಹೆಚ್ಚಿನ ಪರಿಹಾರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ: ತುಮಕೂರಿನ ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಪಘಾತದಲ್ಲಿ 8 ಜನ ತೀರಿಹೋಗಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಅವರನ್ನು ಕಳುಹಿಸಲಾಗಿದೆ. ದುರಂತ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ. ಖಾಸಗಿ ವಾಹನಗಳ ಫಿಟ್‍ನೆಸ್ ಪ್ರಮಾಣಪತ್ರ ಇವುಗಳ ಬಗ್ಗೆ ಪರಿಶೀಲಿಸಲು ತಿಳಿಸಲಾಗಿದೆ. ದುರಂತಗಳು ಸಂಭವಿಸದಂತೆ ಇನ್ನಷ್ಟು ಕ್ರಮವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ಪಾವಗಡ: ಬಸ್‌ ಮಗುಚಿ ಎಂಟು ಮಂದಿ ದುರ್ಮರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಪ್ರದೇಶ: ದಲಿತ ಬಾಲಕಿಯ ಸಜೀವ ದಹನ

0
ಬಯಲು ಶೌಚಾಲಯಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಹರಯಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಬಲರಾಂಪುರ್ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ್ದ 13...