Homeಅಂಕಣಗಳು370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

- Advertisement -
- Advertisement -

| ಎಚ್.ಎಸ್. ದೊರೆಸ್ವಾಮಿ |

2019ರ ಆಗಸ್ಟ್ 5ರಂದು 50000 ಸೈನಿಕರನ್ನು ಹಠಾತ್ತನೆ ಕಾಶ್ಮೀರಕ್ಕೆ ಕಳಿಸಲಾಯಿತು. ಕಫ್ರ್ಯೂ ವಿಧಿಸಲಾಯಿತು. ಅಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಭಾರತದ ಇತರ ಭಾಗದ ಜನರಿಗೆ ಗೊತ್ತಾಗದಂತೆ ಅಲ್ಲಿಯ ಸುದ್ದಿ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಯಿತು. ಕಾಶ್ಮೀರದ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಫಾರೂಕ್ ಅಬ್ದುಲ್ಲಾ, ಉಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಮುಂತಾದವರನ್ನು ಗೃಹಬಂಧನದಲ್ಲಿ ಇಡಲಾಯಿತು. ಕಾಶ್ಮೀರದ ಭವಿಷ್ಯವನ್ನು ಇತರ ರಾಜ್ಯಗಳ ಬಿಜೆಪಿ ಲೋಕಸಭಾ ಸದಸ್ಯರು ನಿರ್ಧರಿಸಿಬಿಟ್ಟರು. ಆರ್ಟಿಕಲ್ 370ನ್ನು ಹಿಂಪಡೆಯಲಾಯಿತು. ಪಾರ್ಲಿಮೆಂಟಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು, ಇನ್ನೂ ಖಚಿತವಾಗಿ ಹೇಳಬೇಕಾದರೆ ಮೋದಿ ಮತ್ತು ಅಮಿತ್ ಶಾರವರು ಕಾಶ್ಮೀರದ ಭವಿಷ್ಯವನ್ನು ನಿರ್ಧರಿಸಿಬಿಟ್ಟರು.

370ನೇ ವಿಧಿಯನ್ನು ತಿದ್ದುಪಡಿ ಮಾಡುವ ಮೊದಲು ಕಾಶ್ಮೀರ ಜನರ ಅಭಿಪ್ರಾಯ ಕೇಳಬೇಕಾಗಿತ್ತು. ಲೋಕಸಭೆಯ ವಿರೋಧ ಪಕ್ಷದವರ ಅಭಿಪ್ರಾಯ ಏನೆಂದು ತಿಳಿಯಬೇಕಿತ್ತು. ಕೇಂದ್ರ ಸರ್ಕಾರ ಈ ರೀತಿ ಹಠತ್ತಾಗಿ ಕಾಶ್ಮೀರದ ಮೇಲೆ ತಮ್ಮ ತೀರ್ಮಾನ ಹೇರುವ ಬದಲು ಮೇಲೆ ಹೇಳಿದ ಎಲ್ಲರ ಒಟ್ಟು ಅಭಿಪ್ರಾಯವನ್ನು ತಿಳಿಯುವ ಅವಶ್ಯಕತೆ ಇತ್ತು.

ಹಿಂದೆ ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಕೂಡಿಸಿ ವಿಶಾಲಾಂಧ್ರ ರಚಿಸಬೇಕೆಂದು ಸರ್ಕಾರ ತೀರ್ಮಾನಿಸಿತು. ಎಲ್ಲಾ ದೃಷ್ಟಿಯಿಂದಲೂ ಹಿಂದುಳಿದಿದ್ದ ತೆಲಂಗಾಣವನ್ನು ಬುದ್ಧಿವಂತರೂ, ಐಶ್ವರ್ಯವಂತರೂ, ಸಾಹಸಿ ಉದ್ಯಮಿಗಳೂ ಆದ ಆಂಧ್ರ ಪ್ರದೇಶದವರ ವಶಕ್ಕೆ ವಸಾಹತು ನೀಡಿದಂತೆ ನೀಡಬೇಕೆಂಬ ರೀತಿಯಲ್ಲಿ ಈ ಘೋಷಣೆ ಮಾಡಿತು. ಹಾಗೆಯೇ ತೆಲಂಗಾಣದವರಿಗೆ ತಮ್ಮ ನದಿಗಳ ಮೇಲಿನ ಹಕ್ಕುಗಳ ಬಗೆಗೂ ಮತ್ತು ನೀರಿನ ಭದ್ರತೆಯ ಬಗೆಗೂ ಕಾಳಜಿ ಇತ್ತು.

ಈ ಕಾರಣಗಳಿಗಾಗಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಬೇಕೆಂದು ತೆಲಂಗಾಣದ ನಾಯಕರು ಅಭಿಪ್ರಾಯಪಟ್ಟರು. ಆದರೂ 1956ರಲ್ಲಿ ತೆಲಂಗಾಣ ಒಳಗೊಂಡ ಆಂಧ್ರಪ್ರದೇಶ ಅಸ್ತಿತ್ವಕ್ಕೆ ಬಂತು. ಈ ಮಧ್ಯೆ ತೆಲಂಗಾಣದ ಹಿಂದುಳಿದಿರುವಿಕೆಯನ್ನು ಸುಧಾರಿಸುವ ಆಶ್ವಾಸನೆಗಳು ಕೇಂದ್ರ ಸರ್ಕಾರದಿಂದ ಪ್ರಕಟವಾದವು. ಆ ಭರವಸೆಗಳು ಭರವಸೆಗಳಾಗಿಯೇ ಉಳಿದವು.

ಕಾಶ್ಮೀರದ 370ನೇ ವಿಧಿ ಹಾಗೂ ಆಂಧ್ರಪ್ರದೇಶದಲ್ಲಿ ತೆಲಂಗಾಣವನ್ನು ವಿಲೀನಗೊಳಿಸುವ ಮಸೂದೆಗಳನ್ನು ಪಾರ್ಲಿಮೆಂಟ್ ಅಧಿವೇಶನದ ಕೊನೆಯ ದಿನಗಳಲ್ಲಿ ಮಂಡಿಸಲಾಯಿತು. ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ. ಜಂಟಿ ಸಮಿತಿಗೆ ಒಪ್ಪಿಸುವುದಕ್ಕೂ ಸರ್ಕಾರ ಒಪ್ಪಲಿಲ್ಲ. ರಾಜ್ಯ ಸರ್ಕಾರಗಳ ಹಾಗೂ ಶಾಸನಸಭೆಯ ಅಭಿಪ್ರಾಯ ತಿಳಿಯಲು ಅವಕಾಶ ಕಲ್ಪಿಸಲಿಲ್ಲ. ಅಂದಹಾಗೆ ಇದಕ್ಕೆ ಮೊದಲೇ ಕಾಶ್ಮೀರ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತವನ್ನು ಕಾಶ್ಮೀರದ ಮೇಲೆ ಹೇರಲಾಗಿತ್ತು.

ಜಮ್ಮು ಕಾಶ್ಮೀರಗಳ ಗಲಭೆಗಳು, ಭಯೋತ್ಪಾದಕ ಕೃತ್ಯಗಳು 370ನೇ ವಿಧಿಯನ್ನು ತೆಗೆದುಹಾಕುವುದರಿಂದ ಕೊನೆಗೊಳ್ಳುವುದು ಎಂದು ಗೃಹ ಸಚಿವರು ಹೇಳಿದ್ದಾರೆ. ಕಾಶ್ಮೀರದಲ್ಲಿ ಒಂದು ಸಶಕ್ತ ಸಮ್ಮಿಶ್ರ ಸರ್ಕಾರ ಇದ್ದರೆ ಮಾತ್ರ ಅಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುವುದು. ಅದಿಲ್ಲವಾದರೆ ಬೂದಿ ಮುಚ್ಚಿದ ಕೆಂಡದಂತಿರುವ ಈ ಪರಿಸ್ಥಿತಿ ಯಾವಾಗ ಬೇಕಾದರೂ ಹದಗೆಡಬಹುದು. ಅಲ್ಲಿಯ ಸರ್ಕಾರಕ್ಕೂ ಕೇಂದ್ರ ಸರ್ಕಾರಕ್ಕೂ ಒಂದು ಮಧುರ ಬಾಂಧವ್ಯ ಇದ್ದರೆ ಮಾತ್ರ ಶಾಶ್ವತ ಶಾಂತಿ ನೆಲೆಸೀತು. ಒಂದು ಬಹುಮುಖ್ಯ ವಿಚಾರವೆಂದರೆ ಮಿಲಿಟರಿಯ ಮೃಗೀಯ ಶಕ್ತಿ ಬಳಸಿಕೊಂಡು ಕಾಶ್ಮೀರದಲ್ಲಿ ಶಾಂತಿಸ್ಥಾಪನೆ ಮಾಡುವುದು ಆಗದ ಮಾತು.

ಶ್ರೀಲಂಕಾದಲ್ಲಿ ತಮಿಳರಿಗೆ ಸ್ವತಂತ್ರವಾಗಿ ಬದುಕಲು ಸಿಂಹಳೀಯರು ಅವಕಾಶ ಮಾಡಿಕೊಡಲು ನಿರಾಕರಿಸಿ ಅವರಿಗೆ ಕಿರುಕುಳ ಕೊಟ್ಟಿದ್ದರಿಂದ ಅಲ್ಲಿ ಎಲ್.ಟಿ.ಟಿ.ಈಗೂ ಸಿಂಹಳ ಸರ್ಕಾರಕ್ಕೂ ಯುದ್ಧವೇ ನಡೆದುಹೋಯಿತು ಎಂಬುದನ್ನು ನಾವು ಮರೆಯಬಾರದು. ಅಂತಹ ಯುದ್ಧದಲ್ಲಿ ಮನುಷ್ಯತ್ವವೇ ಕರಗಿಹೋಗುವ ಮಾರಣಹೋಮಗಳು ನಡೆದವು.

370ನೇ ವಿಧಿಯನ್ನು ಆಗ ರಾಷ್ಟ್ರಾಧ್ಯಕ್ಷರ ಆದೇಶದ ಮೇರೆಗೆ ಜಾರಿಗೆ ತರಲಾಗಿತ್ತು. ಈಗ ರಾಷ್ಟ್ರಾಧ್ಯಕ್ಷರ ಆದೇಶದಿಂದಲೇ ಕಿತ್ತು ಹಾಕುತ್ತೇವೆ ಆದ್ದರಿಂದ ಅದು ರಾಜ್ಯಾಂಗದ ಉಲ್ಲಂಘನೆಯಲ್ಲ ಎಂದು ಅಮಿತ್ ಶಾ ಅವರು ಹೇಳುತ್ತಾರೆ. ಇದು ಅಷ್ಟು ಸರಳ ಸಂಗತಿಯಾಗಿಲ್ಲ. ನಾವು ಪ್ರೀತಿಯಿಂದ ಒಲಿಸಿಕೊಳ್ಳಬೇಕಿದ್ದ, ಒಂದು ಭೂಭಾಗವು ನಮ್ಮೊಡನೆ ಸೇರಲು ಮಾಡಿಕೊಂಡಿದ್ದ ಕರಾರು ಅದು. ದೇಶ ರೂಪುಗೊಳ್ಳಬೇಕಾದ ಸಂದರ್ಭದಲ್ಲಿ ಮಾಡಿಕೊಳ್ಳಲಾಗಿದ್ದ ಅಂತಹ ರಾಜ್ಯಾಂಗ ಬದಲಾವಣೆಗಳನ್ನು ಹೀಗೆ ಅಧಿಕಾರಬಲದಿಂದ ಹಿಂತೆಗೆದುಕೊಳ್ಳುವ ಅಧಿಕಾರ ರಾಷ್ಟ್ರಾಧ್ಯಕ್ಷರಿಗೆ ಇದೆಯೇ ಎಂಬುದು ಚರ್ಚೆಗೆ ಬರುವ ಸಂಭವವಿದೆ. ಕಾಲ ನಿಂತ ನೀರಲ್ಲ. ಬದಲಾವಣೆಗಳು ಬೇಕಾಗಬಹುದು. ಅಂತಹ ಸಂದರ್ಭದಲ್ಲಿ ಮೆಜಾರಿಟಿ ಇದೆ, ಬದಲಿಸಿಕೊಳ್ಳುತ್ತೇವೆ ಎಂಬ ಧೋರಣೆಗಿಂತ, ಯಾರ ಮೇಲೆ ಇದರ ಹೆಚ್ಚಿನ ಪರಿಣಾಮ ಆಗುತ್ತದೋ, ಅವರ ಅಭಿಪ್ರಾಯವನ್ನು ಪರಿಗಣಿಸುವುದಕ್ಕೆ ಹೆಚ್ಚಿನ ಮುತುವರ್ಜಿ ಇರಬೇಕು.

ಸ್ವಾತಂತ್ರ್ಯ ಬಂದಮೇಲೆ ಸಂಸ್ಥಾನಗಳ ರಾಜರುಗಳು, ಇಂಡಿಯನ್ ಯೂನಿಯನ್ ಜೊತೆಗೆ ಕೂಡಿಕೊಂಡಾಗ ಅವರಿಗೆ ರಾಜಧನ ನೀಡಬೇಕೆಂದು ಒಪ್ಪಂದ ಆಗಿತ್ತು. ಮುಂದೆ ರಾಜಧನ ಕೊಡುವುದಿಲ್ಲವೆಂದು ರಾಷ್ಟ್ರಾಧ್ಯಕ್ಷರು ತೀರ್ಮಾನ ತೆಗೆದುಕೊಂಡಾಗ ಮಾಜಿ ರಾಜರು ಸವ್ರ್ಚೊಚ್ಚ ನ್ಯಾಯಾಲಯದ ಮೆಟ್ಟಿಲು ಏರಿದರು. ಒಮ್ಮೆ ಕೊಡಲು ಒಪ್ಪಿಕೊಂಡಿರುವ ರಾಜಧನವನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಅಂದಿನ ಕಾಶ್ಮೀರ ರಾಜರೊಡನೆ ಮಾಡಿಕೊಂಡಿರುವ ಒಪ್ಪಂದವನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದು ಕಾನೂನಾತ್ಮಕವಾಗಿ ಮತ್ತು ನ್ಯಾಯಯುತವಾಗಿ ಸಾಧುವೇ? ಈ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಎತ್ತಲು ಸಾಧ್ಯವೇ ಎಂಬುದನ್ನು ಕಾನೂನುಪಂಡಿತರು ಜನರಿಗೆ ತಿಳಿಸಿ ಹೇಳಬೇಕು.

ಈ ದೇಶದ ಆಡಳಿತದ ಹೊಣೆಗಾರಿಕೆ ಪ್ರಜೆಯದು. ರಾಷ್ಟ್ರಾಧ್ಯಕ್ಷರಾಗಲಿ, ಸರ್ಕಾರವೇ ಆಗಲಿ ತಮ್ಮ ಸಾರ್ವಭೌಮತ್ವವನ್ನು ಪ್ರಜೆಗಳ ಮೇಲೆ ಕಾನೂನುಬಾಹಿರವಾಗಿ ಹೇರುವುದು ಸರಿಯಿಲ್ಲ. ಆರ್ಥಿಕ ಸಂಯೋಜನೆ ಮತ್ತು ಅಭಿವೃದ್ಧಿ ಮಂತ್ರ ಮಾತ್ರ ಸಂಯೋಜನೆಗೆ ಮಾರ್ಗಸೂಚಿ ಅಲ್ಲ. ಜಮ್ಮು ಕಾಶ್ಮೀರದ ಜನತೆಯ ಅನುಮತಿ ಮತ್ತು ಸಹಕಾರವಿಲ್ಲದೆ ಇದ್ದರೆ ಆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿ, 370ರ ವಿಧಿಯನ್ನು ರದ್ದು ಮಾಡುವುದಾಗಲೀ ಸುಸೂತ್ರವಾಗಿ ನಡೆಯಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...