Homeಅಂಕಣಗಳು370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

- Advertisement -
- Advertisement -

| ಎಚ್.ಎಸ್. ದೊರೆಸ್ವಾಮಿ |

2019ರ ಆಗಸ್ಟ್ 5ರಂದು 50000 ಸೈನಿಕರನ್ನು ಹಠಾತ್ತನೆ ಕಾಶ್ಮೀರಕ್ಕೆ ಕಳಿಸಲಾಯಿತು. ಕಫ್ರ್ಯೂ ವಿಧಿಸಲಾಯಿತು. ಅಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಭಾರತದ ಇತರ ಭಾಗದ ಜನರಿಗೆ ಗೊತ್ತಾಗದಂತೆ ಅಲ್ಲಿಯ ಸುದ್ದಿ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಯಿತು. ಕಾಶ್ಮೀರದ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಫಾರೂಕ್ ಅಬ್ದುಲ್ಲಾ, ಉಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಮುಂತಾದವರನ್ನು ಗೃಹಬಂಧನದಲ್ಲಿ ಇಡಲಾಯಿತು. ಕಾಶ್ಮೀರದ ಭವಿಷ್ಯವನ್ನು ಇತರ ರಾಜ್ಯಗಳ ಬಿಜೆಪಿ ಲೋಕಸಭಾ ಸದಸ್ಯರು ನಿರ್ಧರಿಸಿಬಿಟ್ಟರು. ಆರ್ಟಿಕಲ್ 370ನ್ನು ಹಿಂಪಡೆಯಲಾಯಿತು. ಪಾರ್ಲಿಮೆಂಟಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು, ಇನ್ನೂ ಖಚಿತವಾಗಿ ಹೇಳಬೇಕಾದರೆ ಮೋದಿ ಮತ್ತು ಅಮಿತ್ ಶಾರವರು ಕಾಶ್ಮೀರದ ಭವಿಷ್ಯವನ್ನು ನಿರ್ಧರಿಸಿಬಿಟ್ಟರು.

370ನೇ ವಿಧಿಯನ್ನು ತಿದ್ದುಪಡಿ ಮಾಡುವ ಮೊದಲು ಕಾಶ್ಮೀರ ಜನರ ಅಭಿಪ್ರಾಯ ಕೇಳಬೇಕಾಗಿತ್ತು. ಲೋಕಸಭೆಯ ವಿರೋಧ ಪಕ್ಷದವರ ಅಭಿಪ್ರಾಯ ಏನೆಂದು ತಿಳಿಯಬೇಕಿತ್ತು. ಕೇಂದ್ರ ಸರ್ಕಾರ ಈ ರೀತಿ ಹಠತ್ತಾಗಿ ಕಾಶ್ಮೀರದ ಮೇಲೆ ತಮ್ಮ ತೀರ್ಮಾನ ಹೇರುವ ಬದಲು ಮೇಲೆ ಹೇಳಿದ ಎಲ್ಲರ ಒಟ್ಟು ಅಭಿಪ್ರಾಯವನ್ನು ತಿಳಿಯುವ ಅವಶ್ಯಕತೆ ಇತ್ತು.

ಹಿಂದೆ ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಕೂಡಿಸಿ ವಿಶಾಲಾಂಧ್ರ ರಚಿಸಬೇಕೆಂದು ಸರ್ಕಾರ ತೀರ್ಮಾನಿಸಿತು. ಎಲ್ಲಾ ದೃಷ್ಟಿಯಿಂದಲೂ ಹಿಂದುಳಿದಿದ್ದ ತೆಲಂಗಾಣವನ್ನು ಬುದ್ಧಿವಂತರೂ, ಐಶ್ವರ್ಯವಂತರೂ, ಸಾಹಸಿ ಉದ್ಯಮಿಗಳೂ ಆದ ಆಂಧ್ರ ಪ್ರದೇಶದವರ ವಶಕ್ಕೆ ವಸಾಹತು ನೀಡಿದಂತೆ ನೀಡಬೇಕೆಂಬ ರೀತಿಯಲ್ಲಿ ಈ ಘೋಷಣೆ ಮಾಡಿತು. ಹಾಗೆಯೇ ತೆಲಂಗಾಣದವರಿಗೆ ತಮ್ಮ ನದಿಗಳ ಮೇಲಿನ ಹಕ್ಕುಗಳ ಬಗೆಗೂ ಮತ್ತು ನೀರಿನ ಭದ್ರತೆಯ ಬಗೆಗೂ ಕಾಳಜಿ ಇತ್ತು.

ಈ ಕಾರಣಗಳಿಗಾಗಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಬೇಕೆಂದು ತೆಲಂಗಾಣದ ನಾಯಕರು ಅಭಿಪ್ರಾಯಪಟ್ಟರು. ಆದರೂ 1956ರಲ್ಲಿ ತೆಲಂಗಾಣ ಒಳಗೊಂಡ ಆಂಧ್ರಪ್ರದೇಶ ಅಸ್ತಿತ್ವಕ್ಕೆ ಬಂತು. ಈ ಮಧ್ಯೆ ತೆಲಂಗಾಣದ ಹಿಂದುಳಿದಿರುವಿಕೆಯನ್ನು ಸುಧಾರಿಸುವ ಆಶ್ವಾಸನೆಗಳು ಕೇಂದ್ರ ಸರ್ಕಾರದಿಂದ ಪ್ರಕಟವಾದವು. ಆ ಭರವಸೆಗಳು ಭರವಸೆಗಳಾಗಿಯೇ ಉಳಿದವು.

ಕಾಶ್ಮೀರದ 370ನೇ ವಿಧಿ ಹಾಗೂ ಆಂಧ್ರಪ್ರದೇಶದಲ್ಲಿ ತೆಲಂಗಾಣವನ್ನು ವಿಲೀನಗೊಳಿಸುವ ಮಸೂದೆಗಳನ್ನು ಪಾರ್ಲಿಮೆಂಟ್ ಅಧಿವೇಶನದ ಕೊನೆಯ ದಿನಗಳಲ್ಲಿ ಮಂಡಿಸಲಾಯಿತು. ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ. ಜಂಟಿ ಸಮಿತಿಗೆ ಒಪ್ಪಿಸುವುದಕ್ಕೂ ಸರ್ಕಾರ ಒಪ್ಪಲಿಲ್ಲ. ರಾಜ್ಯ ಸರ್ಕಾರಗಳ ಹಾಗೂ ಶಾಸನಸಭೆಯ ಅಭಿಪ್ರಾಯ ತಿಳಿಯಲು ಅವಕಾಶ ಕಲ್ಪಿಸಲಿಲ್ಲ. ಅಂದಹಾಗೆ ಇದಕ್ಕೆ ಮೊದಲೇ ಕಾಶ್ಮೀರ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತವನ್ನು ಕಾಶ್ಮೀರದ ಮೇಲೆ ಹೇರಲಾಗಿತ್ತು.

ಜಮ್ಮು ಕಾಶ್ಮೀರಗಳ ಗಲಭೆಗಳು, ಭಯೋತ್ಪಾದಕ ಕೃತ್ಯಗಳು 370ನೇ ವಿಧಿಯನ್ನು ತೆಗೆದುಹಾಕುವುದರಿಂದ ಕೊನೆಗೊಳ್ಳುವುದು ಎಂದು ಗೃಹ ಸಚಿವರು ಹೇಳಿದ್ದಾರೆ. ಕಾಶ್ಮೀರದಲ್ಲಿ ಒಂದು ಸಶಕ್ತ ಸಮ್ಮಿಶ್ರ ಸರ್ಕಾರ ಇದ್ದರೆ ಮಾತ್ರ ಅಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುವುದು. ಅದಿಲ್ಲವಾದರೆ ಬೂದಿ ಮುಚ್ಚಿದ ಕೆಂಡದಂತಿರುವ ಈ ಪರಿಸ್ಥಿತಿ ಯಾವಾಗ ಬೇಕಾದರೂ ಹದಗೆಡಬಹುದು. ಅಲ್ಲಿಯ ಸರ್ಕಾರಕ್ಕೂ ಕೇಂದ್ರ ಸರ್ಕಾರಕ್ಕೂ ಒಂದು ಮಧುರ ಬಾಂಧವ್ಯ ಇದ್ದರೆ ಮಾತ್ರ ಶಾಶ್ವತ ಶಾಂತಿ ನೆಲೆಸೀತು. ಒಂದು ಬಹುಮುಖ್ಯ ವಿಚಾರವೆಂದರೆ ಮಿಲಿಟರಿಯ ಮೃಗೀಯ ಶಕ್ತಿ ಬಳಸಿಕೊಂಡು ಕಾಶ್ಮೀರದಲ್ಲಿ ಶಾಂತಿಸ್ಥಾಪನೆ ಮಾಡುವುದು ಆಗದ ಮಾತು.

ಶ್ರೀಲಂಕಾದಲ್ಲಿ ತಮಿಳರಿಗೆ ಸ್ವತಂತ್ರವಾಗಿ ಬದುಕಲು ಸಿಂಹಳೀಯರು ಅವಕಾಶ ಮಾಡಿಕೊಡಲು ನಿರಾಕರಿಸಿ ಅವರಿಗೆ ಕಿರುಕುಳ ಕೊಟ್ಟಿದ್ದರಿಂದ ಅಲ್ಲಿ ಎಲ್.ಟಿ.ಟಿ.ಈಗೂ ಸಿಂಹಳ ಸರ್ಕಾರಕ್ಕೂ ಯುದ್ಧವೇ ನಡೆದುಹೋಯಿತು ಎಂಬುದನ್ನು ನಾವು ಮರೆಯಬಾರದು. ಅಂತಹ ಯುದ್ಧದಲ್ಲಿ ಮನುಷ್ಯತ್ವವೇ ಕರಗಿಹೋಗುವ ಮಾರಣಹೋಮಗಳು ನಡೆದವು.

370ನೇ ವಿಧಿಯನ್ನು ಆಗ ರಾಷ್ಟ್ರಾಧ್ಯಕ್ಷರ ಆದೇಶದ ಮೇರೆಗೆ ಜಾರಿಗೆ ತರಲಾಗಿತ್ತು. ಈಗ ರಾಷ್ಟ್ರಾಧ್ಯಕ್ಷರ ಆದೇಶದಿಂದಲೇ ಕಿತ್ತು ಹಾಕುತ್ತೇವೆ ಆದ್ದರಿಂದ ಅದು ರಾಜ್ಯಾಂಗದ ಉಲ್ಲಂಘನೆಯಲ್ಲ ಎಂದು ಅಮಿತ್ ಶಾ ಅವರು ಹೇಳುತ್ತಾರೆ. ಇದು ಅಷ್ಟು ಸರಳ ಸಂಗತಿಯಾಗಿಲ್ಲ. ನಾವು ಪ್ರೀತಿಯಿಂದ ಒಲಿಸಿಕೊಳ್ಳಬೇಕಿದ್ದ, ಒಂದು ಭೂಭಾಗವು ನಮ್ಮೊಡನೆ ಸೇರಲು ಮಾಡಿಕೊಂಡಿದ್ದ ಕರಾರು ಅದು. ದೇಶ ರೂಪುಗೊಳ್ಳಬೇಕಾದ ಸಂದರ್ಭದಲ್ಲಿ ಮಾಡಿಕೊಳ್ಳಲಾಗಿದ್ದ ಅಂತಹ ರಾಜ್ಯಾಂಗ ಬದಲಾವಣೆಗಳನ್ನು ಹೀಗೆ ಅಧಿಕಾರಬಲದಿಂದ ಹಿಂತೆಗೆದುಕೊಳ್ಳುವ ಅಧಿಕಾರ ರಾಷ್ಟ್ರಾಧ್ಯಕ್ಷರಿಗೆ ಇದೆಯೇ ಎಂಬುದು ಚರ್ಚೆಗೆ ಬರುವ ಸಂಭವವಿದೆ. ಕಾಲ ನಿಂತ ನೀರಲ್ಲ. ಬದಲಾವಣೆಗಳು ಬೇಕಾಗಬಹುದು. ಅಂತಹ ಸಂದರ್ಭದಲ್ಲಿ ಮೆಜಾರಿಟಿ ಇದೆ, ಬದಲಿಸಿಕೊಳ್ಳುತ್ತೇವೆ ಎಂಬ ಧೋರಣೆಗಿಂತ, ಯಾರ ಮೇಲೆ ಇದರ ಹೆಚ್ಚಿನ ಪರಿಣಾಮ ಆಗುತ್ತದೋ, ಅವರ ಅಭಿಪ್ರಾಯವನ್ನು ಪರಿಗಣಿಸುವುದಕ್ಕೆ ಹೆಚ್ಚಿನ ಮುತುವರ್ಜಿ ಇರಬೇಕು.

ಸ್ವಾತಂತ್ರ್ಯ ಬಂದಮೇಲೆ ಸಂಸ್ಥಾನಗಳ ರಾಜರುಗಳು, ಇಂಡಿಯನ್ ಯೂನಿಯನ್ ಜೊತೆಗೆ ಕೂಡಿಕೊಂಡಾಗ ಅವರಿಗೆ ರಾಜಧನ ನೀಡಬೇಕೆಂದು ಒಪ್ಪಂದ ಆಗಿತ್ತು. ಮುಂದೆ ರಾಜಧನ ಕೊಡುವುದಿಲ್ಲವೆಂದು ರಾಷ್ಟ್ರಾಧ್ಯಕ್ಷರು ತೀರ್ಮಾನ ತೆಗೆದುಕೊಂಡಾಗ ಮಾಜಿ ರಾಜರು ಸವ್ರ್ಚೊಚ್ಚ ನ್ಯಾಯಾಲಯದ ಮೆಟ್ಟಿಲು ಏರಿದರು. ಒಮ್ಮೆ ಕೊಡಲು ಒಪ್ಪಿಕೊಂಡಿರುವ ರಾಜಧನವನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಅಂದಿನ ಕಾಶ್ಮೀರ ರಾಜರೊಡನೆ ಮಾಡಿಕೊಂಡಿರುವ ಒಪ್ಪಂದವನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದು ಕಾನೂನಾತ್ಮಕವಾಗಿ ಮತ್ತು ನ್ಯಾಯಯುತವಾಗಿ ಸಾಧುವೇ? ಈ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಎತ್ತಲು ಸಾಧ್ಯವೇ ಎಂಬುದನ್ನು ಕಾನೂನುಪಂಡಿತರು ಜನರಿಗೆ ತಿಳಿಸಿ ಹೇಳಬೇಕು.

ಈ ದೇಶದ ಆಡಳಿತದ ಹೊಣೆಗಾರಿಕೆ ಪ್ರಜೆಯದು. ರಾಷ್ಟ್ರಾಧ್ಯಕ್ಷರಾಗಲಿ, ಸರ್ಕಾರವೇ ಆಗಲಿ ತಮ್ಮ ಸಾರ್ವಭೌಮತ್ವವನ್ನು ಪ್ರಜೆಗಳ ಮೇಲೆ ಕಾನೂನುಬಾಹಿರವಾಗಿ ಹೇರುವುದು ಸರಿಯಿಲ್ಲ. ಆರ್ಥಿಕ ಸಂಯೋಜನೆ ಮತ್ತು ಅಭಿವೃದ್ಧಿ ಮಂತ್ರ ಮಾತ್ರ ಸಂಯೋಜನೆಗೆ ಮಾರ್ಗಸೂಚಿ ಅಲ್ಲ. ಜಮ್ಮು ಕಾಶ್ಮೀರದ ಜನತೆಯ ಅನುಮತಿ ಮತ್ತು ಸಹಕಾರವಿಲ್ಲದೆ ಇದ್ದರೆ ಆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿ, 370ರ ವಿಧಿಯನ್ನು ರದ್ದು ಮಾಡುವುದಾಗಲೀ ಸುಸೂತ್ರವಾಗಿ ನಡೆಯಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...