Homeಅಂಕಣಗಳು370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

- Advertisement -
- Advertisement -

| ಎಚ್.ಎಸ್. ದೊರೆಸ್ವಾಮಿ |

2019ರ ಆಗಸ್ಟ್ 5ರಂದು 50000 ಸೈನಿಕರನ್ನು ಹಠಾತ್ತನೆ ಕಾಶ್ಮೀರಕ್ಕೆ ಕಳಿಸಲಾಯಿತು. ಕಫ್ರ್ಯೂ ವಿಧಿಸಲಾಯಿತು. ಅಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಭಾರತದ ಇತರ ಭಾಗದ ಜನರಿಗೆ ಗೊತ್ತಾಗದಂತೆ ಅಲ್ಲಿಯ ಸುದ್ದಿ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಯಿತು. ಕಾಶ್ಮೀರದ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಫಾರೂಕ್ ಅಬ್ದುಲ್ಲಾ, ಉಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಮುಂತಾದವರನ್ನು ಗೃಹಬಂಧನದಲ್ಲಿ ಇಡಲಾಯಿತು. ಕಾಶ್ಮೀರದ ಭವಿಷ್ಯವನ್ನು ಇತರ ರಾಜ್ಯಗಳ ಬಿಜೆಪಿ ಲೋಕಸಭಾ ಸದಸ್ಯರು ನಿರ್ಧರಿಸಿಬಿಟ್ಟರು. ಆರ್ಟಿಕಲ್ 370ನ್ನು ಹಿಂಪಡೆಯಲಾಯಿತು. ಪಾರ್ಲಿಮೆಂಟಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು, ಇನ್ನೂ ಖಚಿತವಾಗಿ ಹೇಳಬೇಕಾದರೆ ಮೋದಿ ಮತ್ತು ಅಮಿತ್ ಶಾರವರು ಕಾಶ್ಮೀರದ ಭವಿಷ್ಯವನ್ನು ನಿರ್ಧರಿಸಿಬಿಟ್ಟರು.

370ನೇ ವಿಧಿಯನ್ನು ತಿದ್ದುಪಡಿ ಮಾಡುವ ಮೊದಲು ಕಾಶ್ಮೀರ ಜನರ ಅಭಿಪ್ರಾಯ ಕೇಳಬೇಕಾಗಿತ್ತು. ಲೋಕಸಭೆಯ ವಿರೋಧ ಪಕ್ಷದವರ ಅಭಿಪ್ರಾಯ ಏನೆಂದು ತಿಳಿಯಬೇಕಿತ್ತು. ಕೇಂದ್ರ ಸರ್ಕಾರ ಈ ರೀತಿ ಹಠತ್ತಾಗಿ ಕಾಶ್ಮೀರದ ಮೇಲೆ ತಮ್ಮ ತೀರ್ಮಾನ ಹೇರುವ ಬದಲು ಮೇಲೆ ಹೇಳಿದ ಎಲ್ಲರ ಒಟ್ಟು ಅಭಿಪ್ರಾಯವನ್ನು ತಿಳಿಯುವ ಅವಶ್ಯಕತೆ ಇತ್ತು.

ಹಿಂದೆ ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಕೂಡಿಸಿ ವಿಶಾಲಾಂಧ್ರ ರಚಿಸಬೇಕೆಂದು ಸರ್ಕಾರ ತೀರ್ಮಾನಿಸಿತು. ಎಲ್ಲಾ ದೃಷ್ಟಿಯಿಂದಲೂ ಹಿಂದುಳಿದಿದ್ದ ತೆಲಂಗಾಣವನ್ನು ಬುದ್ಧಿವಂತರೂ, ಐಶ್ವರ್ಯವಂತರೂ, ಸಾಹಸಿ ಉದ್ಯಮಿಗಳೂ ಆದ ಆಂಧ್ರ ಪ್ರದೇಶದವರ ವಶಕ್ಕೆ ವಸಾಹತು ನೀಡಿದಂತೆ ನೀಡಬೇಕೆಂಬ ರೀತಿಯಲ್ಲಿ ಈ ಘೋಷಣೆ ಮಾಡಿತು. ಹಾಗೆಯೇ ತೆಲಂಗಾಣದವರಿಗೆ ತಮ್ಮ ನದಿಗಳ ಮೇಲಿನ ಹಕ್ಕುಗಳ ಬಗೆಗೂ ಮತ್ತು ನೀರಿನ ಭದ್ರತೆಯ ಬಗೆಗೂ ಕಾಳಜಿ ಇತ್ತು.

ಈ ಕಾರಣಗಳಿಗಾಗಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಬೇಕೆಂದು ತೆಲಂಗಾಣದ ನಾಯಕರು ಅಭಿಪ್ರಾಯಪಟ್ಟರು. ಆದರೂ 1956ರಲ್ಲಿ ತೆಲಂಗಾಣ ಒಳಗೊಂಡ ಆಂಧ್ರಪ್ರದೇಶ ಅಸ್ತಿತ್ವಕ್ಕೆ ಬಂತು. ಈ ಮಧ್ಯೆ ತೆಲಂಗಾಣದ ಹಿಂದುಳಿದಿರುವಿಕೆಯನ್ನು ಸುಧಾರಿಸುವ ಆಶ್ವಾಸನೆಗಳು ಕೇಂದ್ರ ಸರ್ಕಾರದಿಂದ ಪ್ರಕಟವಾದವು. ಆ ಭರವಸೆಗಳು ಭರವಸೆಗಳಾಗಿಯೇ ಉಳಿದವು.

ಕಾಶ್ಮೀರದ 370ನೇ ವಿಧಿ ಹಾಗೂ ಆಂಧ್ರಪ್ರದೇಶದಲ್ಲಿ ತೆಲಂಗಾಣವನ್ನು ವಿಲೀನಗೊಳಿಸುವ ಮಸೂದೆಗಳನ್ನು ಪಾರ್ಲಿಮೆಂಟ್ ಅಧಿವೇಶನದ ಕೊನೆಯ ದಿನಗಳಲ್ಲಿ ಮಂಡಿಸಲಾಯಿತು. ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ. ಜಂಟಿ ಸಮಿತಿಗೆ ಒಪ್ಪಿಸುವುದಕ್ಕೂ ಸರ್ಕಾರ ಒಪ್ಪಲಿಲ್ಲ. ರಾಜ್ಯ ಸರ್ಕಾರಗಳ ಹಾಗೂ ಶಾಸನಸಭೆಯ ಅಭಿಪ್ರಾಯ ತಿಳಿಯಲು ಅವಕಾಶ ಕಲ್ಪಿಸಲಿಲ್ಲ. ಅಂದಹಾಗೆ ಇದಕ್ಕೆ ಮೊದಲೇ ಕಾಶ್ಮೀರ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತವನ್ನು ಕಾಶ್ಮೀರದ ಮೇಲೆ ಹೇರಲಾಗಿತ್ತು.

ಜಮ್ಮು ಕಾಶ್ಮೀರಗಳ ಗಲಭೆಗಳು, ಭಯೋತ್ಪಾದಕ ಕೃತ್ಯಗಳು 370ನೇ ವಿಧಿಯನ್ನು ತೆಗೆದುಹಾಕುವುದರಿಂದ ಕೊನೆಗೊಳ್ಳುವುದು ಎಂದು ಗೃಹ ಸಚಿವರು ಹೇಳಿದ್ದಾರೆ. ಕಾಶ್ಮೀರದಲ್ಲಿ ಒಂದು ಸಶಕ್ತ ಸಮ್ಮಿಶ್ರ ಸರ್ಕಾರ ಇದ್ದರೆ ಮಾತ್ರ ಅಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುವುದು. ಅದಿಲ್ಲವಾದರೆ ಬೂದಿ ಮುಚ್ಚಿದ ಕೆಂಡದಂತಿರುವ ಈ ಪರಿಸ್ಥಿತಿ ಯಾವಾಗ ಬೇಕಾದರೂ ಹದಗೆಡಬಹುದು. ಅಲ್ಲಿಯ ಸರ್ಕಾರಕ್ಕೂ ಕೇಂದ್ರ ಸರ್ಕಾರಕ್ಕೂ ಒಂದು ಮಧುರ ಬಾಂಧವ್ಯ ಇದ್ದರೆ ಮಾತ್ರ ಶಾಶ್ವತ ಶಾಂತಿ ನೆಲೆಸೀತು. ಒಂದು ಬಹುಮುಖ್ಯ ವಿಚಾರವೆಂದರೆ ಮಿಲಿಟರಿಯ ಮೃಗೀಯ ಶಕ್ತಿ ಬಳಸಿಕೊಂಡು ಕಾಶ್ಮೀರದಲ್ಲಿ ಶಾಂತಿಸ್ಥಾಪನೆ ಮಾಡುವುದು ಆಗದ ಮಾತು.

ಶ್ರೀಲಂಕಾದಲ್ಲಿ ತಮಿಳರಿಗೆ ಸ್ವತಂತ್ರವಾಗಿ ಬದುಕಲು ಸಿಂಹಳೀಯರು ಅವಕಾಶ ಮಾಡಿಕೊಡಲು ನಿರಾಕರಿಸಿ ಅವರಿಗೆ ಕಿರುಕುಳ ಕೊಟ್ಟಿದ್ದರಿಂದ ಅಲ್ಲಿ ಎಲ್.ಟಿ.ಟಿ.ಈಗೂ ಸಿಂಹಳ ಸರ್ಕಾರಕ್ಕೂ ಯುದ್ಧವೇ ನಡೆದುಹೋಯಿತು ಎಂಬುದನ್ನು ನಾವು ಮರೆಯಬಾರದು. ಅಂತಹ ಯುದ್ಧದಲ್ಲಿ ಮನುಷ್ಯತ್ವವೇ ಕರಗಿಹೋಗುವ ಮಾರಣಹೋಮಗಳು ನಡೆದವು.

370ನೇ ವಿಧಿಯನ್ನು ಆಗ ರಾಷ್ಟ್ರಾಧ್ಯಕ್ಷರ ಆದೇಶದ ಮೇರೆಗೆ ಜಾರಿಗೆ ತರಲಾಗಿತ್ತು. ಈಗ ರಾಷ್ಟ್ರಾಧ್ಯಕ್ಷರ ಆದೇಶದಿಂದಲೇ ಕಿತ್ತು ಹಾಕುತ್ತೇವೆ ಆದ್ದರಿಂದ ಅದು ರಾಜ್ಯಾಂಗದ ಉಲ್ಲಂಘನೆಯಲ್ಲ ಎಂದು ಅಮಿತ್ ಶಾ ಅವರು ಹೇಳುತ್ತಾರೆ. ಇದು ಅಷ್ಟು ಸರಳ ಸಂಗತಿಯಾಗಿಲ್ಲ. ನಾವು ಪ್ರೀತಿಯಿಂದ ಒಲಿಸಿಕೊಳ್ಳಬೇಕಿದ್ದ, ಒಂದು ಭೂಭಾಗವು ನಮ್ಮೊಡನೆ ಸೇರಲು ಮಾಡಿಕೊಂಡಿದ್ದ ಕರಾರು ಅದು. ದೇಶ ರೂಪುಗೊಳ್ಳಬೇಕಾದ ಸಂದರ್ಭದಲ್ಲಿ ಮಾಡಿಕೊಳ್ಳಲಾಗಿದ್ದ ಅಂತಹ ರಾಜ್ಯಾಂಗ ಬದಲಾವಣೆಗಳನ್ನು ಹೀಗೆ ಅಧಿಕಾರಬಲದಿಂದ ಹಿಂತೆಗೆದುಕೊಳ್ಳುವ ಅಧಿಕಾರ ರಾಷ್ಟ್ರಾಧ್ಯಕ್ಷರಿಗೆ ಇದೆಯೇ ಎಂಬುದು ಚರ್ಚೆಗೆ ಬರುವ ಸಂಭವವಿದೆ. ಕಾಲ ನಿಂತ ನೀರಲ್ಲ. ಬದಲಾವಣೆಗಳು ಬೇಕಾಗಬಹುದು. ಅಂತಹ ಸಂದರ್ಭದಲ್ಲಿ ಮೆಜಾರಿಟಿ ಇದೆ, ಬದಲಿಸಿಕೊಳ್ಳುತ್ತೇವೆ ಎಂಬ ಧೋರಣೆಗಿಂತ, ಯಾರ ಮೇಲೆ ಇದರ ಹೆಚ್ಚಿನ ಪರಿಣಾಮ ಆಗುತ್ತದೋ, ಅವರ ಅಭಿಪ್ರಾಯವನ್ನು ಪರಿಗಣಿಸುವುದಕ್ಕೆ ಹೆಚ್ಚಿನ ಮುತುವರ್ಜಿ ಇರಬೇಕು.

ಸ್ವಾತಂತ್ರ್ಯ ಬಂದಮೇಲೆ ಸಂಸ್ಥಾನಗಳ ರಾಜರುಗಳು, ಇಂಡಿಯನ್ ಯೂನಿಯನ್ ಜೊತೆಗೆ ಕೂಡಿಕೊಂಡಾಗ ಅವರಿಗೆ ರಾಜಧನ ನೀಡಬೇಕೆಂದು ಒಪ್ಪಂದ ಆಗಿತ್ತು. ಮುಂದೆ ರಾಜಧನ ಕೊಡುವುದಿಲ್ಲವೆಂದು ರಾಷ್ಟ್ರಾಧ್ಯಕ್ಷರು ತೀರ್ಮಾನ ತೆಗೆದುಕೊಂಡಾಗ ಮಾಜಿ ರಾಜರು ಸವ್ರ್ಚೊಚ್ಚ ನ್ಯಾಯಾಲಯದ ಮೆಟ್ಟಿಲು ಏರಿದರು. ಒಮ್ಮೆ ಕೊಡಲು ಒಪ್ಪಿಕೊಂಡಿರುವ ರಾಜಧನವನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಅಂದಿನ ಕಾಶ್ಮೀರ ರಾಜರೊಡನೆ ಮಾಡಿಕೊಂಡಿರುವ ಒಪ್ಪಂದವನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದು ಕಾನೂನಾತ್ಮಕವಾಗಿ ಮತ್ತು ನ್ಯಾಯಯುತವಾಗಿ ಸಾಧುವೇ? ಈ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಎತ್ತಲು ಸಾಧ್ಯವೇ ಎಂಬುದನ್ನು ಕಾನೂನುಪಂಡಿತರು ಜನರಿಗೆ ತಿಳಿಸಿ ಹೇಳಬೇಕು.

ಈ ದೇಶದ ಆಡಳಿತದ ಹೊಣೆಗಾರಿಕೆ ಪ್ರಜೆಯದು. ರಾಷ್ಟ್ರಾಧ್ಯಕ್ಷರಾಗಲಿ, ಸರ್ಕಾರವೇ ಆಗಲಿ ತಮ್ಮ ಸಾರ್ವಭೌಮತ್ವವನ್ನು ಪ್ರಜೆಗಳ ಮೇಲೆ ಕಾನೂನುಬಾಹಿರವಾಗಿ ಹೇರುವುದು ಸರಿಯಿಲ್ಲ. ಆರ್ಥಿಕ ಸಂಯೋಜನೆ ಮತ್ತು ಅಭಿವೃದ್ಧಿ ಮಂತ್ರ ಮಾತ್ರ ಸಂಯೋಜನೆಗೆ ಮಾರ್ಗಸೂಚಿ ಅಲ್ಲ. ಜಮ್ಮು ಕಾಶ್ಮೀರದ ಜನತೆಯ ಅನುಮತಿ ಮತ್ತು ಸಹಕಾರವಿಲ್ಲದೆ ಇದ್ದರೆ ಆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿ, 370ರ ವಿಧಿಯನ್ನು ರದ್ದು ಮಾಡುವುದಾಗಲೀ ಸುಸೂತ್ರವಾಗಿ ನಡೆಯಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...