Homeಅಂಕಣಗಳು370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

- Advertisement -
- Advertisement -

| ಎಚ್.ಎಸ್. ದೊರೆಸ್ವಾಮಿ |

2019ರ ಆಗಸ್ಟ್ 5ರಂದು 50000 ಸೈನಿಕರನ್ನು ಹಠಾತ್ತನೆ ಕಾಶ್ಮೀರಕ್ಕೆ ಕಳಿಸಲಾಯಿತು. ಕಫ್ರ್ಯೂ ವಿಧಿಸಲಾಯಿತು. ಅಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಭಾರತದ ಇತರ ಭಾಗದ ಜನರಿಗೆ ಗೊತ್ತಾಗದಂತೆ ಅಲ್ಲಿಯ ಸುದ್ದಿ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಯಿತು. ಕಾಶ್ಮೀರದ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಫಾರೂಕ್ ಅಬ್ದುಲ್ಲಾ, ಉಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಮುಂತಾದವರನ್ನು ಗೃಹಬಂಧನದಲ್ಲಿ ಇಡಲಾಯಿತು. ಕಾಶ್ಮೀರದ ಭವಿಷ್ಯವನ್ನು ಇತರ ರಾಜ್ಯಗಳ ಬಿಜೆಪಿ ಲೋಕಸಭಾ ಸದಸ್ಯರು ನಿರ್ಧರಿಸಿಬಿಟ್ಟರು. ಆರ್ಟಿಕಲ್ 370ನ್ನು ಹಿಂಪಡೆಯಲಾಯಿತು. ಪಾರ್ಲಿಮೆಂಟಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು, ಇನ್ನೂ ಖಚಿತವಾಗಿ ಹೇಳಬೇಕಾದರೆ ಮೋದಿ ಮತ್ತು ಅಮಿತ್ ಶಾರವರು ಕಾಶ್ಮೀರದ ಭವಿಷ್ಯವನ್ನು ನಿರ್ಧರಿಸಿಬಿಟ್ಟರು.

370ನೇ ವಿಧಿಯನ್ನು ತಿದ್ದುಪಡಿ ಮಾಡುವ ಮೊದಲು ಕಾಶ್ಮೀರ ಜನರ ಅಭಿಪ್ರಾಯ ಕೇಳಬೇಕಾಗಿತ್ತು. ಲೋಕಸಭೆಯ ವಿರೋಧ ಪಕ್ಷದವರ ಅಭಿಪ್ರಾಯ ಏನೆಂದು ತಿಳಿಯಬೇಕಿತ್ತು. ಕೇಂದ್ರ ಸರ್ಕಾರ ಈ ರೀತಿ ಹಠತ್ತಾಗಿ ಕಾಶ್ಮೀರದ ಮೇಲೆ ತಮ್ಮ ತೀರ್ಮಾನ ಹೇರುವ ಬದಲು ಮೇಲೆ ಹೇಳಿದ ಎಲ್ಲರ ಒಟ್ಟು ಅಭಿಪ್ರಾಯವನ್ನು ತಿಳಿಯುವ ಅವಶ್ಯಕತೆ ಇತ್ತು.

ಹಿಂದೆ ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಕೂಡಿಸಿ ವಿಶಾಲಾಂಧ್ರ ರಚಿಸಬೇಕೆಂದು ಸರ್ಕಾರ ತೀರ್ಮಾನಿಸಿತು. ಎಲ್ಲಾ ದೃಷ್ಟಿಯಿಂದಲೂ ಹಿಂದುಳಿದಿದ್ದ ತೆಲಂಗಾಣವನ್ನು ಬುದ್ಧಿವಂತರೂ, ಐಶ್ವರ್ಯವಂತರೂ, ಸಾಹಸಿ ಉದ್ಯಮಿಗಳೂ ಆದ ಆಂಧ್ರ ಪ್ರದೇಶದವರ ವಶಕ್ಕೆ ವಸಾಹತು ನೀಡಿದಂತೆ ನೀಡಬೇಕೆಂಬ ರೀತಿಯಲ್ಲಿ ಈ ಘೋಷಣೆ ಮಾಡಿತು. ಹಾಗೆಯೇ ತೆಲಂಗಾಣದವರಿಗೆ ತಮ್ಮ ನದಿಗಳ ಮೇಲಿನ ಹಕ್ಕುಗಳ ಬಗೆಗೂ ಮತ್ತು ನೀರಿನ ಭದ್ರತೆಯ ಬಗೆಗೂ ಕಾಳಜಿ ಇತ್ತು.

ಈ ಕಾರಣಗಳಿಗಾಗಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಬೇಕೆಂದು ತೆಲಂಗಾಣದ ನಾಯಕರು ಅಭಿಪ್ರಾಯಪಟ್ಟರು. ಆದರೂ 1956ರಲ್ಲಿ ತೆಲಂಗಾಣ ಒಳಗೊಂಡ ಆಂಧ್ರಪ್ರದೇಶ ಅಸ್ತಿತ್ವಕ್ಕೆ ಬಂತು. ಈ ಮಧ್ಯೆ ತೆಲಂಗಾಣದ ಹಿಂದುಳಿದಿರುವಿಕೆಯನ್ನು ಸುಧಾರಿಸುವ ಆಶ್ವಾಸನೆಗಳು ಕೇಂದ್ರ ಸರ್ಕಾರದಿಂದ ಪ್ರಕಟವಾದವು. ಆ ಭರವಸೆಗಳು ಭರವಸೆಗಳಾಗಿಯೇ ಉಳಿದವು.

ಕಾಶ್ಮೀರದ 370ನೇ ವಿಧಿ ಹಾಗೂ ಆಂಧ್ರಪ್ರದೇಶದಲ್ಲಿ ತೆಲಂಗಾಣವನ್ನು ವಿಲೀನಗೊಳಿಸುವ ಮಸೂದೆಗಳನ್ನು ಪಾರ್ಲಿಮೆಂಟ್ ಅಧಿವೇಶನದ ಕೊನೆಯ ದಿನಗಳಲ್ಲಿ ಮಂಡಿಸಲಾಯಿತು. ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ. ಜಂಟಿ ಸಮಿತಿಗೆ ಒಪ್ಪಿಸುವುದಕ್ಕೂ ಸರ್ಕಾರ ಒಪ್ಪಲಿಲ್ಲ. ರಾಜ್ಯ ಸರ್ಕಾರಗಳ ಹಾಗೂ ಶಾಸನಸಭೆಯ ಅಭಿಪ್ರಾಯ ತಿಳಿಯಲು ಅವಕಾಶ ಕಲ್ಪಿಸಲಿಲ್ಲ. ಅಂದಹಾಗೆ ಇದಕ್ಕೆ ಮೊದಲೇ ಕಾಶ್ಮೀರ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತವನ್ನು ಕಾಶ್ಮೀರದ ಮೇಲೆ ಹೇರಲಾಗಿತ್ತು.

ಜಮ್ಮು ಕಾಶ್ಮೀರಗಳ ಗಲಭೆಗಳು, ಭಯೋತ್ಪಾದಕ ಕೃತ್ಯಗಳು 370ನೇ ವಿಧಿಯನ್ನು ತೆಗೆದುಹಾಕುವುದರಿಂದ ಕೊನೆಗೊಳ್ಳುವುದು ಎಂದು ಗೃಹ ಸಚಿವರು ಹೇಳಿದ್ದಾರೆ. ಕಾಶ್ಮೀರದಲ್ಲಿ ಒಂದು ಸಶಕ್ತ ಸಮ್ಮಿಶ್ರ ಸರ್ಕಾರ ಇದ್ದರೆ ಮಾತ್ರ ಅಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುವುದು. ಅದಿಲ್ಲವಾದರೆ ಬೂದಿ ಮುಚ್ಚಿದ ಕೆಂಡದಂತಿರುವ ಈ ಪರಿಸ್ಥಿತಿ ಯಾವಾಗ ಬೇಕಾದರೂ ಹದಗೆಡಬಹುದು. ಅಲ್ಲಿಯ ಸರ್ಕಾರಕ್ಕೂ ಕೇಂದ್ರ ಸರ್ಕಾರಕ್ಕೂ ಒಂದು ಮಧುರ ಬಾಂಧವ್ಯ ಇದ್ದರೆ ಮಾತ್ರ ಶಾಶ್ವತ ಶಾಂತಿ ನೆಲೆಸೀತು. ಒಂದು ಬಹುಮುಖ್ಯ ವಿಚಾರವೆಂದರೆ ಮಿಲಿಟರಿಯ ಮೃಗೀಯ ಶಕ್ತಿ ಬಳಸಿಕೊಂಡು ಕಾಶ್ಮೀರದಲ್ಲಿ ಶಾಂತಿಸ್ಥಾಪನೆ ಮಾಡುವುದು ಆಗದ ಮಾತು.

ಶ್ರೀಲಂಕಾದಲ್ಲಿ ತಮಿಳರಿಗೆ ಸ್ವತಂತ್ರವಾಗಿ ಬದುಕಲು ಸಿಂಹಳೀಯರು ಅವಕಾಶ ಮಾಡಿಕೊಡಲು ನಿರಾಕರಿಸಿ ಅವರಿಗೆ ಕಿರುಕುಳ ಕೊಟ್ಟಿದ್ದರಿಂದ ಅಲ್ಲಿ ಎಲ್.ಟಿ.ಟಿ.ಈಗೂ ಸಿಂಹಳ ಸರ್ಕಾರಕ್ಕೂ ಯುದ್ಧವೇ ನಡೆದುಹೋಯಿತು ಎಂಬುದನ್ನು ನಾವು ಮರೆಯಬಾರದು. ಅಂತಹ ಯುದ್ಧದಲ್ಲಿ ಮನುಷ್ಯತ್ವವೇ ಕರಗಿಹೋಗುವ ಮಾರಣಹೋಮಗಳು ನಡೆದವು.

370ನೇ ವಿಧಿಯನ್ನು ಆಗ ರಾಷ್ಟ್ರಾಧ್ಯಕ್ಷರ ಆದೇಶದ ಮೇರೆಗೆ ಜಾರಿಗೆ ತರಲಾಗಿತ್ತು. ಈಗ ರಾಷ್ಟ್ರಾಧ್ಯಕ್ಷರ ಆದೇಶದಿಂದಲೇ ಕಿತ್ತು ಹಾಕುತ್ತೇವೆ ಆದ್ದರಿಂದ ಅದು ರಾಜ್ಯಾಂಗದ ಉಲ್ಲಂಘನೆಯಲ್ಲ ಎಂದು ಅಮಿತ್ ಶಾ ಅವರು ಹೇಳುತ್ತಾರೆ. ಇದು ಅಷ್ಟು ಸರಳ ಸಂಗತಿಯಾಗಿಲ್ಲ. ನಾವು ಪ್ರೀತಿಯಿಂದ ಒಲಿಸಿಕೊಳ್ಳಬೇಕಿದ್ದ, ಒಂದು ಭೂಭಾಗವು ನಮ್ಮೊಡನೆ ಸೇರಲು ಮಾಡಿಕೊಂಡಿದ್ದ ಕರಾರು ಅದು. ದೇಶ ರೂಪುಗೊಳ್ಳಬೇಕಾದ ಸಂದರ್ಭದಲ್ಲಿ ಮಾಡಿಕೊಳ್ಳಲಾಗಿದ್ದ ಅಂತಹ ರಾಜ್ಯಾಂಗ ಬದಲಾವಣೆಗಳನ್ನು ಹೀಗೆ ಅಧಿಕಾರಬಲದಿಂದ ಹಿಂತೆಗೆದುಕೊಳ್ಳುವ ಅಧಿಕಾರ ರಾಷ್ಟ್ರಾಧ್ಯಕ್ಷರಿಗೆ ಇದೆಯೇ ಎಂಬುದು ಚರ್ಚೆಗೆ ಬರುವ ಸಂಭವವಿದೆ. ಕಾಲ ನಿಂತ ನೀರಲ್ಲ. ಬದಲಾವಣೆಗಳು ಬೇಕಾಗಬಹುದು. ಅಂತಹ ಸಂದರ್ಭದಲ್ಲಿ ಮೆಜಾರಿಟಿ ಇದೆ, ಬದಲಿಸಿಕೊಳ್ಳುತ್ತೇವೆ ಎಂಬ ಧೋರಣೆಗಿಂತ, ಯಾರ ಮೇಲೆ ಇದರ ಹೆಚ್ಚಿನ ಪರಿಣಾಮ ಆಗುತ್ತದೋ, ಅವರ ಅಭಿಪ್ರಾಯವನ್ನು ಪರಿಗಣಿಸುವುದಕ್ಕೆ ಹೆಚ್ಚಿನ ಮುತುವರ್ಜಿ ಇರಬೇಕು.

ಸ್ವಾತಂತ್ರ್ಯ ಬಂದಮೇಲೆ ಸಂಸ್ಥಾನಗಳ ರಾಜರುಗಳು, ಇಂಡಿಯನ್ ಯೂನಿಯನ್ ಜೊತೆಗೆ ಕೂಡಿಕೊಂಡಾಗ ಅವರಿಗೆ ರಾಜಧನ ನೀಡಬೇಕೆಂದು ಒಪ್ಪಂದ ಆಗಿತ್ತು. ಮುಂದೆ ರಾಜಧನ ಕೊಡುವುದಿಲ್ಲವೆಂದು ರಾಷ್ಟ್ರಾಧ್ಯಕ್ಷರು ತೀರ್ಮಾನ ತೆಗೆದುಕೊಂಡಾಗ ಮಾಜಿ ರಾಜರು ಸವ್ರ್ಚೊಚ್ಚ ನ್ಯಾಯಾಲಯದ ಮೆಟ್ಟಿಲು ಏರಿದರು. ಒಮ್ಮೆ ಕೊಡಲು ಒಪ್ಪಿಕೊಂಡಿರುವ ರಾಜಧನವನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಅಂದಿನ ಕಾಶ್ಮೀರ ರಾಜರೊಡನೆ ಮಾಡಿಕೊಂಡಿರುವ ಒಪ್ಪಂದವನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದು ಕಾನೂನಾತ್ಮಕವಾಗಿ ಮತ್ತು ನ್ಯಾಯಯುತವಾಗಿ ಸಾಧುವೇ? ಈ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಎತ್ತಲು ಸಾಧ್ಯವೇ ಎಂಬುದನ್ನು ಕಾನೂನುಪಂಡಿತರು ಜನರಿಗೆ ತಿಳಿಸಿ ಹೇಳಬೇಕು.

ಈ ದೇಶದ ಆಡಳಿತದ ಹೊಣೆಗಾರಿಕೆ ಪ್ರಜೆಯದು. ರಾಷ್ಟ್ರಾಧ್ಯಕ್ಷರಾಗಲಿ, ಸರ್ಕಾರವೇ ಆಗಲಿ ತಮ್ಮ ಸಾರ್ವಭೌಮತ್ವವನ್ನು ಪ್ರಜೆಗಳ ಮೇಲೆ ಕಾನೂನುಬಾಹಿರವಾಗಿ ಹೇರುವುದು ಸರಿಯಿಲ್ಲ. ಆರ್ಥಿಕ ಸಂಯೋಜನೆ ಮತ್ತು ಅಭಿವೃದ್ಧಿ ಮಂತ್ರ ಮಾತ್ರ ಸಂಯೋಜನೆಗೆ ಮಾರ್ಗಸೂಚಿ ಅಲ್ಲ. ಜಮ್ಮು ಕಾಶ್ಮೀರದ ಜನತೆಯ ಅನುಮತಿ ಮತ್ತು ಸಹಕಾರವಿಲ್ಲದೆ ಇದ್ದರೆ ಆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿ, 370ರ ವಿಧಿಯನ್ನು ರದ್ದು ಮಾಡುವುದಾಗಲೀ ಸುಸೂತ್ರವಾಗಿ ನಡೆಯಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...