Homeಅಂಕಣಗಳು370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

- Advertisement -
- Advertisement -

| ಎಚ್.ಎಸ್. ದೊರೆಸ್ವಾಮಿ |

2019ರ ಆಗಸ್ಟ್ 5ರಂದು 50000 ಸೈನಿಕರನ್ನು ಹಠಾತ್ತನೆ ಕಾಶ್ಮೀರಕ್ಕೆ ಕಳಿಸಲಾಯಿತು. ಕಫ್ರ್ಯೂ ವಿಧಿಸಲಾಯಿತು. ಅಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಭಾರತದ ಇತರ ಭಾಗದ ಜನರಿಗೆ ಗೊತ್ತಾಗದಂತೆ ಅಲ್ಲಿಯ ಸುದ್ದಿ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಯಿತು. ಕಾಶ್ಮೀರದ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಫಾರೂಕ್ ಅಬ್ದುಲ್ಲಾ, ಉಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಮುಂತಾದವರನ್ನು ಗೃಹಬಂಧನದಲ್ಲಿ ಇಡಲಾಯಿತು. ಕಾಶ್ಮೀರದ ಭವಿಷ್ಯವನ್ನು ಇತರ ರಾಜ್ಯಗಳ ಬಿಜೆಪಿ ಲೋಕಸಭಾ ಸದಸ್ಯರು ನಿರ್ಧರಿಸಿಬಿಟ್ಟರು. ಆರ್ಟಿಕಲ್ 370ನ್ನು ಹಿಂಪಡೆಯಲಾಯಿತು. ಪಾರ್ಲಿಮೆಂಟಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು, ಇನ್ನೂ ಖಚಿತವಾಗಿ ಹೇಳಬೇಕಾದರೆ ಮೋದಿ ಮತ್ತು ಅಮಿತ್ ಶಾರವರು ಕಾಶ್ಮೀರದ ಭವಿಷ್ಯವನ್ನು ನಿರ್ಧರಿಸಿಬಿಟ್ಟರು.

370ನೇ ವಿಧಿಯನ್ನು ತಿದ್ದುಪಡಿ ಮಾಡುವ ಮೊದಲು ಕಾಶ್ಮೀರ ಜನರ ಅಭಿಪ್ರಾಯ ಕೇಳಬೇಕಾಗಿತ್ತು. ಲೋಕಸಭೆಯ ವಿರೋಧ ಪಕ್ಷದವರ ಅಭಿಪ್ರಾಯ ಏನೆಂದು ತಿಳಿಯಬೇಕಿತ್ತು. ಕೇಂದ್ರ ಸರ್ಕಾರ ಈ ರೀತಿ ಹಠತ್ತಾಗಿ ಕಾಶ್ಮೀರದ ಮೇಲೆ ತಮ್ಮ ತೀರ್ಮಾನ ಹೇರುವ ಬದಲು ಮೇಲೆ ಹೇಳಿದ ಎಲ್ಲರ ಒಟ್ಟು ಅಭಿಪ್ರಾಯವನ್ನು ತಿಳಿಯುವ ಅವಶ್ಯಕತೆ ಇತ್ತು.

ಹಿಂದೆ ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಕೂಡಿಸಿ ವಿಶಾಲಾಂಧ್ರ ರಚಿಸಬೇಕೆಂದು ಸರ್ಕಾರ ತೀರ್ಮಾನಿಸಿತು. ಎಲ್ಲಾ ದೃಷ್ಟಿಯಿಂದಲೂ ಹಿಂದುಳಿದಿದ್ದ ತೆಲಂಗಾಣವನ್ನು ಬುದ್ಧಿವಂತರೂ, ಐಶ್ವರ್ಯವಂತರೂ, ಸಾಹಸಿ ಉದ್ಯಮಿಗಳೂ ಆದ ಆಂಧ್ರ ಪ್ರದೇಶದವರ ವಶಕ್ಕೆ ವಸಾಹತು ನೀಡಿದಂತೆ ನೀಡಬೇಕೆಂಬ ರೀತಿಯಲ್ಲಿ ಈ ಘೋಷಣೆ ಮಾಡಿತು. ಹಾಗೆಯೇ ತೆಲಂಗಾಣದವರಿಗೆ ತಮ್ಮ ನದಿಗಳ ಮೇಲಿನ ಹಕ್ಕುಗಳ ಬಗೆಗೂ ಮತ್ತು ನೀರಿನ ಭದ್ರತೆಯ ಬಗೆಗೂ ಕಾಳಜಿ ಇತ್ತು.

ಈ ಕಾರಣಗಳಿಗಾಗಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಬೇಕೆಂದು ತೆಲಂಗಾಣದ ನಾಯಕರು ಅಭಿಪ್ರಾಯಪಟ್ಟರು. ಆದರೂ 1956ರಲ್ಲಿ ತೆಲಂಗಾಣ ಒಳಗೊಂಡ ಆಂಧ್ರಪ್ರದೇಶ ಅಸ್ತಿತ್ವಕ್ಕೆ ಬಂತು. ಈ ಮಧ್ಯೆ ತೆಲಂಗಾಣದ ಹಿಂದುಳಿದಿರುವಿಕೆಯನ್ನು ಸುಧಾರಿಸುವ ಆಶ್ವಾಸನೆಗಳು ಕೇಂದ್ರ ಸರ್ಕಾರದಿಂದ ಪ್ರಕಟವಾದವು. ಆ ಭರವಸೆಗಳು ಭರವಸೆಗಳಾಗಿಯೇ ಉಳಿದವು.

ಕಾಶ್ಮೀರದ 370ನೇ ವಿಧಿ ಹಾಗೂ ಆಂಧ್ರಪ್ರದೇಶದಲ್ಲಿ ತೆಲಂಗಾಣವನ್ನು ವಿಲೀನಗೊಳಿಸುವ ಮಸೂದೆಗಳನ್ನು ಪಾರ್ಲಿಮೆಂಟ್ ಅಧಿವೇಶನದ ಕೊನೆಯ ದಿನಗಳಲ್ಲಿ ಮಂಡಿಸಲಾಯಿತು. ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ. ಜಂಟಿ ಸಮಿತಿಗೆ ಒಪ್ಪಿಸುವುದಕ್ಕೂ ಸರ್ಕಾರ ಒಪ್ಪಲಿಲ್ಲ. ರಾಜ್ಯ ಸರ್ಕಾರಗಳ ಹಾಗೂ ಶಾಸನಸಭೆಯ ಅಭಿಪ್ರಾಯ ತಿಳಿಯಲು ಅವಕಾಶ ಕಲ್ಪಿಸಲಿಲ್ಲ. ಅಂದಹಾಗೆ ಇದಕ್ಕೆ ಮೊದಲೇ ಕಾಶ್ಮೀರ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತವನ್ನು ಕಾಶ್ಮೀರದ ಮೇಲೆ ಹೇರಲಾಗಿತ್ತು.

ಜಮ್ಮು ಕಾಶ್ಮೀರಗಳ ಗಲಭೆಗಳು, ಭಯೋತ್ಪಾದಕ ಕೃತ್ಯಗಳು 370ನೇ ವಿಧಿಯನ್ನು ತೆಗೆದುಹಾಕುವುದರಿಂದ ಕೊನೆಗೊಳ್ಳುವುದು ಎಂದು ಗೃಹ ಸಚಿವರು ಹೇಳಿದ್ದಾರೆ. ಕಾಶ್ಮೀರದಲ್ಲಿ ಒಂದು ಸಶಕ್ತ ಸಮ್ಮಿಶ್ರ ಸರ್ಕಾರ ಇದ್ದರೆ ಮಾತ್ರ ಅಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುವುದು. ಅದಿಲ್ಲವಾದರೆ ಬೂದಿ ಮುಚ್ಚಿದ ಕೆಂಡದಂತಿರುವ ಈ ಪರಿಸ್ಥಿತಿ ಯಾವಾಗ ಬೇಕಾದರೂ ಹದಗೆಡಬಹುದು. ಅಲ್ಲಿಯ ಸರ್ಕಾರಕ್ಕೂ ಕೇಂದ್ರ ಸರ್ಕಾರಕ್ಕೂ ಒಂದು ಮಧುರ ಬಾಂಧವ್ಯ ಇದ್ದರೆ ಮಾತ್ರ ಶಾಶ್ವತ ಶಾಂತಿ ನೆಲೆಸೀತು. ಒಂದು ಬಹುಮುಖ್ಯ ವಿಚಾರವೆಂದರೆ ಮಿಲಿಟರಿಯ ಮೃಗೀಯ ಶಕ್ತಿ ಬಳಸಿಕೊಂಡು ಕಾಶ್ಮೀರದಲ್ಲಿ ಶಾಂತಿಸ್ಥಾಪನೆ ಮಾಡುವುದು ಆಗದ ಮಾತು.

ಶ್ರೀಲಂಕಾದಲ್ಲಿ ತಮಿಳರಿಗೆ ಸ್ವತಂತ್ರವಾಗಿ ಬದುಕಲು ಸಿಂಹಳೀಯರು ಅವಕಾಶ ಮಾಡಿಕೊಡಲು ನಿರಾಕರಿಸಿ ಅವರಿಗೆ ಕಿರುಕುಳ ಕೊಟ್ಟಿದ್ದರಿಂದ ಅಲ್ಲಿ ಎಲ್.ಟಿ.ಟಿ.ಈಗೂ ಸಿಂಹಳ ಸರ್ಕಾರಕ್ಕೂ ಯುದ್ಧವೇ ನಡೆದುಹೋಯಿತು ಎಂಬುದನ್ನು ನಾವು ಮರೆಯಬಾರದು. ಅಂತಹ ಯುದ್ಧದಲ್ಲಿ ಮನುಷ್ಯತ್ವವೇ ಕರಗಿಹೋಗುವ ಮಾರಣಹೋಮಗಳು ನಡೆದವು.

370ನೇ ವಿಧಿಯನ್ನು ಆಗ ರಾಷ್ಟ್ರಾಧ್ಯಕ್ಷರ ಆದೇಶದ ಮೇರೆಗೆ ಜಾರಿಗೆ ತರಲಾಗಿತ್ತು. ಈಗ ರಾಷ್ಟ್ರಾಧ್ಯಕ್ಷರ ಆದೇಶದಿಂದಲೇ ಕಿತ್ತು ಹಾಕುತ್ತೇವೆ ಆದ್ದರಿಂದ ಅದು ರಾಜ್ಯಾಂಗದ ಉಲ್ಲಂಘನೆಯಲ್ಲ ಎಂದು ಅಮಿತ್ ಶಾ ಅವರು ಹೇಳುತ್ತಾರೆ. ಇದು ಅಷ್ಟು ಸರಳ ಸಂಗತಿಯಾಗಿಲ್ಲ. ನಾವು ಪ್ರೀತಿಯಿಂದ ಒಲಿಸಿಕೊಳ್ಳಬೇಕಿದ್ದ, ಒಂದು ಭೂಭಾಗವು ನಮ್ಮೊಡನೆ ಸೇರಲು ಮಾಡಿಕೊಂಡಿದ್ದ ಕರಾರು ಅದು. ದೇಶ ರೂಪುಗೊಳ್ಳಬೇಕಾದ ಸಂದರ್ಭದಲ್ಲಿ ಮಾಡಿಕೊಳ್ಳಲಾಗಿದ್ದ ಅಂತಹ ರಾಜ್ಯಾಂಗ ಬದಲಾವಣೆಗಳನ್ನು ಹೀಗೆ ಅಧಿಕಾರಬಲದಿಂದ ಹಿಂತೆಗೆದುಕೊಳ್ಳುವ ಅಧಿಕಾರ ರಾಷ್ಟ್ರಾಧ್ಯಕ್ಷರಿಗೆ ಇದೆಯೇ ಎಂಬುದು ಚರ್ಚೆಗೆ ಬರುವ ಸಂಭವವಿದೆ. ಕಾಲ ನಿಂತ ನೀರಲ್ಲ. ಬದಲಾವಣೆಗಳು ಬೇಕಾಗಬಹುದು. ಅಂತಹ ಸಂದರ್ಭದಲ್ಲಿ ಮೆಜಾರಿಟಿ ಇದೆ, ಬದಲಿಸಿಕೊಳ್ಳುತ್ತೇವೆ ಎಂಬ ಧೋರಣೆಗಿಂತ, ಯಾರ ಮೇಲೆ ಇದರ ಹೆಚ್ಚಿನ ಪರಿಣಾಮ ಆಗುತ್ತದೋ, ಅವರ ಅಭಿಪ್ರಾಯವನ್ನು ಪರಿಗಣಿಸುವುದಕ್ಕೆ ಹೆಚ್ಚಿನ ಮುತುವರ್ಜಿ ಇರಬೇಕು.

ಸ್ವಾತಂತ್ರ್ಯ ಬಂದಮೇಲೆ ಸಂಸ್ಥಾನಗಳ ರಾಜರುಗಳು, ಇಂಡಿಯನ್ ಯೂನಿಯನ್ ಜೊತೆಗೆ ಕೂಡಿಕೊಂಡಾಗ ಅವರಿಗೆ ರಾಜಧನ ನೀಡಬೇಕೆಂದು ಒಪ್ಪಂದ ಆಗಿತ್ತು. ಮುಂದೆ ರಾಜಧನ ಕೊಡುವುದಿಲ್ಲವೆಂದು ರಾಷ್ಟ್ರಾಧ್ಯಕ್ಷರು ತೀರ್ಮಾನ ತೆಗೆದುಕೊಂಡಾಗ ಮಾಜಿ ರಾಜರು ಸವ್ರ್ಚೊಚ್ಚ ನ್ಯಾಯಾಲಯದ ಮೆಟ್ಟಿಲು ಏರಿದರು. ಒಮ್ಮೆ ಕೊಡಲು ಒಪ್ಪಿಕೊಂಡಿರುವ ರಾಜಧನವನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಅಂದಿನ ಕಾಶ್ಮೀರ ರಾಜರೊಡನೆ ಮಾಡಿಕೊಂಡಿರುವ ಒಪ್ಪಂದವನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದು ಕಾನೂನಾತ್ಮಕವಾಗಿ ಮತ್ತು ನ್ಯಾಯಯುತವಾಗಿ ಸಾಧುವೇ? ಈ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಎತ್ತಲು ಸಾಧ್ಯವೇ ಎಂಬುದನ್ನು ಕಾನೂನುಪಂಡಿತರು ಜನರಿಗೆ ತಿಳಿಸಿ ಹೇಳಬೇಕು.

ಈ ದೇಶದ ಆಡಳಿತದ ಹೊಣೆಗಾರಿಕೆ ಪ್ರಜೆಯದು. ರಾಷ್ಟ್ರಾಧ್ಯಕ್ಷರಾಗಲಿ, ಸರ್ಕಾರವೇ ಆಗಲಿ ತಮ್ಮ ಸಾರ್ವಭೌಮತ್ವವನ್ನು ಪ್ರಜೆಗಳ ಮೇಲೆ ಕಾನೂನುಬಾಹಿರವಾಗಿ ಹೇರುವುದು ಸರಿಯಿಲ್ಲ. ಆರ್ಥಿಕ ಸಂಯೋಜನೆ ಮತ್ತು ಅಭಿವೃದ್ಧಿ ಮಂತ್ರ ಮಾತ್ರ ಸಂಯೋಜನೆಗೆ ಮಾರ್ಗಸೂಚಿ ಅಲ್ಲ. ಜಮ್ಮು ಕಾಶ್ಮೀರದ ಜನತೆಯ ಅನುಮತಿ ಮತ್ತು ಸಹಕಾರವಿಲ್ಲದೆ ಇದ್ದರೆ ಆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿ, 370ರ ವಿಧಿಯನ್ನು ರದ್ದು ಮಾಡುವುದಾಗಲೀ ಸುಸೂತ್ರವಾಗಿ ನಡೆಯಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...