Homeಅಂಕಣಗಳುಚುನಾವಣಾ ಅಕ್ರಮ ತಡೆಯುವ ವಿಧಾನ ಸರಿಯಿದೆಯೇ?

ಚುನಾವಣಾ ಅಕ್ರಮ ತಡೆಯುವ ವಿಧಾನ ಸರಿಯಿದೆಯೇ?

- Advertisement -
- Advertisement -

ಚುನಾವಣಾ ಆಯೋಗ ಪೋಲೀಸ್ ಇಲಾಖೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲವೂ ಚುನಾವಣಾ ಭ್ರಷ್ಟಾಚಾರ ತಡೆಯುವುದರಲ್ಲಿ ಸೋತಿವೆ. ಇಲ್ಲವೇ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳಿಗೆ ಸಹಾಯಕವಾಗಿವೆ ಎಂದು ಖಚಿತವಾಗಿ ಹೇಳಬಹುದು.

ನಾನು ನನ್ನ ಅನುಭವದಿಂದ ಈ ಗುರುತರ ಆಪಾದನೆಯನ್ನು ಮಾಡುತ್ತಿದ್ದೇನೆ. ದಿವಂಗತ ಪ್ರಭಾಕರ ರೆಡ್ಡಿ ಮತ್ತು ನಾನು ಕೂಡಿಕೊಂಡು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಚಿಸಿದ್ದೆವು. ನಾವು ಒಮ್ಮೆ ರಾಜ್ಯದ ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ನಡೆಸಿದೆವು. ಆ ನಂತರ ಒಂದು ಡಿಮ್ಯಾಂಡ್ ಅವರ ಮುಂದಿಟ್ಟೆವು. ಡಿಮ್ಯಾಂಡ್ ಇದು – ನೀವು ಚುನಾವಣೆ ಸಮಯದಲ್ಲಿ ಇಷ್ಟು ಬ್ಯಾರಲ್ ಮದ್ಯ ಹಿಡಿದೆವು, ಇಷ್ಟು ಕೋಟಿ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದೆವು, ಸೀರೆ-ಪಂಚೆ ಸಾವಿರ ಗಟ್ಟಲೆ ಹಿಡಿದೆವು, ಚಿನ್ನ-ಬೆಳ್ಳಿ ಸಾಮಾನು ಹಿಡಿದೆವು ಎಂದು ಚುನಾವಣೆ ಮುಗಿಯುವವರೆಗೆ ಪತ್ರಿಕೆಗೆ ವರದಿ ಮಾಡುತ್ತೀರಿ. ಆದರೆ ಮುಂದೆ ಹಿಡಿದ ಹಣ, ಮದ್ಯ, ಜವಳಿ, ಚಿನ್ನ-ಬೆಳ್ಳಿ ಸಾಮಾನುಗಳು ಏನಾದವು? ಎಲ್ಲಿ ಹೋದವು, ಹಿಡಿದವರನ್ನು ನ್ಯಾಯಾಲಯದ ಮುಂದೆ ನಿಲ್ಲಿಸಿದಿರಾ? ನೀವು ಹಿಡಿದವರಲ್ಲಿ ಎಷ್ಟು ಜನಕ್ಕೆ ಏನು ಶಿಕ್ಷೆಯಾಗಿದೆ? ಯಾವುದನ್ನೂ ನೀವು ಪ್ರಕಟಿಸುವುದಿಲ್ಲ. ಹಿಡಿದ ಎಲ್ಲ ಹಣ, ಮದ್ಯ ಇತರ ಸಾಮಗ್ರಿಗಳು ನಿಮ್ಮ ಮನೆಗಳಲ್ಲಿದೆಯೇ? ಖಜಾನೆಯಲ್ಲಿದೆಯೇ? ನ್ಯಾಯಾಲಯದ ವಶದಲ್ಲಿದೆಯೇ? ಪೋಲೀಸ್ ಠಾಣೆಗಳಲ್ಲಿದೆಯೇ? ಒಂದೂ ಗೊತ್ತಾಗುವುದಿಲ್ಲ. ಆದ್ದರಿಂದ ಪ್ರತಿ ಒಂದು ಸಾರಿ ಸಾರ್ವತ್ರಿಕ ಚುನಾವಣೆಗಳು ನಡೆದಾಗಲೂ ಈ ಕುರಿತು ಒಂದು ಶ್ವೇತ ಪತ್ರ ಹೊರಡಿಸಿ ಎಂದು ಪಟ್ಟು ಹಿಡಿದೆವು.

ಚುನಾವಣಾ ಕಚೇರಿಯವರು ಚುನಾವಣಾ ಸಂದರ್ಭದಲ್ಲಿ ಹಿಡಿಯಲಾದ ಎಲ್ಲವನ್ನೂ ನಾವು ಪೋಲೀಸರ ವಶಕ್ಕೆ ಕೊಡುತ್ತೇವೆ. ಅವರೇ ಕೇಸುಗಳನ್ನು ಹಾಕುತ್ತಾರೆ. ನಾನು ಎಲ್ಲಾ ಎಸ್‌ಪಿಗಳಿಗೆ ಪತ್ರ ಬರೆದು ನಿಮಗೆ ನೀವು ಕೇಳಿರುವ ಎಲ್ಲಾ ವಿವರಗಳನ್ನು ಕೊಡಲು ತಿಳಿಸುತ್ತೇನೆ ಎಂದು ಹೇಳಿ ಜವಾಬ್ದಾರಿಯಿಂದ ಜಾರಿಕೊಂಡರು. ನಾಲ್ಕಾರು ತಿಂಗಳ ಮೇಲೆ ನಮಗೆ ಎರಡು ಜಿಲ್ಲೆಗಳ ಎಸ್‌ಪಿಗಳಿಂದ ‘ನಮ್ಮ ಜಿಲ್ಲೆಯಲ್ಲಿ ಇಂತಹ ಪ್ರಸಂಗಗಳು ನಡೆದೇ ಇಲ್ಲ’ ಎಂಬ ಉತ್ತರ ಬಂದಿತ್ತು. ಉಳಿದ ಜಿಲ್ಲೆಗಳ ಯಾವ ಎಸ್‌ಪಿಯೂ ಉತ್ತರ ನೀಡುವ ಗೋಜಿಗೆ ಹೋಗಲಿಲ್ಲ. ಪೋಲೀಸ್ ವರಿಷ್ಠರ ಕಚೇರಿಗೆ ಹೋಗಿ ಅವರಿಗೆ ಎಸ್‌ಪಿಗಳ ಬೇಜವಬ್ದಾರಿಯುತ ಮೌನದ ಬಗೆಗೆ ತಿಳಿಸಿದೆವು.

ಮಾತುಕತೆಯೆಲ್ಲ ಆದಮೇಲೆ ಅವರು ತಿಳಿಸಿದ್ದು ಹೀಗೆ;- ‘ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಳ್ಳುವ ಎಲ್ಲಾ ಹಣವನ್ನು ಖಜಾನೆಗೆ ಕಟ್ಟಲಾಗುತ್ತದೆ, ಮದ್ಯವನ್ನು ನಾಶ ಮಾಡಲಾಗುತ್ತದೆ. ಆದರೆ ಇತರ ವಸ್ತುಗಳ ಬಗೆಗೆ ನಮಗೆ ಮಾಹಿತಿ ಇಲ್ಲ’ ಎಂದರು. ಜಪ್ತಿಯಾದ ಉಳಿಕೆ ಸಾಮಾನುಗಳು ಏನಾದವು? ಅದನ್ನು ಹೊಂದಿದ್ದವರ ಮೇಲೆ ಖಟ್ಲೆ ಹೂಡಲಾಯಿತೆ? ಅವರಿಗೆ ಶಿಕ್ಷೆ ಆಯಿತೆ? ಅವರು ಯಾವ ಅಭ್ಯರ್ಥಿಗಾಗಿ ಹಣ ತೆಗೆದುಕೊಂಡು ಹೋಗುತ್ತಿದ್ದರು? ಅಭ್ಯರ್ಥಿಯನ್ನು ನ್ಯಾಯಾಲಯದ ಮುಂದೆ ನಿಲ್ಲಿಸಲಾಯಿತೆ? ಅವರಿಗಾದ ಶಿಕ್ಷೆ ಏನು? ಇದರ ಮಾಹಿತಿಯನ್ನು ಯಾರೂ ಒದಗಿಸಲಿಲ್ಲ.

ಅಂದರೆ ಚುನಾವಣೆಯ ಸಂದರ್ಭದಲ್ಲಿ ಯಾವತ್ತೂ ನಡೆಯುವ ಪ್ರಹಸನ ಇದು. ಚುನಾವಣಾ ಆಯೋಗ ಚುನಾವಣೆಯ ಸಂದರ್ಭದಲ್ಲಿ ನಡೆಯುವ ದುರ್ವ್ಯವಹಾರಗಳನ್ನು ತಡೆಗಟ್ಟುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತದೆ ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೆ? ಚುನಾವಣಾ ಆಯೋಗಕ್ಕೆ, ಪೋಲಿಸರಿಗೆ, ಚುನಾವಣಾಧಿಕಾರಿಗಳಿಗೆ ನಿಜವಾಗಿ ಚುನಾವಣೆಯನ್ನು ಪರಿಶುದ್ಧಗೊಳಿಸಬೇಕೆಂಬ ಕಾತರವಿದ್ದಿದ್ದರೆ ಅವರು ಇಷ್ಟು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರಲಿಲ್ಲ. ಚುನಾವಣೆಯನ್ನು ಸುಧಾರಿಸಬೇಕೆಂಬ ಉತ್ಕಟೇಚ್ಛೆ ಇವರಿಗೆಲ್ಲ ಇದ್ದಿದ್ದರೆ ಈ ಎಲ್ಲಾ ಬಗೆಯ ಭ್ರಷ್ಟಾಚಾರವನ್ನು ತಡೆಗಟ್ಟಲು ಅವರು ಆದ್ಯತೆ ನೀಡುತ್ತಿದ್ದರು. ಅವರೆಲ್ಲ ಕಾಟಾಚಾರಕ್ಕೆ, ಜನರ ಕಣ್ಣಿಗೆ ಮಣ್ಣೆರಚುವುದಕ್ಕೆ ಕಾಟಾಚಾರದ ತಪಾಸಣೆ ಮಾಡುತ್ತಾರೆ. ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಹಾಗೂ ಪೋಲೀಸರ ಬೇಜವಾಬ್ದಾರಿತನ ಒಂದು ವರವಾಗಿ ಪರಿಣಮಿಸಿದೆ.

ನಾನು ಈ ಬಗೆಗೆ ಚುನಾವಣಾ ಆಯೋಗಕ್ಕೆ, ಒಂದು ಪತ್ರ ಬರೆದಿದ್ದೆ. ಅವರು ಆ ಪತ್ರಕ್ಕೆ ಉತ್ತರ ನೀಡುವ ಸೌಜನ್ಯವನ್ನು ತೋರಲಿಲ್ಲ.

ಚುನಾವಣಾ ಪದ್ದತಿಯಲ್ಲಿ ರೂಢಮೂಲ ಬದಲಾವಣೆಗಳನ್ನು ತರಬೇಕೆಂದು ನ್ಯಾ.ತಾರ್ಕುಂಡೆಯವರು ಮೊದಲುಗೊಂಡು ನೂರಾರು ಮಂದಿ ಸಲಹೆಗಳನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸುಧಾರಣೆ ಚುನಾವಣಾ ಆಯೋಗಕ್ಕೂ ಬೇಕಾಗಿಲ್ಲ, ಸರ್ಕಾರಕ್ಕೂ ಬೇಕಾಗಿಲ್ಲ. ಪಾರ್ಲಿಮೆಂಟ್ ಸದಸ್ಯರಿಗೆ ಈ ಸುಧಾರಣೆ ಆದರೆ ತಮಗೆ ಅಸ್ತಿತ್ವವಿಲ್ಲದೆ ಹೋಗುವುದೆಂಬ ಭಯವಿರುವುದರಿಂದ ಅವರು ಮೌನವನ್ನವಲಂಬಿಸುತ್ತಾರೆ.

ಶೇಷನ್ ಚುನಾವಣಾ ಆಯೋಗದ ಅಧ್ಯಕ್ಷರಾಗಿದ್ದಾಗ ಈಗ ಇರುವ ಕಾಯ್ದೆಗಳನ್ನೇ ಬಳಸಿಕೊಂಡು ಚುನಾವಣೆಯ ಅನೇಕ ಅಕ್ರಮಗಳನ್ನು ತಡೆದರು. ಪಾರ್ಲಿಮೆಂಟ್ ಸದಸ್ಯರಿಗೆ ಸರ್ಕಾರಗಳಿಗೆ ನಡುಕ ಹುಟ್ಟಿಸಿದ್ದರು. ಶೇಷನ್‌ರವರಾದ ಮೇಲೆ ಅಧಿಕಾರಕ್ಕೆ ಬಂದ ಯಾವ ಚುನಾವಣಾ ಆಯೋಗದ ಸದಸ್ಯರಿಗೂ ಶೇಷನ್‌ರವರ ಗಟ್ಸ್ ಇಲ್ಲವಾದ್ದರಿಂದ ಬದಲಾಗಿದ್ದ ಚುನಾವಣಾ ಪದ್ಧತಿ, ರಿವರ್ಸ್ಗೇರ್ ಹೊಡೆಯಿತು. ಅಪ್ಪ ಹಾಕಿದ ಆಲದಮರಕ್ಕೇ ನೇಣು ಹಾಕಿಕೊಳ್ಳುತ್ತಿದ್ದಾರೆ, ಶೇಷನ್ ನಂತರ ಬಂದ ಚುನಾವಣಾ ಆಯೋಗದ ಸದಸ್ಯರು.

ಸರ್ಕಾರ ನಡೆಸುವವರು ಯಾವ ಪಕ್ಷದವರಾದರೂ ಸರಿಯೇ ಚುನಾವಣೆಗೆ ಸ್ವಲ್ಪ ಮೊದಲು ತಮ್ಮ ಮಾತನ್ನು ಕೇಳುವ ಎಸ್‌ಪಿಗಳನ್ನು, ಜಿಲ್ಲಾಧಿಕಾರಿಗಳನ್ನು ತಮಗೆ ಬೇಕಾದ ಜಿಲ್ಲೆಗೆ ವರ್ಗಾಯಿಸುತ್ತಾರೆ. ಮುಖ್ಯವಾಗಿ ಎಸ್‌ಪಿಯ ಜವಾಬ್ದಾರಿ ಅವರ ಅಧೀನದ ಎಲ್ಲಾ ಠಾಣೆಗಳಿಗೂ ಫರ್ಮಾನು ನೀಡುವುದು. ಇಷ್ಟನೇ ನಂಬರ್ ಕಾರು ಅಥವಾ ಟ್ಯಾಕ್ಸಿ ನಮ್ಮ ಜಿಲ್ಲೆಗೆ ಬಂದರೆ ಅದರ ತಂಟೆಗೆ ಹೋಗಬಾರದು. ಚುನಾವಣೆ ಸಮಯದಲ್ಲಿ ಅವರು ಹಣ ತರಲಿ, ಏನೇ ತರಲಿ ಅದರ ತನಿಖೆ ಮಾಡಬಾರದು.

ಟ್ಯಾಕ್ಸಿಯಲ್ಲಿ ಮೈಸೂರಿಗೆ ಹೋಗುವಾಗ ಆ ಟ್ಯಾಕ್ಸಿ ಡ್ರೈವರ್ ತನ್ನ ಘನಂದಾರಿ ಕೆಲಸ ಕುರಿತು ನನಗೆ ಹೇಳಿದ ನನ್ನ ಹತ್ತಿರ ಹಣ ಕೊಟ್ಟು ಕಳಿಸುತ್ತಾರೆ. ಚುನಾವಣೆ ಸಂದರ್ಭದಲ್ಲಿ ಎಲ್ಲೂ ನನ್ನನ್ನು ತಡೆದು ಕಾರು ತಪಾಸಣೆ ಮಾಡುವ ಕೆಲಸ ನಡೆಯುವುದಿಲ್ಲ. ಅಲ್ಲಿಗೆ ಚುನಾವಣೆಗೆ ಸ್ವಲ್ಪ ಮೊದಲು ವರ್ಗಾವಣೆಯಾಗಿರುವಾಗ ಎಸ್‌ಪಿ ಎಲ್ಲಾ ಠಾಣೆಗಳಿಗೂ ನನ್ನ ಟ್ಯಾಕ್ಸಿ ಹಿಡಿಯದಂತೆ ತಾಕೀತು ಮಾಡಿರುತ್ತಾರೆ. ನಾನು ಆ ಸಂದರ್ಭದಲ್ಲಿ ನಾಲ್ಕಾರು ಸಲ ಜಿಲ್ಲಾ ಕೇಂದ್ರಗಳಿಗೆ ಹಣ ತೆಗೆದುಕೊಂಡು ಹೋಗಿ ತಲುಪಿಸಬೇಕಾಗುತ್ತದೆ ಎಂದು ಹೆಮ್ಮೆಯಿಂದ ಹೇಳಿದೆ.

ಈ ಲೇಖನ ಬರೆದ ಉದ್ದೇಶ ಇಷ್ಟೇ;- ಪ್ರತಿ ಒಂದು ಸಾರ್ವತ್ರಿಕ ಚುನಾವಣೆ ನಡೆದ ಒಂದು ವರ್ಷದ ಒಳಗೆ ಚುನಾವಣಾ ಆಯೋಗ ಒಂದು ಶ್ವೇತ ಪತ್ರ ಹೊರಡಿಸಿ ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು. ಆ ಶ್ವೇತ ಪತ್ರದಲ್ಲಿ ಆ ವರ್ಷ ನಡೆದ ಚುನಾವಣೆ ಸಂದರ್ಭದಲ್ಲಿ ಆಗಿರುವ ಹಣಕಾಸಿನ ಇತರೆ ಸಾಮಗ್ರಿಗಳ ಸಾಗಾಣಿಕೆಯ ದಂಧೆಯಲ್ಲಿ ಸಿಕ್ಕಿಬಿದ್ದವರು ಯಾರು? ಯಾವ ಅಭ್ಯರ್ಥಿಗಾಗಿ ಆ ಹಣ ಸಾಗಾಣಿಕೆಯಾಯಿತು. ಅವರಿಗೆ ಶಿಕ್ಷೆ ಆಯಿತೇ ಮುಂತಾದ ವಿವರಗಳನ್ನು ಪ್ರಕಟಿಸಬೇಕು. ಮತದಾರರಿಗೆ ಇದು ಗೊತ್ತಾದರೆ ಅವರು ಜಾಗೃತರಾಗುತ್ತಾರೆ. ಚುನಾವಣೆಗೆ ನಿಲ್ಲುವ ಕ್ರಿಮಿನಲ್‌ಗಳ ಸಂಖ್ಯೆ ಇಳಿಮುಖವಾಗುತ್ತದೆ. ಚುನಾವಣಾ ಆಯೋಗ ಇದರ ಜೊತೆ ಜೊತೆಗೇ ಚುನಾವಣಾ ಪದ್ಧತಿಯಲ್ಲಿ ರೂಢಮೂಲ ಬದಲಾವಣೆ ಮಾಡಿದರೆ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...