Homeಅಂಕಣಗಳುಚುನಾವಣಾ ಅಕ್ರಮ ತಡೆಯುವ ವಿಧಾನ ಸರಿಯಿದೆಯೇ?

ಚುನಾವಣಾ ಅಕ್ರಮ ತಡೆಯುವ ವಿಧಾನ ಸರಿಯಿದೆಯೇ?

- Advertisement -
- Advertisement -

ಚುನಾವಣಾ ಆಯೋಗ ಪೋಲೀಸ್ ಇಲಾಖೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲವೂ ಚುನಾವಣಾ ಭ್ರಷ್ಟಾಚಾರ ತಡೆಯುವುದರಲ್ಲಿ ಸೋತಿವೆ. ಇಲ್ಲವೇ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳಿಗೆ ಸಹಾಯಕವಾಗಿವೆ ಎಂದು ಖಚಿತವಾಗಿ ಹೇಳಬಹುದು.

ನಾನು ನನ್ನ ಅನುಭವದಿಂದ ಈ ಗುರುತರ ಆಪಾದನೆಯನ್ನು ಮಾಡುತ್ತಿದ್ದೇನೆ. ದಿವಂಗತ ಪ್ರಭಾಕರ ರೆಡ್ಡಿ ಮತ್ತು ನಾನು ಕೂಡಿಕೊಂಡು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಚಿಸಿದ್ದೆವು. ನಾವು ಒಮ್ಮೆ ರಾಜ್ಯದ ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ನಡೆಸಿದೆವು. ಆ ನಂತರ ಒಂದು ಡಿಮ್ಯಾಂಡ್ ಅವರ ಮುಂದಿಟ್ಟೆವು. ಡಿಮ್ಯಾಂಡ್ ಇದು – ನೀವು ಚುನಾವಣೆ ಸಮಯದಲ್ಲಿ ಇಷ್ಟು ಬ್ಯಾರಲ್ ಮದ್ಯ ಹಿಡಿದೆವು, ಇಷ್ಟು ಕೋಟಿ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದೆವು, ಸೀರೆ-ಪಂಚೆ ಸಾವಿರ ಗಟ್ಟಲೆ ಹಿಡಿದೆವು, ಚಿನ್ನ-ಬೆಳ್ಳಿ ಸಾಮಾನು ಹಿಡಿದೆವು ಎಂದು ಚುನಾವಣೆ ಮುಗಿಯುವವರೆಗೆ ಪತ್ರಿಕೆಗೆ ವರದಿ ಮಾಡುತ್ತೀರಿ. ಆದರೆ ಮುಂದೆ ಹಿಡಿದ ಹಣ, ಮದ್ಯ, ಜವಳಿ, ಚಿನ್ನ-ಬೆಳ್ಳಿ ಸಾಮಾನುಗಳು ಏನಾದವು? ಎಲ್ಲಿ ಹೋದವು, ಹಿಡಿದವರನ್ನು ನ್ಯಾಯಾಲಯದ ಮುಂದೆ ನಿಲ್ಲಿಸಿದಿರಾ? ನೀವು ಹಿಡಿದವರಲ್ಲಿ ಎಷ್ಟು ಜನಕ್ಕೆ ಏನು ಶಿಕ್ಷೆಯಾಗಿದೆ? ಯಾವುದನ್ನೂ ನೀವು ಪ್ರಕಟಿಸುವುದಿಲ್ಲ. ಹಿಡಿದ ಎಲ್ಲ ಹಣ, ಮದ್ಯ ಇತರ ಸಾಮಗ್ರಿಗಳು ನಿಮ್ಮ ಮನೆಗಳಲ್ಲಿದೆಯೇ? ಖಜಾನೆಯಲ್ಲಿದೆಯೇ? ನ್ಯಾಯಾಲಯದ ವಶದಲ್ಲಿದೆಯೇ? ಪೋಲೀಸ್ ಠಾಣೆಗಳಲ್ಲಿದೆಯೇ? ಒಂದೂ ಗೊತ್ತಾಗುವುದಿಲ್ಲ. ಆದ್ದರಿಂದ ಪ್ರತಿ ಒಂದು ಸಾರಿ ಸಾರ್ವತ್ರಿಕ ಚುನಾವಣೆಗಳು ನಡೆದಾಗಲೂ ಈ ಕುರಿತು ಒಂದು ಶ್ವೇತ ಪತ್ರ ಹೊರಡಿಸಿ ಎಂದು ಪಟ್ಟು ಹಿಡಿದೆವು.

ಚುನಾವಣಾ ಕಚೇರಿಯವರು ಚುನಾವಣಾ ಸಂದರ್ಭದಲ್ಲಿ ಹಿಡಿಯಲಾದ ಎಲ್ಲವನ್ನೂ ನಾವು ಪೋಲೀಸರ ವಶಕ್ಕೆ ಕೊಡುತ್ತೇವೆ. ಅವರೇ ಕೇಸುಗಳನ್ನು ಹಾಕುತ್ತಾರೆ. ನಾನು ಎಲ್ಲಾ ಎಸ್‌ಪಿಗಳಿಗೆ ಪತ್ರ ಬರೆದು ನಿಮಗೆ ನೀವು ಕೇಳಿರುವ ಎಲ್ಲಾ ವಿವರಗಳನ್ನು ಕೊಡಲು ತಿಳಿಸುತ್ತೇನೆ ಎಂದು ಹೇಳಿ ಜವಾಬ್ದಾರಿಯಿಂದ ಜಾರಿಕೊಂಡರು. ನಾಲ್ಕಾರು ತಿಂಗಳ ಮೇಲೆ ನಮಗೆ ಎರಡು ಜಿಲ್ಲೆಗಳ ಎಸ್‌ಪಿಗಳಿಂದ ‘ನಮ್ಮ ಜಿಲ್ಲೆಯಲ್ಲಿ ಇಂತಹ ಪ್ರಸಂಗಗಳು ನಡೆದೇ ಇಲ್ಲ’ ಎಂಬ ಉತ್ತರ ಬಂದಿತ್ತು. ಉಳಿದ ಜಿಲ್ಲೆಗಳ ಯಾವ ಎಸ್‌ಪಿಯೂ ಉತ್ತರ ನೀಡುವ ಗೋಜಿಗೆ ಹೋಗಲಿಲ್ಲ. ಪೋಲೀಸ್ ವರಿಷ್ಠರ ಕಚೇರಿಗೆ ಹೋಗಿ ಅವರಿಗೆ ಎಸ್‌ಪಿಗಳ ಬೇಜವಬ್ದಾರಿಯುತ ಮೌನದ ಬಗೆಗೆ ತಿಳಿಸಿದೆವು.

ಮಾತುಕತೆಯೆಲ್ಲ ಆದಮೇಲೆ ಅವರು ತಿಳಿಸಿದ್ದು ಹೀಗೆ;- ‘ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಳ್ಳುವ ಎಲ್ಲಾ ಹಣವನ್ನು ಖಜಾನೆಗೆ ಕಟ್ಟಲಾಗುತ್ತದೆ, ಮದ್ಯವನ್ನು ನಾಶ ಮಾಡಲಾಗುತ್ತದೆ. ಆದರೆ ಇತರ ವಸ್ತುಗಳ ಬಗೆಗೆ ನಮಗೆ ಮಾಹಿತಿ ಇಲ್ಲ’ ಎಂದರು. ಜಪ್ತಿಯಾದ ಉಳಿಕೆ ಸಾಮಾನುಗಳು ಏನಾದವು? ಅದನ್ನು ಹೊಂದಿದ್ದವರ ಮೇಲೆ ಖಟ್ಲೆ ಹೂಡಲಾಯಿತೆ? ಅವರಿಗೆ ಶಿಕ್ಷೆ ಆಯಿತೆ? ಅವರು ಯಾವ ಅಭ್ಯರ್ಥಿಗಾಗಿ ಹಣ ತೆಗೆದುಕೊಂಡು ಹೋಗುತ್ತಿದ್ದರು? ಅಭ್ಯರ್ಥಿಯನ್ನು ನ್ಯಾಯಾಲಯದ ಮುಂದೆ ನಿಲ್ಲಿಸಲಾಯಿತೆ? ಅವರಿಗಾದ ಶಿಕ್ಷೆ ಏನು? ಇದರ ಮಾಹಿತಿಯನ್ನು ಯಾರೂ ಒದಗಿಸಲಿಲ್ಲ.

ಅಂದರೆ ಚುನಾವಣೆಯ ಸಂದರ್ಭದಲ್ಲಿ ಯಾವತ್ತೂ ನಡೆಯುವ ಪ್ರಹಸನ ಇದು. ಚುನಾವಣಾ ಆಯೋಗ ಚುನಾವಣೆಯ ಸಂದರ್ಭದಲ್ಲಿ ನಡೆಯುವ ದುರ್ವ್ಯವಹಾರಗಳನ್ನು ತಡೆಗಟ್ಟುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತದೆ ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೆ? ಚುನಾವಣಾ ಆಯೋಗಕ್ಕೆ, ಪೋಲಿಸರಿಗೆ, ಚುನಾವಣಾಧಿಕಾರಿಗಳಿಗೆ ನಿಜವಾಗಿ ಚುನಾವಣೆಯನ್ನು ಪರಿಶುದ್ಧಗೊಳಿಸಬೇಕೆಂಬ ಕಾತರವಿದ್ದಿದ್ದರೆ ಅವರು ಇಷ್ಟು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರಲಿಲ್ಲ. ಚುನಾವಣೆಯನ್ನು ಸುಧಾರಿಸಬೇಕೆಂಬ ಉತ್ಕಟೇಚ್ಛೆ ಇವರಿಗೆಲ್ಲ ಇದ್ದಿದ್ದರೆ ಈ ಎಲ್ಲಾ ಬಗೆಯ ಭ್ರಷ್ಟಾಚಾರವನ್ನು ತಡೆಗಟ್ಟಲು ಅವರು ಆದ್ಯತೆ ನೀಡುತ್ತಿದ್ದರು. ಅವರೆಲ್ಲ ಕಾಟಾಚಾರಕ್ಕೆ, ಜನರ ಕಣ್ಣಿಗೆ ಮಣ್ಣೆರಚುವುದಕ್ಕೆ ಕಾಟಾಚಾರದ ತಪಾಸಣೆ ಮಾಡುತ್ತಾರೆ. ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಹಾಗೂ ಪೋಲೀಸರ ಬೇಜವಾಬ್ದಾರಿತನ ಒಂದು ವರವಾಗಿ ಪರಿಣಮಿಸಿದೆ.

ನಾನು ಈ ಬಗೆಗೆ ಚುನಾವಣಾ ಆಯೋಗಕ್ಕೆ, ಒಂದು ಪತ್ರ ಬರೆದಿದ್ದೆ. ಅವರು ಆ ಪತ್ರಕ್ಕೆ ಉತ್ತರ ನೀಡುವ ಸೌಜನ್ಯವನ್ನು ತೋರಲಿಲ್ಲ.

ಚುನಾವಣಾ ಪದ್ದತಿಯಲ್ಲಿ ರೂಢಮೂಲ ಬದಲಾವಣೆಗಳನ್ನು ತರಬೇಕೆಂದು ನ್ಯಾ.ತಾರ್ಕುಂಡೆಯವರು ಮೊದಲುಗೊಂಡು ನೂರಾರು ಮಂದಿ ಸಲಹೆಗಳನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸುಧಾರಣೆ ಚುನಾವಣಾ ಆಯೋಗಕ್ಕೂ ಬೇಕಾಗಿಲ್ಲ, ಸರ್ಕಾರಕ್ಕೂ ಬೇಕಾಗಿಲ್ಲ. ಪಾರ್ಲಿಮೆಂಟ್ ಸದಸ್ಯರಿಗೆ ಈ ಸುಧಾರಣೆ ಆದರೆ ತಮಗೆ ಅಸ್ತಿತ್ವವಿಲ್ಲದೆ ಹೋಗುವುದೆಂಬ ಭಯವಿರುವುದರಿಂದ ಅವರು ಮೌನವನ್ನವಲಂಬಿಸುತ್ತಾರೆ.

ಶೇಷನ್ ಚುನಾವಣಾ ಆಯೋಗದ ಅಧ್ಯಕ್ಷರಾಗಿದ್ದಾಗ ಈಗ ಇರುವ ಕಾಯ್ದೆಗಳನ್ನೇ ಬಳಸಿಕೊಂಡು ಚುನಾವಣೆಯ ಅನೇಕ ಅಕ್ರಮಗಳನ್ನು ತಡೆದರು. ಪಾರ್ಲಿಮೆಂಟ್ ಸದಸ್ಯರಿಗೆ ಸರ್ಕಾರಗಳಿಗೆ ನಡುಕ ಹುಟ್ಟಿಸಿದ್ದರು. ಶೇಷನ್‌ರವರಾದ ಮೇಲೆ ಅಧಿಕಾರಕ್ಕೆ ಬಂದ ಯಾವ ಚುನಾವಣಾ ಆಯೋಗದ ಸದಸ್ಯರಿಗೂ ಶೇಷನ್‌ರವರ ಗಟ್ಸ್ ಇಲ್ಲವಾದ್ದರಿಂದ ಬದಲಾಗಿದ್ದ ಚುನಾವಣಾ ಪದ್ಧತಿ, ರಿವರ್ಸ್ಗೇರ್ ಹೊಡೆಯಿತು. ಅಪ್ಪ ಹಾಕಿದ ಆಲದಮರಕ್ಕೇ ನೇಣು ಹಾಕಿಕೊಳ್ಳುತ್ತಿದ್ದಾರೆ, ಶೇಷನ್ ನಂತರ ಬಂದ ಚುನಾವಣಾ ಆಯೋಗದ ಸದಸ್ಯರು.

ಸರ್ಕಾರ ನಡೆಸುವವರು ಯಾವ ಪಕ್ಷದವರಾದರೂ ಸರಿಯೇ ಚುನಾವಣೆಗೆ ಸ್ವಲ್ಪ ಮೊದಲು ತಮ್ಮ ಮಾತನ್ನು ಕೇಳುವ ಎಸ್‌ಪಿಗಳನ್ನು, ಜಿಲ್ಲಾಧಿಕಾರಿಗಳನ್ನು ತಮಗೆ ಬೇಕಾದ ಜಿಲ್ಲೆಗೆ ವರ್ಗಾಯಿಸುತ್ತಾರೆ. ಮುಖ್ಯವಾಗಿ ಎಸ್‌ಪಿಯ ಜವಾಬ್ದಾರಿ ಅವರ ಅಧೀನದ ಎಲ್ಲಾ ಠಾಣೆಗಳಿಗೂ ಫರ್ಮಾನು ನೀಡುವುದು. ಇಷ್ಟನೇ ನಂಬರ್ ಕಾರು ಅಥವಾ ಟ್ಯಾಕ್ಸಿ ನಮ್ಮ ಜಿಲ್ಲೆಗೆ ಬಂದರೆ ಅದರ ತಂಟೆಗೆ ಹೋಗಬಾರದು. ಚುನಾವಣೆ ಸಮಯದಲ್ಲಿ ಅವರು ಹಣ ತರಲಿ, ಏನೇ ತರಲಿ ಅದರ ತನಿಖೆ ಮಾಡಬಾರದು.

ಟ್ಯಾಕ್ಸಿಯಲ್ಲಿ ಮೈಸೂರಿಗೆ ಹೋಗುವಾಗ ಆ ಟ್ಯಾಕ್ಸಿ ಡ್ರೈವರ್ ತನ್ನ ಘನಂದಾರಿ ಕೆಲಸ ಕುರಿತು ನನಗೆ ಹೇಳಿದ ನನ್ನ ಹತ್ತಿರ ಹಣ ಕೊಟ್ಟು ಕಳಿಸುತ್ತಾರೆ. ಚುನಾವಣೆ ಸಂದರ್ಭದಲ್ಲಿ ಎಲ್ಲೂ ನನ್ನನ್ನು ತಡೆದು ಕಾರು ತಪಾಸಣೆ ಮಾಡುವ ಕೆಲಸ ನಡೆಯುವುದಿಲ್ಲ. ಅಲ್ಲಿಗೆ ಚುನಾವಣೆಗೆ ಸ್ವಲ್ಪ ಮೊದಲು ವರ್ಗಾವಣೆಯಾಗಿರುವಾಗ ಎಸ್‌ಪಿ ಎಲ್ಲಾ ಠಾಣೆಗಳಿಗೂ ನನ್ನ ಟ್ಯಾಕ್ಸಿ ಹಿಡಿಯದಂತೆ ತಾಕೀತು ಮಾಡಿರುತ್ತಾರೆ. ನಾನು ಆ ಸಂದರ್ಭದಲ್ಲಿ ನಾಲ್ಕಾರು ಸಲ ಜಿಲ್ಲಾ ಕೇಂದ್ರಗಳಿಗೆ ಹಣ ತೆಗೆದುಕೊಂಡು ಹೋಗಿ ತಲುಪಿಸಬೇಕಾಗುತ್ತದೆ ಎಂದು ಹೆಮ್ಮೆಯಿಂದ ಹೇಳಿದೆ.

ಈ ಲೇಖನ ಬರೆದ ಉದ್ದೇಶ ಇಷ್ಟೇ;- ಪ್ರತಿ ಒಂದು ಸಾರ್ವತ್ರಿಕ ಚುನಾವಣೆ ನಡೆದ ಒಂದು ವರ್ಷದ ಒಳಗೆ ಚುನಾವಣಾ ಆಯೋಗ ಒಂದು ಶ್ವೇತ ಪತ್ರ ಹೊರಡಿಸಿ ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು. ಆ ಶ್ವೇತ ಪತ್ರದಲ್ಲಿ ಆ ವರ್ಷ ನಡೆದ ಚುನಾವಣೆ ಸಂದರ್ಭದಲ್ಲಿ ಆಗಿರುವ ಹಣಕಾಸಿನ ಇತರೆ ಸಾಮಗ್ರಿಗಳ ಸಾಗಾಣಿಕೆಯ ದಂಧೆಯಲ್ಲಿ ಸಿಕ್ಕಿಬಿದ್ದವರು ಯಾರು? ಯಾವ ಅಭ್ಯರ್ಥಿಗಾಗಿ ಆ ಹಣ ಸಾಗಾಣಿಕೆಯಾಯಿತು. ಅವರಿಗೆ ಶಿಕ್ಷೆ ಆಯಿತೇ ಮುಂತಾದ ವಿವರಗಳನ್ನು ಪ್ರಕಟಿಸಬೇಕು. ಮತದಾರರಿಗೆ ಇದು ಗೊತ್ತಾದರೆ ಅವರು ಜಾಗೃತರಾಗುತ್ತಾರೆ. ಚುನಾವಣೆಗೆ ನಿಲ್ಲುವ ಕ್ರಿಮಿನಲ್‌ಗಳ ಸಂಖ್ಯೆ ಇಳಿಮುಖವಾಗುತ್ತದೆ. ಚುನಾವಣಾ ಆಯೋಗ ಇದರ ಜೊತೆ ಜೊತೆಗೇ ಚುನಾವಣಾ ಪದ್ಧತಿಯಲ್ಲಿ ರೂಢಮೂಲ ಬದಲಾವಣೆ ಮಾಡಿದರೆ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...