Homeಅಂಕಣಗಳುಚುನಾವಣಾ ಅಕ್ರಮ ತಡೆಯುವ ವಿಧಾನ ಸರಿಯಿದೆಯೇ?

ಚುನಾವಣಾ ಅಕ್ರಮ ತಡೆಯುವ ವಿಧಾನ ಸರಿಯಿದೆಯೇ?

- Advertisement -
- Advertisement -

ಚುನಾವಣಾ ಆಯೋಗ ಪೋಲೀಸ್ ಇಲಾಖೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲವೂ ಚುನಾವಣಾ ಭ್ರಷ್ಟಾಚಾರ ತಡೆಯುವುದರಲ್ಲಿ ಸೋತಿವೆ. ಇಲ್ಲವೇ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳಿಗೆ ಸಹಾಯಕವಾಗಿವೆ ಎಂದು ಖಚಿತವಾಗಿ ಹೇಳಬಹುದು.

ನಾನು ನನ್ನ ಅನುಭವದಿಂದ ಈ ಗುರುತರ ಆಪಾದನೆಯನ್ನು ಮಾಡುತ್ತಿದ್ದೇನೆ. ದಿವಂಗತ ಪ್ರಭಾಕರ ರೆಡ್ಡಿ ಮತ್ತು ನಾನು ಕೂಡಿಕೊಂಡು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಚಿಸಿದ್ದೆವು. ನಾವು ಒಮ್ಮೆ ರಾಜ್ಯದ ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ನಡೆಸಿದೆವು. ಆ ನಂತರ ಒಂದು ಡಿಮ್ಯಾಂಡ್ ಅವರ ಮುಂದಿಟ್ಟೆವು. ಡಿಮ್ಯಾಂಡ್ ಇದು – ನೀವು ಚುನಾವಣೆ ಸಮಯದಲ್ಲಿ ಇಷ್ಟು ಬ್ಯಾರಲ್ ಮದ್ಯ ಹಿಡಿದೆವು, ಇಷ್ಟು ಕೋಟಿ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದೆವು, ಸೀರೆ-ಪಂಚೆ ಸಾವಿರ ಗಟ್ಟಲೆ ಹಿಡಿದೆವು, ಚಿನ್ನ-ಬೆಳ್ಳಿ ಸಾಮಾನು ಹಿಡಿದೆವು ಎಂದು ಚುನಾವಣೆ ಮುಗಿಯುವವರೆಗೆ ಪತ್ರಿಕೆಗೆ ವರದಿ ಮಾಡುತ್ತೀರಿ. ಆದರೆ ಮುಂದೆ ಹಿಡಿದ ಹಣ, ಮದ್ಯ, ಜವಳಿ, ಚಿನ್ನ-ಬೆಳ್ಳಿ ಸಾಮಾನುಗಳು ಏನಾದವು? ಎಲ್ಲಿ ಹೋದವು, ಹಿಡಿದವರನ್ನು ನ್ಯಾಯಾಲಯದ ಮುಂದೆ ನಿಲ್ಲಿಸಿದಿರಾ? ನೀವು ಹಿಡಿದವರಲ್ಲಿ ಎಷ್ಟು ಜನಕ್ಕೆ ಏನು ಶಿಕ್ಷೆಯಾಗಿದೆ? ಯಾವುದನ್ನೂ ನೀವು ಪ್ರಕಟಿಸುವುದಿಲ್ಲ. ಹಿಡಿದ ಎಲ್ಲ ಹಣ, ಮದ್ಯ ಇತರ ಸಾಮಗ್ರಿಗಳು ನಿಮ್ಮ ಮನೆಗಳಲ್ಲಿದೆಯೇ? ಖಜಾನೆಯಲ್ಲಿದೆಯೇ? ನ್ಯಾಯಾಲಯದ ವಶದಲ್ಲಿದೆಯೇ? ಪೋಲೀಸ್ ಠಾಣೆಗಳಲ್ಲಿದೆಯೇ? ಒಂದೂ ಗೊತ್ತಾಗುವುದಿಲ್ಲ. ಆದ್ದರಿಂದ ಪ್ರತಿ ಒಂದು ಸಾರಿ ಸಾರ್ವತ್ರಿಕ ಚುನಾವಣೆಗಳು ನಡೆದಾಗಲೂ ಈ ಕುರಿತು ಒಂದು ಶ್ವೇತ ಪತ್ರ ಹೊರಡಿಸಿ ಎಂದು ಪಟ್ಟು ಹಿಡಿದೆವು.

ಚುನಾವಣಾ ಕಚೇರಿಯವರು ಚುನಾವಣಾ ಸಂದರ್ಭದಲ್ಲಿ ಹಿಡಿಯಲಾದ ಎಲ್ಲವನ್ನೂ ನಾವು ಪೋಲೀಸರ ವಶಕ್ಕೆ ಕೊಡುತ್ತೇವೆ. ಅವರೇ ಕೇಸುಗಳನ್ನು ಹಾಕುತ್ತಾರೆ. ನಾನು ಎಲ್ಲಾ ಎಸ್‌ಪಿಗಳಿಗೆ ಪತ್ರ ಬರೆದು ನಿಮಗೆ ನೀವು ಕೇಳಿರುವ ಎಲ್ಲಾ ವಿವರಗಳನ್ನು ಕೊಡಲು ತಿಳಿಸುತ್ತೇನೆ ಎಂದು ಹೇಳಿ ಜವಾಬ್ದಾರಿಯಿಂದ ಜಾರಿಕೊಂಡರು. ನಾಲ್ಕಾರು ತಿಂಗಳ ಮೇಲೆ ನಮಗೆ ಎರಡು ಜಿಲ್ಲೆಗಳ ಎಸ್‌ಪಿಗಳಿಂದ ‘ನಮ್ಮ ಜಿಲ್ಲೆಯಲ್ಲಿ ಇಂತಹ ಪ್ರಸಂಗಗಳು ನಡೆದೇ ಇಲ್ಲ’ ಎಂಬ ಉತ್ತರ ಬಂದಿತ್ತು. ಉಳಿದ ಜಿಲ್ಲೆಗಳ ಯಾವ ಎಸ್‌ಪಿಯೂ ಉತ್ತರ ನೀಡುವ ಗೋಜಿಗೆ ಹೋಗಲಿಲ್ಲ. ಪೋಲೀಸ್ ವರಿಷ್ಠರ ಕಚೇರಿಗೆ ಹೋಗಿ ಅವರಿಗೆ ಎಸ್‌ಪಿಗಳ ಬೇಜವಬ್ದಾರಿಯುತ ಮೌನದ ಬಗೆಗೆ ತಿಳಿಸಿದೆವು.

ಮಾತುಕತೆಯೆಲ್ಲ ಆದಮೇಲೆ ಅವರು ತಿಳಿಸಿದ್ದು ಹೀಗೆ;- ‘ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಳ್ಳುವ ಎಲ್ಲಾ ಹಣವನ್ನು ಖಜಾನೆಗೆ ಕಟ್ಟಲಾಗುತ್ತದೆ, ಮದ್ಯವನ್ನು ನಾಶ ಮಾಡಲಾಗುತ್ತದೆ. ಆದರೆ ಇತರ ವಸ್ತುಗಳ ಬಗೆಗೆ ನಮಗೆ ಮಾಹಿತಿ ಇಲ್ಲ’ ಎಂದರು. ಜಪ್ತಿಯಾದ ಉಳಿಕೆ ಸಾಮಾನುಗಳು ಏನಾದವು? ಅದನ್ನು ಹೊಂದಿದ್ದವರ ಮೇಲೆ ಖಟ್ಲೆ ಹೂಡಲಾಯಿತೆ? ಅವರಿಗೆ ಶಿಕ್ಷೆ ಆಯಿತೆ? ಅವರು ಯಾವ ಅಭ್ಯರ್ಥಿಗಾಗಿ ಹಣ ತೆಗೆದುಕೊಂಡು ಹೋಗುತ್ತಿದ್ದರು? ಅಭ್ಯರ್ಥಿಯನ್ನು ನ್ಯಾಯಾಲಯದ ಮುಂದೆ ನಿಲ್ಲಿಸಲಾಯಿತೆ? ಅವರಿಗಾದ ಶಿಕ್ಷೆ ಏನು? ಇದರ ಮಾಹಿತಿಯನ್ನು ಯಾರೂ ಒದಗಿಸಲಿಲ್ಲ.

ಅಂದರೆ ಚುನಾವಣೆಯ ಸಂದರ್ಭದಲ್ಲಿ ಯಾವತ್ತೂ ನಡೆಯುವ ಪ್ರಹಸನ ಇದು. ಚುನಾವಣಾ ಆಯೋಗ ಚುನಾವಣೆಯ ಸಂದರ್ಭದಲ್ಲಿ ನಡೆಯುವ ದುರ್ವ್ಯವಹಾರಗಳನ್ನು ತಡೆಗಟ್ಟುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತದೆ ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೆ? ಚುನಾವಣಾ ಆಯೋಗಕ್ಕೆ, ಪೋಲಿಸರಿಗೆ, ಚುನಾವಣಾಧಿಕಾರಿಗಳಿಗೆ ನಿಜವಾಗಿ ಚುನಾವಣೆಯನ್ನು ಪರಿಶುದ್ಧಗೊಳಿಸಬೇಕೆಂಬ ಕಾತರವಿದ್ದಿದ್ದರೆ ಅವರು ಇಷ್ಟು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರಲಿಲ್ಲ. ಚುನಾವಣೆಯನ್ನು ಸುಧಾರಿಸಬೇಕೆಂಬ ಉತ್ಕಟೇಚ್ಛೆ ಇವರಿಗೆಲ್ಲ ಇದ್ದಿದ್ದರೆ ಈ ಎಲ್ಲಾ ಬಗೆಯ ಭ್ರಷ್ಟಾಚಾರವನ್ನು ತಡೆಗಟ್ಟಲು ಅವರು ಆದ್ಯತೆ ನೀಡುತ್ತಿದ್ದರು. ಅವರೆಲ್ಲ ಕಾಟಾಚಾರಕ್ಕೆ, ಜನರ ಕಣ್ಣಿಗೆ ಮಣ್ಣೆರಚುವುದಕ್ಕೆ ಕಾಟಾಚಾರದ ತಪಾಸಣೆ ಮಾಡುತ್ತಾರೆ. ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಹಾಗೂ ಪೋಲೀಸರ ಬೇಜವಾಬ್ದಾರಿತನ ಒಂದು ವರವಾಗಿ ಪರಿಣಮಿಸಿದೆ.

ನಾನು ಈ ಬಗೆಗೆ ಚುನಾವಣಾ ಆಯೋಗಕ್ಕೆ, ಒಂದು ಪತ್ರ ಬರೆದಿದ್ದೆ. ಅವರು ಆ ಪತ್ರಕ್ಕೆ ಉತ್ತರ ನೀಡುವ ಸೌಜನ್ಯವನ್ನು ತೋರಲಿಲ್ಲ.

ಚುನಾವಣಾ ಪದ್ದತಿಯಲ್ಲಿ ರೂಢಮೂಲ ಬದಲಾವಣೆಗಳನ್ನು ತರಬೇಕೆಂದು ನ್ಯಾ.ತಾರ್ಕುಂಡೆಯವರು ಮೊದಲುಗೊಂಡು ನೂರಾರು ಮಂದಿ ಸಲಹೆಗಳನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸುಧಾರಣೆ ಚುನಾವಣಾ ಆಯೋಗಕ್ಕೂ ಬೇಕಾಗಿಲ್ಲ, ಸರ್ಕಾರಕ್ಕೂ ಬೇಕಾಗಿಲ್ಲ. ಪಾರ್ಲಿಮೆಂಟ್ ಸದಸ್ಯರಿಗೆ ಈ ಸುಧಾರಣೆ ಆದರೆ ತಮಗೆ ಅಸ್ತಿತ್ವವಿಲ್ಲದೆ ಹೋಗುವುದೆಂಬ ಭಯವಿರುವುದರಿಂದ ಅವರು ಮೌನವನ್ನವಲಂಬಿಸುತ್ತಾರೆ.

ಶೇಷನ್ ಚುನಾವಣಾ ಆಯೋಗದ ಅಧ್ಯಕ್ಷರಾಗಿದ್ದಾಗ ಈಗ ಇರುವ ಕಾಯ್ದೆಗಳನ್ನೇ ಬಳಸಿಕೊಂಡು ಚುನಾವಣೆಯ ಅನೇಕ ಅಕ್ರಮಗಳನ್ನು ತಡೆದರು. ಪಾರ್ಲಿಮೆಂಟ್ ಸದಸ್ಯರಿಗೆ ಸರ್ಕಾರಗಳಿಗೆ ನಡುಕ ಹುಟ್ಟಿಸಿದ್ದರು. ಶೇಷನ್‌ರವರಾದ ಮೇಲೆ ಅಧಿಕಾರಕ್ಕೆ ಬಂದ ಯಾವ ಚುನಾವಣಾ ಆಯೋಗದ ಸದಸ್ಯರಿಗೂ ಶೇಷನ್‌ರವರ ಗಟ್ಸ್ ಇಲ್ಲವಾದ್ದರಿಂದ ಬದಲಾಗಿದ್ದ ಚುನಾವಣಾ ಪದ್ಧತಿ, ರಿವರ್ಸ್ಗೇರ್ ಹೊಡೆಯಿತು. ಅಪ್ಪ ಹಾಕಿದ ಆಲದಮರಕ್ಕೇ ನೇಣು ಹಾಕಿಕೊಳ್ಳುತ್ತಿದ್ದಾರೆ, ಶೇಷನ್ ನಂತರ ಬಂದ ಚುನಾವಣಾ ಆಯೋಗದ ಸದಸ್ಯರು.

ಸರ್ಕಾರ ನಡೆಸುವವರು ಯಾವ ಪಕ್ಷದವರಾದರೂ ಸರಿಯೇ ಚುನಾವಣೆಗೆ ಸ್ವಲ್ಪ ಮೊದಲು ತಮ್ಮ ಮಾತನ್ನು ಕೇಳುವ ಎಸ್‌ಪಿಗಳನ್ನು, ಜಿಲ್ಲಾಧಿಕಾರಿಗಳನ್ನು ತಮಗೆ ಬೇಕಾದ ಜಿಲ್ಲೆಗೆ ವರ್ಗಾಯಿಸುತ್ತಾರೆ. ಮುಖ್ಯವಾಗಿ ಎಸ್‌ಪಿಯ ಜವಾಬ್ದಾರಿ ಅವರ ಅಧೀನದ ಎಲ್ಲಾ ಠಾಣೆಗಳಿಗೂ ಫರ್ಮಾನು ನೀಡುವುದು. ಇಷ್ಟನೇ ನಂಬರ್ ಕಾರು ಅಥವಾ ಟ್ಯಾಕ್ಸಿ ನಮ್ಮ ಜಿಲ್ಲೆಗೆ ಬಂದರೆ ಅದರ ತಂಟೆಗೆ ಹೋಗಬಾರದು. ಚುನಾವಣೆ ಸಮಯದಲ್ಲಿ ಅವರು ಹಣ ತರಲಿ, ಏನೇ ತರಲಿ ಅದರ ತನಿಖೆ ಮಾಡಬಾರದು.

ಟ್ಯಾಕ್ಸಿಯಲ್ಲಿ ಮೈಸೂರಿಗೆ ಹೋಗುವಾಗ ಆ ಟ್ಯಾಕ್ಸಿ ಡ್ರೈವರ್ ತನ್ನ ಘನಂದಾರಿ ಕೆಲಸ ಕುರಿತು ನನಗೆ ಹೇಳಿದ ನನ್ನ ಹತ್ತಿರ ಹಣ ಕೊಟ್ಟು ಕಳಿಸುತ್ತಾರೆ. ಚುನಾವಣೆ ಸಂದರ್ಭದಲ್ಲಿ ಎಲ್ಲೂ ನನ್ನನ್ನು ತಡೆದು ಕಾರು ತಪಾಸಣೆ ಮಾಡುವ ಕೆಲಸ ನಡೆಯುವುದಿಲ್ಲ. ಅಲ್ಲಿಗೆ ಚುನಾವಣೆಗೆ ಸ್ವಲ್ಪ ಮೊದಲು ವರ್ಗಾವಣೆಯಾಗಿರುವಾಗ ಎಸ್‌ಪಿ ಎಲ್ಲಾ ಠಾಣೆಗಳಿಗೂ ನನ್ನ ಟ್ಯಾಕ್ಸಿ ಹಿಡಿಯದಂತೆ ತಾಕೀತು ಮಾಡಿರುತ್ತಾರೆ. ನಾನು ಆ ಸಂದರ್ಭದಲ್ಲಿ ನಾಲ್ಕಾರು ಸಲ ಜಿಲ್ಲಾ ಕೇಂದ್ರಗಳಿಗೆ ಹಣ ತೆಗೆದುಕೊಂಡು ಹೋಗಿ ತಲುಪಿಸಬೇಕಾಗುತ್ತದೆ ಎಂದು ಹೆಮ್ಮೆಯಿಂದ ಹೇಳಿದೆ.

ಈ ಲೇಖನ ಬರೆದ ಉದ್ದೇಶ ಇಷ್ಟೇ;- ಪ್ರತಿ ಒಂದು ಸಾರ್ವತ್ರಿಕ ಚುನಾವಣೆ ನಡೆದ ಒಂದು ವರ್ಷದ ಒಳಗೆ ಚುನಾವಣಾ ಆಯೋಗ ಒಂದು ಶ್ವೇತ ಪತ್ರ ಹೊರಡಿಸಿ ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು. ಆ ಶ್ವೇತ ಪತ್ರದಲ್ಲಿ ಆ ವರ್ಷ ನಡೆದ ಚುನಾವಣೆ ಸಂದರ್ಭದಲ್ಲಿ ಆಗಿರುವ ಹಣಕಾಸಿನ ಇತರೆ ಸಾಮಗ್ರಿಗಳ ಸಾಗಾಣಿಕೆಯ ದಂಧೆಯಲ್ಲಿ ಸಿಕ್ಕಿಬಿದ್ದವರು ಯಾರು? ಯಾವ ಅಭ್ಯರ್ಥಿಗಾಗಿ ಆ ಹಣ ಸಾಗಾಣಿಕೆಯಾಯಿತು. ಅವರಿಗೆ ಶಿಕ್ಷೆ ಆಯಿತೇ ಮುಂತಾದ ವಿವರಗಳನ್ನು ಪ್ರಕಟಿಸಬೇಕು. ಮತದಾರರಿಗೆ ಇದು ಗೊತ್ತಾದರೆ ಅವರು ಜಾಗೃತರಾಗುತ್ತಾರೆ. ಚುನಾವಣೆಗೆ ನಿಲ್ಲುವ ಕ್ರಿಮಿನಲ್‌ಗಳ ಸಂಖ್ಯೆ ಇಳಿಮುಖವಾಗುತ್ತದೆ. ಚುನಾವಣಾ ಆಯೋಗ ಇದರ ಜೊತೆ ಜೊತೆಗೇ ಚುನಾವಣಾ ಪದ್ಧತಿಯಲ್ಲಿ ರೂಢಮೂಲ ಬದಲಾವಣೆ ಮಾಡಿದರೆ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...