Homeಕರ್ನಾಟಕದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್‌.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಕಾರ್ಯಕ್ರಮ ನಡೆಯಿತು.

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಿತು. ʼಸ್ವಾತಂತ್ರ್ಯ ರಕ್ಷಣೆಗಾಗಿ, ಸ್ವಸ್ಥ ಸೌಹಾರ್ದಯುತ ಸಮಾಜಕ್ಕಾಗಿʼ ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಡೆಗೆಯುದ್ಧಕ್ಕೂ ಕೋಮುವಾದಿ ಸರ್ಕಾರಕ್ಕೆ, ಮನುವಾದಕ್ಕೆ ಧಿಕ್ಕಾರ ಕೂಗಲಾಯಿತು. ದೊರೆಸ್ವಾಮಿಯವರ ಭಾವಚಿತ್ರ ಹಾಗೂ ತ್ರಿವರ್ಣ ಧ್ವಜಗಳನ್ನು ಹಿಡಿದು, ʼರಘುಪತಿ ರಾಘವ ರಾಜಾ ರಾಮ್‌…ʼ ಭಜನೆ ಮಾಡುತ್ತ ಹೋರಾಟಗಾರರು ಹೆಜ್ಜೆಹಾಕಿದರು. ಅಲ್ಪಸಂಖ್ಯಾತ ಸಮುದಾಯವನ್ನು ಟಾರ್ಗೆಟ್‌ ಮಾಡುತ್ತಿರುವುದನ್ನು ಖಂಡಿಸಿದರು.

ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಮಾತನಾಡಿ, “ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಹೋರಾಡಲು ದೊರೆಸ್ವಾಮಿ ಅವರು ನಮಗೆಲ್ಲ ದೊಡ್ಡ ಪ್ರೇರಣಾ ಶಕ್ತಿಯಾಗಿದ್ದರು” ಎಂದು ಹೇಳಿದರು.

“ಸಮಾಜದ ಪ್ರತಿ ಪಿಡುಗಿಗೂ ದೊರೆಸ್ವಾಮಿ ಅವರು ಹೋರಾಟ ನಡೆಸುತ್ತ ಬಂದರು. ಅವರ ಆದರ್ಶಮಯ ಜೀವನ ನಮ್ಮ ಮುಂದಿದೆ. ಅವರ ಬದುಕೇ ನಮಗೆಲ್ಲ ಮಾದರಿ. ಅವರ ಆಶಯಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಸೋಮಶೇಖರ್‌ ಮಾತನಾಡಿ, “ದೊರೆಸ್ವಾಮಿ ಅವರು ನಿಸ್ವಾರ್ಥ ಜೀವಿಯಾಗಿದ್ದರು. ಅವರ ಅಣ್ಣ ಮೇಯರ್‌ ಆಗಿದ್ದರೂ ಜೀವನದ ಕೊನೆವರೆಗೂ ಅವರು ಬಾಡಿಗೆ ಮನೆಯಲ್ಲೇ ವಾಸವಿದ್ದರು. ಇದು ದೊರೆಸ್ವಾಮಿ ಅವರ ಸರಳತೆಗೆ ಸಾಕ್ಷಿ” ಎಂದು ಅಭಿಪ್ರಾಯಪಟ್ಟರು.

ಹಿರಿಯ ಪತ್ರಕರ್ತೆ ವಿಜಯಮ್ಮ ಮಾತನಾಡಿ, “ಜೆ ಎಚ್‌ ಪಟೇಲ್‌ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ʼಸೌಂದರ್ಯ ಸ್ಪರ್ಧೆʼ ನಡೆದಿತ್ತು. ಆ ಸ್ಪರ್ಧೆ ವಿರೋಧಿಸಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಆದರೆ ಮುಖ್ಯಮಂತ್ರಿಗಳು ಸೌಂದರ್ಯ ಸ್ಪರ್ಧೆಯನ್ನು ನಡೆಸುವ ಪಟ್ಟು ಹಿಡಿದಿದ್ದರು. ಆ ವೇಳೆ ದೊರೆಸ್ವಾಮಿ ಅವರು ಪಟೇಲರ ಧೋರಣೆ ವಿರೋಧಿಸಿ, ʼನೀವು ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಬೇಕಾದರೆ ಸ್ಪರ್ಧೆಗೆ ಕಳುಹಿಸಿ, ಆದರೆ ನಾವು ಇಂತಹದ್ದನ್ನು ಒಪ್ಪುವುದಿಲ್ಲʼ ಎಂದು ನೇರವಾಗಿ ಹೇಳಿದ್ದರು. ಅದು ದೊರೆಸ್ವಾಮಿ ಅವರ ನೇರ- ನಿಷ್ಠುರತೆ” ಎಂದು ಸ್ಮರಿಸಿದರು.

ಪ್ರೊ. ನಗರಗೆರೆ ರಮೇಶ್‌ ಮಾತನಾಡಿ, “ರಾಜ್ಯದಲ್ಲಿ ಕೋಮುವಾದ ವಿಜೃಂಭಿಸುತ್ತಿದೆ. ಜಾನಪದ ಜಾತ್ರೆ ಈಗ ಸಂಘಪರಿವಾರದ ಜಾತ್ರೆಯಾಗಿ ಮಾರ್ಪಟ್ಟಿದೆ. ಬಿಜೆಪಿಯಂಥ ಕೆಟ್ಟ ಸರ್ಕಾರ ಕಿತ್ತೆಸೆಯುವುದೇ ದೊರೆಸ್ವಾಮಿ ಅವರ ಆಶಯವಾಗಿತ್ತು” ಎಂದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿ ಕುಮಾರ ಸಮತಳ ಮಾತನಾಡಿ, “ದೊರೆಸ್ವಾಮಿ ಅವರಿಂದ ಕಲಿಯುವುದು ಸಾಕಷ್ಟಿದೆ. ಅವರ ಅನುಭವವೇ ನಮಗೆ ದೊಡ್ಡ ಪಾಠ. ಭೂಮಿ ಮತ್ತು ವಸತಿರಹಿತರ ಹಕ್ಕಿಗಾಗಿ ದೊರೆಸ್ವಾಮಿ ಸದಾಕಾಲ ಹೋರಾಡುತ್ತ ಬಂದಿದ್ದಾರೆ. ಅವರ ಹೋರಾಟವನ್ನು ನಾವು ಮುಂದುವರಿಸುವುದೇ ಅವರಿಗೆ ಸಲ್ಲಿಸುವ ಗೌರವ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಹೋರಾಟಗಾರ್ತಿ ಬಿ ಟಿ ಲಲಿತಾ ನಾಯಕ್‌ ಮಾತನಾಡಿ, “ರಾಜ್ಯದಲ್ಲಿ ಮನುವಾದಿ ಸಂಸ್ಕೃತಿ ಹೆಚ್ಚುತ್ತಿದೆ. ದೊರೆಸ್ವಾಮಿ ಬದುಕಿದ್ದರೆ ಆರ್‌ಎಸ್‌ಎಸ್‌ ನಡೆಗಳನ್ನು ನಿತ್ಯ ಖಂಡಿಸುತ್ತಿದ್ದರು. ರೈತರು ಮತ್ತು ಬಡವರ ಬಗ್ಗೆ ಸದಾಕಾಲ ಪ್ರೀತಿ ಇಟ್ಟುಕೊಂಡು, ಅವರ ಹಕ್ಕಿಗಾಗಿ ಧ್ವನಿ ಎತ್ತುತ್ತಲೇ ಬಂದವರು. ಯಾವ ಮುಲಾಜಿಲ್ಲದೇ ಎಂಥ ದೊಡ್ಡ ನಾಯಕಾದರೂ ಸರಿ, ನೀ ಮಾಡಿದ್ದು ತಪ್ಪು ಅಂತ ಹೇಳುವ ಧೈರ್ಯ ದೊರೆಸ್ವಾಮಿ ಅವರಿಗಿತ್ತು” ಎಂದು ಮೆಲುಕುಹಾಕಿದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿಗಳಾದ ಸಿರಿಮನೆ ನಾಗರಾಜ್‌, ಗೌರಿ, ಜಗನ್‌, ಗಜೇಂದ್ರ, ಎಚ್‌ ಎಂ ವೆಂಕಟೇಶ, ಪ್ರಭಾ ಬೆಳವಂಗಲ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಮೈಕೆಲ್ ಫರ್ನಾಂಡೀಸ್‌ ಮೊದಲಾದವರು ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...