Homeಕರ್ನಾಟಕದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್‌.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಕಾರ್ಯಕ್ರಮ ನಡೆಯಿತು.

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಿತು. ʼಸ್ವಾತಂತ್ರ್ಯ ರಕ್ಷಣೆಗಾಗಿ, ಸ್ವಸ್ಥ ಸೌಹಾರ್ದಯುತ ಸಮಾಜಕ್ಕಾಗಿʼ ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಡೆಗೆಯುದ್ಧಕ್ಕೂ ಕೋಮುವಾದಿ ಸರ್ಕಾರಕ್ಕೆ, ಮನುವಾದಕ್ಕೆ ಧಿಕ್ಕಾರ ಕೂಗಲಾಯಿತು. ದೊರೆಸ್ವಾಮಿಯವರ ಭಾವಚಿತ್ರ ಹಾಗೂ ತ್ರಿವರ್ಣ ಧ್ವಜಗಳನ್ನು ಹಿಡಿದು, ʼರಘುಪತಿ ರಾಘವ ರಾಜಾ ರಾಮ್‌…ʼ ಭಜನೆ ಮಾಡುತ್ತ ಹೋರಾಟಗಾರರು ಹೆಜ್ಜೆಹಾಕಿದರು. ಅಲ್ಪಸಂಖ್ಯಾತ ಸಮುದಾಯವನ್ನು ಟಾರ್ಗೆಟ್‌ ಮಾಡುತ್ತಿರುವುದನ್ನು ಖಂಡಿಸಿದರು.

ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಮಾತನಾಡಿ, “ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಹೋರಾಡಲು ದೊರೆಸ್ವಾಮಿ ಅವರು ನಮಗೆಲ್ಲ ದೊಡ್ಡ ಪ್ರೇರಣಾ ಶಕ್ತಿಯಾಗಿದ್ದರು” ಎಂದು ಹೇಳಿದರು.

“ಸಮಾಜದ ಪ್ರತಿ ಪಿಡುಗಿಗೂ ದೊರೆಸ್ವಾಮಿ ಅವರು ಹೋರಾಟ ನಡೆಸುತ್ತ ಬಂದರು. ಅವರ ಆದರ್ಶಮಯ ಜೀವನ ನಮ್ಮ ಮುಂದಿದೆ. ಅವರ ಬದುಕೇ ನಮಗೆಲ್ಲ ಮಾದರಿ. ಅವರ ಆಶಯಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಸೋಮಶೇಖರ್‌ ಮಾತನಾಡಿ, “ದೊರೆಸ್ವಾಮಿ ಅವರು ನಿಸ್ವಾರ್ಥ ಜೀವಿಯಾಗಿದ್ದರು. ಅವರ ಅಣ್ಣ ಮೇಯರ್‌ ಆಗಿದ್ದರೂ ಜೀವನದ ಕೊನೆವರೆಗೂ ಅವರು ಬಾಡಿಗೆ ಮನೆಯಲ್ಲೇ ವಾಸವಿದ್ದರು. ಇದು ದೊರೆಸ್ವಾಮಿ ಅವರ ಸರಳತೆಗೆ ಸಾಕ್ಷಿ” ಎಂದು ಅಭಿಪ್ರಾಯಪಟ್ಟರು.

ಹಿರಿಯ ಪತ್ರಕರ್ತೆ ವಿಜಯಮ್ಮ ಮಾತನಾಡಿ, “ಜೆ ಎಚ್‌ ಪಟೇಲ್‌ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ʼಸೌಂದರ್ಯ ಸ್ಪರ್ಧೆʼ ನಡೆದಿತ್ತು. ಆ ಸ್ಪರ್ಧೆ ವಿರೋಧಿಸಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಆದರೆ ಮುಖ್ಯಮಂತ್ರಿಗಳು ಸೌಂದರ್ಯ ಸ್ಪರ್ಧೆಯನ್ನು ನಡೆಸುವ ಪಟ್ಟು ಹಿಡಿದಿದ್ದರು. ಆ ವೇಳೆ ದೊರೆಸ್ವಾಮಿ ಅವರು ಪಟೇಲರ ಧೋರಣೆ ವಿರೋಧಿಸಿ, ʼನೀವು ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಬೇಕಾದರೆ ಸ್ಪರ್ಧೆಗೆ ಕಳುಹಿಸಿ, ಆದರೆ ನಾವು ಇಂತಹದ್ದನ್ನು ಒಪ್ಪುವುದಿಲ್ಲʼ ಎಂದು ನೇರವಾಗಿ ಹೇಳಿದ್ದರು. ಅದು ದೊರೆಸ್ವಾಮಿ ಅವರ ನೇರ- ನಿಷ್ಠುರತೆ” ಎಂದು ಸ್ಮರಿಸಿದರು.

ಪ್ರೊ. ನಗರಗೆರೆ ರಮೇಶ್‌ ಮಾತನಾಡಿ, “ರಾಜ್ಯದಲ್ಲಿ ಕೋಮುವಾದ ವಿಜೃಂಭಿಸುತ್ತಿದೆ. ಜಾನಪದ ಜಾತ್ರೆ ಈಗ ಸಂಘಪರಿವಾರದ ಜಾತ್ರೆಯಾಗಿ ಮಾರ್ಪಟ್ಟಿದೆ. ಬಿಜೆಪಿಯಂಥ ಕೆಟ್ಟ ಸರ್ಕಾರ ಕಿತ್ತೆಸೆಯುವುದೇ ದೊರೆಸ್ವಾಮಿ ಅವರ ಆಶಯವಾಗಿತ್ತು” ಎಂದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿ ಕುಮಾರ ಸಮತಳ ಮಾತನಾಡಿ, “ದೊರೆಸ್ವಾಮಿ ಅವರಿಂದ ಕಲಿಯುವುದು ಸಾಕಷ್ಟಿದೆ. ಅವರ ಅನುಭವವೇ ನಮಗೆ ದೊಡ್ಡ ಪಾಠ. ಭೂಮಿ ಮತ್ತು ವಸತಿರಹಿತರ ಹಕ್ಕಿಗಾಗಿ ದೊರೆಸ್ವಾಮಿ ಸದಾಕಾಲ ಹೋರಾಡುತ್ತ ಬಂದಿದ್ದಾರೆ. ಅವರ ಹೋರಾಟವನ್ನು ನಾವು ಮುಂದುವರಿಸುವುದೇ ಅವರಿಗೆ ಸಲ್ಲಿಸುವ ಗೌರವ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಹೋರಾಟಗಾರ್ತಿ ಬಿ ಟಿ ಲಲಿತಾ ನಾಯಕ್‌ ಮಾತನಾಡಿ, “ರಾಜ್ಯದಲ್ಲಿ ಮನುವಾದಿ ಸಂಸ್ಕೃತಿ ಹೆಚ್ಚುತ್ತಿದೆ. ದೊರೆಸ್ವಾಮಿ ಬದುಕಿದ್ದರೆ ಆರ್‌ಎಸ್‌ಎಸ್‌ ನಡೆಗಳನ್ನು ನಿತ್ಯ ಖಂಡಿಸುತ್ತಿದ್ದರು. ರೈತರು ಮತ್ತು ಬಡವರ ಬಗ್ಗೆ ಸದಾಕಾಲ ಪ್ರೀತಿ ಇಟ್ಟುಕೊಂಡು, ಅವರ ಹಕ್ಕಿಗಾಗಿ ಧ್ವನಿ ಎತ್ತುತ್ತಲೇ ಬಂದವರು. ಯಾವ ಮುಲಾಜಿಲ್ಲದೇ ಎಂಥ ದೊಡ್ಡ ನಾಯಕಾದರೂ ಸರಿ, ನೀ ಮಾಡಿದ್ದು ತಪ್ಪು ಅಂತ ಹೇಳುವ ಧೈರ್ಯ ದೊರೆಸ್ವಾಮಿ ಅವರಿಗಿತ್ತು” ಎಂದು ಮೆಲುಕುಹಾಕಿದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿಗಳಾದ ಸಿರಿಮನೆ ನಾಗರಾಜ್‌, ಗೌರಿ, ಜಗನ್‌, ಗಜೇಂದ್ರ, ಎಚ್‌ ಎಂ ವೆಂಕಟೇಶ, ಪ್ರಭಾ ಬೆಳವಂಗಲ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಮೈಕೆಲ್ ಫರ್ನಾಂಡೀಸ್‌ ಮೊದಲಾದವರು ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...