Homeಕರ್ನಾಟಕದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್‌.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಕಾರ್ಯಕ್ರಮ ನಡೆಯಿತು.

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಿತು. ʼಸ್ವಾತಂತ್ರ್ಯ ರಕ್ಷಣೆಗಾಗಿ, ಸ್ವಸ್ಥ ಸೌಹಾರ್ದಯುತ ಸಮಾಜಕ್ಕಾಗಿʼ ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಡೆಗೆಯುದ್ಧಕ್ಕೂ ಕೋಮುವಾದಿ ಸರ್ಕಾರಕ್ಕೆ, ಮನುವಾದಕ್ಕೆ ಧಿಕ್ಕಾರ ಕೂಗಲಾಯಿತು. ದೊರೆಸ್ವಾಮಿಯವರ ಭಾವಚಿತ್ರ ಹಾಗೂ ತ್ರಿವರ್ಣ ಧ್ವಜಗಳನ್ನು ಹಿಡಿದು, ʼರಘುಪತಿ ರಾಘವ ರಾಜಾ ರಾಮ್‌…ʼ ಭಜನೆ ಮಾಡುತ್ತ ಹೋರಾಟಗಾರರು ಹೆಜ್ಜೆಹಾಕಿದರು. ಅಲ್ಪಸಂಖ್ಯಾತ ಸಮುದಾಯವನ್ನು ಟಾರ್ಗೆಟ್‌ ಮಾಡುತ್ತಿರುವುದನ್ನು ಖಂಡಿಸಿದರು.

ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಮಾತನಾಡಿ, “ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಹೋರಾಡಲು ದೊರೆಸ್ವಾಮಿ ಅವರು ನಮಗೆಲ್ಲ ದೊಡ್ಡ ಪ್ರೇರಣಾ ಶಕ್ತಿಯಾಗಿದ್ದರು” ಎಂದು ಹೇಳಿದರು.

“ಸಮಾಜದ ಪ್ರತಿ ಪಿಡುಗಿಗೂ ದೊರೆಸ್ವಾಮಿ ಅವರು ಹೋರಾಟ ನಡೆಸುತ್ತ ಬಂದರು. ಅವರ ಆದರ್ಶಮಯ ಜೀವನ ನಮ್ಮ ಮುಂದಿದೆ. ಅವರ ಬದುಕೇ ನಮಗೆಲ್ಲ ಮಾದರಿ. ಅವರ ಆಶಯಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಸೋಮಶೇಖರ್‌ ಮಾತನಾಡಿ, “ದೊರೆಸ್ವಾಮಿ ಅವರು ನಿಸ್ವಾರ್ಥ ಜೀವಿಯಾಗಿದ್ದರು. ಅವರ ಅಣ್ಣ ಮೇಯರ್‌ ಆಗಿದ್ದರೂ ಜೀವನದ ಕೊನೆವರೆಗೂ ಅವರು ಬಾಡಿಗೆ ಮನೆಯಲ್ಲೇ ವಾಸವಿದ್ದರು. ಇದು ದೊರೆಸ್ವಾಮಿ ಅವರ ಸರಳತೆಗೆ ಸಾಕ್ಷಿ” ಎಂದು ಅಭಿಪ್ರಾಯಪಟ್ಟರು.

ಹಿರಿಯ ಪತ್ರಕರ್ತೆ ವಿಜಯಮ್ಮ ಮಾತನಾಡಿ, “ಜೆ ಎಚ್‌ ಪಟೇಲ್‌ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ʼಸೌಂದರ್ಯ ಸ್ಪರ್ಧೆʼ ನಡೆದಿತ್ತು. ಆ ಸ್ಪರ್ಧೆ ವಿರೋಧಿಸಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಆದರೆ ಮುಖ್ಯಮಂತ್ರಿಗಳು ಸೌಂದರ್ಯ ಸ್ಪರ್ಧೆಯನ್ನು ನಡೆಸುವ ಪಟ್ಟು ಹಿಡಿದಿದ್ದರು. ಆ ವೇಳೆ ದೊರೆಸ್ವಾಮಿ ಅವರು ಪಟೇಲರ ಧೋರಣೆ ವಿರೋಧಿಸಿ, ʼನೀವು ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಬೇಕಾದರೆ ಸ್ಪರ್ಧೆಗೆ ಕಳುಹಿಸಿ, ಆದರೆ ನಾವು ಇಂತಹದ್ದನ್ನು ಒಪ್ಪುವುದಿಲ್ಲʼ ಎಂದು ನೇರವಾಗಿ ಹೇಳಿದ್ದರು. ಅದು ದೊರೆಸ್ವಾಮಿ ಅವರ ನೇರ- ನಿಷ್ಠುರತೆ” ಎಂದು ಸ್ಮರಿಸಿದರು.

ಪ್ರೊ. ನಗರಗೆರೆ ರಮೇಶ್‌ ಮಾತನಾಡಿ, “ರಾಜ್ಯದಲ್ಲಿ ಕೋಮುವಾದ ವಿಜೃಂಭಿಸುತ್ತಿದೆ. ಜಾನಪದ ಜಾತ್ರೆ ಈಗ ಸಂಘಪರಿವಾರದ ಜಾತ್ರೆಯಾಗಿ ಮಾರ್ಪಟ್ಟಿದೆ. ಬಿಜೆಪಿಯಂಥ ಕೆಟ್ಟ ಸರ್ಕಾರ ಕಿತ್ತೆಸೆಯುವುದೇ ದೊರೆಸ್ವಾಮಿ ಅವರ ಆಶಯವಾಗಿತ್ತು” ಎಂದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿ ಕುಮಾರ ಸಮತಳ ಮಾತನಾಡಿ, “ದೊರೆಸ್ವಾಮಿ ಅವರಿಂದ ಕಲಿಯುವುದು ಸಾಕಷ್ಟಿದೆ. ಅವರ ಅನುಭವವೇ ನಮಗೆ ದೊಡ್ಡ ಪಾಠ. ಭೂಮಿ ಮತ್ತು ವಸತಿರಹಿತರ ಹಕ್ಕಿಗಾಗಿ ದೊರೆಸ್ವಾಮಿ ಸದಾಕಾಲ ಹೋರಾಡುತ್ತ ಬಂದಿದ್ದಾರೆ. ಅವರ ಹೋರಾಟವನ್ನು ನಾವು ಮುಂದುವರಿಸುವುದೇ ಅವರಿಗೆ ಸಲ್ಲಿಸುವ ಗೌರವ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಹೋರಾಟಗಾರ್ತಿ ಬಿ ಟಿ ಲಲಿತಾ ನಾಯಕ್‌ ಮಾತನಾಡಿ, “ರಾಜ್ಯದಲ್ಲಿ ಮನುವಾದಿ ಸಂಸ್ಕೃತಿ ಹೆಚ್ಚುತ್ತಿದೆ. ದೊರೆಸ್ವಾಮಿ ಬದುಕಿದ್ದರೆ ಆರ್‌ಎಸ್‌ಎಸ್‌ ನಡೆಗಳನ್ನು ನಿತ್ಯ ಖಂಡಿಸುತ್ತಿದ್ದರು. ರೈತರು ಮತ್ತು ಬಡವರ ಬಗ್ಗೆ ಸದಾಕಾಲ ಪ್ರೀತಿ ಇಟ್ಟುಕೊಂಡು, ಅವರ ಹಕ್ಕಿಗಾಗಿ ಧ್ವನಿ ಎತ್ತುತ್ತಲೇ ಬಂದವರು. ಯಾವ ಮುಲಾಜಿಲ್ಲದೇ ಎಂಥ ದೊಡ್ಡ ನಾಯಕಾದರೂ ಸರಿ, ನೀ ಮಾಡಿದ್ದು ತಪ್ಪು ಅಂತ ಹೇಳುವ ಧೈರ್ಯ ದೊರೆಸ್ವಾಮಿ ಅವರಿಗಿತ್ತು” ಎಂದು ಮೆಲುಕುಹಾಕಿದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿಗಳಾದ ಸಿರಿಮನೆ ನಾಗರಾಜ್‌, ಗೌರಿ, ಜಗನ್‌, ಗಜೇಂದ್ರ, ಎಚ್‌ ಎಂ ವೆಂಕಟೇಶ, ಪ್ರಭಾ ಬೆಳವಂಗಲ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಮೈಕೆಲ್ ಫರ್ನಾಂಡೀಸ್‌ ಮೊದಲಾದವರು ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...