Homeಮುಖಪುಟಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ...

ಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ ಮೂರು ದಿನಗಳ ಧರಣಿ.

ಮಾರ್ಚ್‌ 14, 15, 16ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರು ಜನತೆಯ ನೈಜ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆದ್ಯತೆಯಿಂದ ಗಮನ ಕೊಡಬೇಕೆಂದು ಆಗ್ರಹಿಸಿ ಮಾರ್ಚ್‌ 14, 15, 16ರಂದು ’ಪ್ರಜಾಧಿಕಾರ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ಜನಸಮಾನ್ಯರ ಸಮಸ್ಯೆಗಳು ‌ಮಿತಿ ಮೀರಿವೆ. ನಿರುದ್ಯೋಗ ತಾಂಡವವಾಡುತ್ತಿದೆ, ಉದ್ಯೋಗ ಕಲ್ಪಿಸುವ ಕೈಗಾರಿಕೆಗಳು, ಉದ್ಯಮ ಸಂಸ್ಥೆಗಳೆಲ್ಲ ಸರಕಾರದ ಕಾರ್ಪೊರೇಟ್-ಪರ ಆರ್ಥಿಕ ನೀತಿಗಳಿಂದಾಗಿ ಬಾಗಿಲು ಮುಚ್ಚುತ್ತಿವೆ. ರೈತರ, ವಿದ್ಯಾರ್ಥಿಗಳ, ಭೂಮಿ-ವಸತಿ ರಹಿತರ, ಸಣ್ಣಪುಟ್ಟ ವ್ಯಾಪಾರ-ವ್ಯವಹಾರಸ್ಥರ, ದಲಿತರ-ಹಿಂದುಳಿದವರ-ಮಹಿಳೆಯರ ಸಮಸ್ಯೆಗಳಿಗೆ ಸರಕಾರ ಯಾವುದೇ ಪರಿಹಾರೋಪಾಯ ರೂಪಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುರ್ಬಲರ ಮೇಲೆ, ಅಲ್ಪಸಂಖ್ಯಾತರ ಮೇಲೆ ಜಾತಿ-ಧರ್ಮಗಳ ನೆಲೆಯಲ್ಲಿ ಗುಂಪು ಹಿಂಸೆ, ಬಡಿದು ಕೊಲ್ಲುವಂತಹ ಕ್ರೌರ್ಯದ ಕೃತ್ಯಗಳು ಹಾದಿಬೀದಿಗಳಲ್ಲಿ ಜರುಗುತ್ತಿವೆ. ರಕ್ಷಣೆ ಕೊಡಬೇಕಾದ ಪೊಲೀಸರೇ ದೊಂಬಿಕೋರ ಗ್ಯಾಂಗುಗಳ ಜೊತೆ ಸೇರಿ ಅಶಕ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಯಾವ ಆಶ್ವಾಸನೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಮತ್ತಷ್ಟು ಸಮಸ್ಯೆಗಳನ್ನೇ ಹುಟ್ಟುಹಾಕಿದೆ. ತನ್ನ ವಿಫಲತೆಗಳನ್ನು ಮರೆಮಾಚಲು, ಜನರ ಬದುಕಿಗೆ ಸಂಬಂಧವಿಲ್ಲದ ಯಾವಯಾವುದೋ ಕ್ರಮಗಳನ್ನು ಜಾರಿಗೆ ತರುತ್ತ ದೇಶವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತ, ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯಕ್ಕೆ ನ್ಯಾಯವಾಗಿ ಸಲ್ಲಬೇಕಾದ ಸಂಪನ್ಮೂಲದ ಪಾಲು, ಪ್ರಕೃತಿ ವಿಕೋಪ ಪರಿಹಾರದ ನೆರವು ಮುಂತಾದ ಹಣಕಾಸಿನ ಬಾಬತ್ತನ್ನೆಲ್ಲ ವಿಪರೀತ ಕಡಿತಗೊಳಿಸಿ, ಅತಿಯಾಗಿ ತಾರತಮ್ಯ ಮಾಡುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮ ಪೂರ್ತಿ ಸ್ಥಗಿತಗೊಳ್ಳಲಿದೆಯೆಂದು ವರದಿಗಳು ಹೇಳಿವೆ. ಕೇಂದ್ರ ಸರಕಾರದ ನಿರಂಕುಶ ದಬ್ಬಾಳಿಕೆ, ದುರಾಡಳಿತಗಳನ್ನು ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಅವರ ವಿರುದ್ಧ ರಾಜದ್ರೋಹದ ಆಪಾದನೆ ಹೊರಿಸಿ ದೀರ್ಘಕಾಲ ಜೈಲಿಗೆ ತಳ್ಳಲಾಗುತ್ತಿದೆ ಎಂದು ದೊರೆಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಗಳನ್ನೂ ಒಳಗೊಂಡಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ, ಪ್ರಭಾವಿ ಮಾಧ್ಯಮಗಳನ್ನೂ ಸರಕಾರದ ಆಣತಿಗೆ ತಕ್ಕಂತೆ ಕುಣಿಯುವ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಬಗ್ಗದವರಿಗೆ ಸತತ ಕಿರುಕುಳ ನೀಡಲಾಗುತ್ತಿದೆ. ಇದೆಲ್ಲಕ್ಕೆ ಕಳಸವಿಟ್ಟಂತೆ ಇದೀಗ ದೇಶವನ್ನು ಧಾರ್ಮಿಕ ಆಧಾರದಲ್ಲಿ ಛಿದ್ರಛಿದ್ರಗೊಳಿಸುವ, ದಲಿತರು-ಆದಿವಾಸಿಗಳು-ಅಲೆಮಾರಿಗಳು ಮತ್ತಿತರ ಅಂಚಿಗೆ ಒತ್ತಲ್ಪಟ್ಟಿರುವ ಸಮುದಾಯಗಳನ್ನು ದೇಶಭ್ರಷ್ಟಗೊಳಿಸುವ ‘ಪೌರತ್ವ ತಿದ್ದುಪಡಿ ಕಾಯ್ದೆ’ ತಂದು, ದೇಶದಲ್ಲಿ ಅಶಾಂತಿಯ ಬೆಂಕಿ ಹಚ್ಚಲಾಗಿದೆ. ದೇಶ ದಿನದಿನಕ್ಕೆ ಅಧಃಪತನದತ್ತ ಜಾರಿಹೋಗುತ್ತಿದೆ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಈ ಎಲ್ಲ ದುರಾಡಳಿತ, ಸರ್ವಾಧಿಕಾರ, ದಿಕ್ಕುತಪ್ಪಿಸುವ ತಂತ್ರಗಳನ್ನು ವಿರೋಧಿಸುತ್ತ, ಜನತೆಯ ಬದುಕಿನ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಸುಸ್ಥಿರ ಆರ್ಥಿಕ ಕ್ರಮಗಳನ್ನು ಅನುಷ್ಠಾನಕ್ಕೆ ತಂದು ದೇಶವನ್ನು ಪುನಃ ಅಭಿವೃದ್ಧಿ ಹಾದಿಯಲ್ಲಿ ನಡೆಸುವಂತೆ ಸರಕಾರಕ್ಕೆ ಗಟ್ಟಿ ದನಿಯಲ್ಲಿ ಎಚ್ಚರಿಕೆ ನೀಡುವುದಕ್ಕಾಗಿ, ‘ಪ್ರಜಾಧಿಕಾರ ಹೋರಾಟ ಸಮಿತಿ’ ವೇದಿಕೆಯು  ಮಾರ್ಚ್‌ 14, 15, 16ರ ಶನಿವಾರ, ಭಾನುವಾರ ಮತ್ತು ಸೋಮವಾರ ಧರಣಿ ಸತ್ಯಾಗ್ರಹ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಲಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ. ಪ್ರಜ್ಞಾವಂತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....