Homeಮುಖಪುಟಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ...

ಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ ಮೂರು ದಿನಗಳ ಧರಣಿ.

ಮಾರ್ಚ್‌ 14, 15, 16ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರು ಜನತೆಯ ನೈಜ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆದ್ಯತೆಯಿಂದ ಗಮನ ಕೊಡಬೇಕೆಂದು ಆಗ್ರಹಿಸಿ ಮಾರ್ಚ್‌ 14, 15, 16ರಂದು ’ಪ್ರಜಾಧಿಕಾರ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ಜನಸಮಾನ್ಯರ ಸಮಸ್ಯೆಗಳು ‌ಮಿತಿ ಮೀರಿವೆ. ನಿರುದ್ಯೋಗ ತಾಂಡವವಾಡುತ್ತಿದೆ, ಉದ್ಯೋಗ ಕಲ್ಪಿಸುವ ಕೈಗಾರಿಕೆಗಳು, ಉದ್ಯಮ ಸಂಸ್ಥೆಗಳೆಲ್ಲ ಸರಕಾರದ ಕಾರ್ಪೊರೇಟ್-ಪರ ಆರ್ಥಿಕ ನೀತಿಗಳಿಂದಾಗಿ ಬಾಗಿಲು ಮುಚ್ಚುತ್ತಿವೆ. ರೈತರ, ವಿದ್ಯಾರ್ಥಿಗಳ, ಭೂಮಿ-ವಸತಿ ರಹಿತರ, ಸಣ್ಣಪುಟ್ಟ ವ್ಯಾಪಾರ-ವ್ಯವಹಾರಸ್ಥರ, ದಲಿತರ-ಹಿಂದುಳಿದವರ-ಮಹಿಳೆಯರ ಸಮಸ್ಯೆಗಳಿಗೆ ಸರಕಾರ ಯಾವುದೇ ಪರಿಹಾರೋಪಾಯ ರೂಪಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುರ್ಬಲರ ಮೇಲೆ, ಅಲ್ಪಸಂಖ್ಯಾತರ ಮೇಲೆ ಜಾತಿ-ಧರ್ಮಗಳ ನೆಲೆಯಲ್ಲಿ ಗುಂಪು ಹಿಂಸೆ, ಬಡಿದು ಕೊಲ್ಲುವಂತಹ ಕ್ರೌರ್ಯದ ಕೃತ್ಯಗಳು ಹಾದಿಬೀದಿಗಳಲ್ಲಿ ಜರುಗುತ್ತಿವೆ. ರಕ್ಷಣೆ ಕೊಡಬೇಕಾದ ಪೊಲೀಸರೇ ದೊಂಬಿಕೋರ ಗ್ಯಾಂಗುಗಳ ಜೊತೆ ಸೇರಿ ಅಶಕ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಯಾವ ಆಶ್ವಾಸನೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಮತ್ತಷ್ಟು ಸಮಸ್ಯೆಗಳನ್ನೇ ಹುಟ್ಟುಹಾಕಿದೆ. ತನ್ನ ವಿಫಲತೆಗಳನ್ನು ಮರೆಮಾಚಲು, ಜನರ ಬದುಕಿಗೆ ಸಂಬಂಧವಿಲ್ಲದ ಯಾವಯಾವುದೋ ಕ್ರಮಗಳನ್ನು ಜಾರಿಗೆ ತರುತ್ತ ದೇಶವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತ, ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯಕ್ಕೆ ನ್ಯಾಯವಾಗಿ ಸಲ್ಲಬೇಕಾದ ಸಂಪನ್ಮೂಲದ ಪಾಲು, ಪ್ರಕೃತಿ ವಿಕೋಪ ಪರಿಹಾರದ ನೆರವು ಮುಂತಾದ ಹಣಕಾಸಿನ ಬಾಬತ್ತನ್ನೆಲ್ಲ ವಿಪರೀತ ಕಡಿತಗೊಳಿಸಿ, ಅತಿಯಾಗಿ ತಾರತಮ್ಯ ಮಾಡುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮ ಪೂರ್ತಿ ಸ್ಥಗಿತಗೊಳ್ಳಲಿದೆಯೆಂದು ವರದಿಗಳು ಹೇಳಿವೆ. ಕೇಂದ್ರ ಸರಕಾರದ ನಿರಂಕುಶ ದಬ್ಬಾಳಿಕೆ, ದುರಾಡಳಿತಗಳನ್ನು ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಅವರ ವಿರುದ್ಧ ರಾಜದ್ರೋಹದ ಆಪಾದನೆ ಹೊರಿಸಿ ದೀರ್ಘಕಾಲ ಜೈಲಿಗೆ ತಳ್ಳಲಾಗುತ್ತಿದೆ ಎಂದು ದೊರೆಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಗಳನ್ನೂ ಒಳಗೊಂಡಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ, ಪ್ರಭಾವಿ ಮಾಧ್ಯಮಗಳನ್ನೂ ಸರಕಾರದ ಆಣತಿಗೆ ತಕ್ಕಂತೆ ಕುಣಿಯುವ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಬಗ್ಗದವರಿಗೆ ಸತತ ಕಿರುಕುಳ ನೀಡಲಾಗುತ್ತಿದೆ. ಇದೆಲ್ಲಕ್ಕೆ ಕಳಸವಿಟ್ಟಂತೆ ಇದೀಗ ದೇಶವನ್ನು ಧಾರ್ಮಿಕ ಆಧಾರದಲ್ಲಿ ಛಿದ್ರಛಿದ್ರಗೊಳಿಸುವ, ದಲಿತರು-ಆದಿವಾಸಿಗಳು-ಅಲೆಮಾರಿಗಳು ಮತ್ತಿತರ ಅಂಚಿಗೆ ಒತ್ತಲ್ಪಟ್ಟಿರುವ ಸಮುದಾಯಗಳನ್ನು ದೇಶಭ್ರಷ್ಟಗೊಳಿಸುವ ‘ಪೌರತ್ವ ತಿದ್ದುಪಡಿ ಕಾಯ್ದೆ’ ತಂದು, ದೇಶದಲ್ಲಿ ಅಶಾಂತಿಯ ಬೆಂಕಿ ಹಚ್ಚಲಾಗಿದೆ. ದೇಶ ದಿನದಿನಕ್ಕೆ ಅಧಃಪತನದತ್ತ ಜಾರಿಹೋಗುತ್ತಿದೆ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಈ ಎಲ್ಲ ದುರಾಡಳಿತ, ಸರ್ವಾಧಿಕಾರ, ದಿಕ್ಕುತಪ್ಪಿಸುವ ತಂತ್ರಗಳನ್ನು ವಿರೋಧಿಸುತ್ತ, ಜನತೆಯ ಬದುಕಿನ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಸುಸ್ಥಿರ ಆರ್ಥಿಕ ಕ್ರಮಗಳನ್ನು ಅನುಷ್ಠಾನಕ್ಕೆ ತಂದು ದೇಶವನ್ನು ಪುನಃ ಅಭಿವೃದ್ಧಿ ಹಾದಿಯಲ್ಲಿ ನಡೆಸುವಂತೆ ಸರಕಾರಕ್ಕೆ ಗಟ್ಟಿ ದನಿಯಲ್ಲಿ ಎಚ್ಚರಿಕೆ ನೀಡುವುದಕ್ಕಾಗಿ, ‘ಪ್ರಜಾಧಿಕಾರ ಹೋರಾಟ ಸಮಿತಿ’ ವೇದಿಕೆಯು  ಮಾರ್ಚ್‌ 14, 15, 16ರ ಶನಿವಾರ, ಭಾನುವಾರ ಮತ್ತು ಸೋಮವಾರ ಧರಣಿ ಸತ್ಯಾಗ್ರಹ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಲಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ. ಪ್ರಜ್ಞಾವಂತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...