Homeಮುಖಪುಟಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ...

ಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ ಮೂರು ದಿನಗಳ ಧರಣಿ.

ಮಾರ್ಚ್‌ 14, 15, 16ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರು ಜನತೆಯ ನೈಜ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆದ್ಯತೆಯಿಂದ ಗಮನ ಕೊಡಬೇಕೆಂದು ಆಗ್ರಹಿಸಿ ಮಾರ್ಚ್‌ 14, 15, 16ರಂದು ’ಪ್ರಜಾಧಿಕಾರ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ಜನಸಮಾನ್ಯರ ಸಮಸ್ಯೆಗಳು ‌ಮಿತಿ ಮೀರಿವೆ. ನಿರುದ್ಯೋಗ ತಾಂಡವವಾಡುತ್ತಿದೆ, ಉದ್ಯೋಗ ಕಲ್ಪಿಸುವ ಕೈಗಾರಿಕೆಗಳು, ಉದ್ಯಮ ಸಂಸ್ಥೆಗಳೆಲ್ಲ ಸರಕಾರದ ಕಾರ್ಪೊರೇಟ್-ಪರ ಆರ್ಥಿಕ ನೀತಿಗಳಿಂದಾಗಿ ಬಾಗಿಲು ಮುಚ್ಚುತ್ತಿವೆ. ರೈತರ, ವಿದ್ಯಾರ್ಥಿಗಳ, ಭೂಮಿ-ವಸತಿ ರಹಿತರ, ಸಣ್ಣಪುಟ್ಟ ವ್ಯಾಪಾರ-ವ್ಯವಹಾರಸ್ಥರ, ದಲಿತರ-ಹಿಂದುಳಿದವರ-ಮಹಿಳೆಯರ ಸಮಸ್ಯೆಗಳಿಗೆ ಸರಕಾರ ಯಾವುದೇ ಪರಿಹಾರೋಪಾಯ ರೂಪಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುರ್ಬಲರ ಮೇಲೆ, ಅಲ್ಪಸಂಖ್ಯಾತರ ಮೇಲೆ ಜಾತಿ-ಧರ್ಮಗಳ ನೆಲೆಯಲ್ಲಿ ಗುಂಪು ಹಿಂಸೆ, ಬಡಿದು ಕೊಲ್ಲುವಂತಹ ಕ್ರೌರ್ಯದ ಕೃತ್ಯಗಳು ಹಾದಿಬೀದಿಗಳಲ್ಲಿ ಜರುಗುತ್ತಿವೆ. ರಕ್ಷಣೆ ಕೊಡಬೇಕಾದ ಪೊಲೀಸರೇ ದೊಂಬಿಕೋರ ಗ್ಯಾಂಗುಗಳ ಜೊತೆ ಸೇರಿ ಅಶಕ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಯಾವ ಆಶ್ವಾಸನೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಮತ್ತಷ್ಟು ಸಮಸ್ಯೆಗಳನ್ನೇ ಹುಟ್ಟುಹಾಕಿದೆ. ತನ್ನ ವಿಫಲತೆಗಳನ್ನು ಮರೆಮಾಚಲು, ಜನರ ಬದುಕಿಗೆ ಸಂಬಂಧವಿಲ್ಲದ ಯಾವಯಾವುದೋ ಕ್ರಮಗಳನ್ನು ಜಾರಿಗೆ ತರುತ್ತ ದೇಶವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತ, ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯಕ್ಕೆ ನ್ಯಾಯವಾಗಿ ಸಲ್ಲಬೇಕಾದ ಸಂಪನ್ಮೂಲದ ಪಾಲು, ಪ್ರಕೃತಿ ವಿಕೋಪ ಪರಿಹಾರದ ನೆರವು ಮುಂತಾದ ಹಣಕಾಸಿನ ಬಾಬತ್ತನ್ನೆಲ್ಲ ವಿಪರೀತ ಕಡಿತಗೊಳಿಸಿ, ಅತಿಯಾಗಿ ತಾರತಮ್ಯ ಮಾಡುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮ ಪೂರ್ತಿ ಸ್ಥಗಿತಗೊಳ್ಳಲಿದೆಯೆಂದು ವರದಿಗಳು ಹೇಳಿವೆ. ಕೇಂದ್ರ ಸರಕಾರದ ನಿರಂಕುಶ ದಬ್ಬಾಳಿಕೆ, ದುರಾಡಳಿತಗಳನ್ನು ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಅವರ ವಿರುದ್ಧ ರಾಜದ್ರೋಹದ ಆಪಾದನೆ ಹೊರಿಸಿ ದೀರ್ಘಕಾಲ ಜೈಲಿಗೆ ತಳ್ಳಲಾಗುತ್ತಿದೆ ಎಂದು ದೊರೆಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಗಳನ್ನೂ ಒಳಗೊಂಡಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ, ಪ್ರಭಾವಿ ಮಾಧ್ಯಮಗಳನ್ನೂ ಸರಕಾರದ ಆಣತಿಗೆ ತಕ್ಕಂತೆ ಕುಣಿಯುವ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಬಗ್ಗದವರಿಗೆ ಸತತ ಕಿರುಕುಳ ನೀಡಲಾಗುತ್ತಿದೆ. ಇದೆಲ್ಲಕ್ಕೆ ಕಳಸವಿಟ್ಟಂತೆ ಇದೀಗ ದೇಶವನ್ನು ಧಾರ್ಮಿಕ ಆಧಾರದಲ್ಲಿ ಛಿದ್ರಛಿದ್ರಗೊಳಿಸುವ, ದಲಿತರು-ಆದಿವಾಸಿಗಳು-ಅಲೆಮಾರಿಗಳು ಮತ್ತಿತರ ಅಂಚಿಗೆ ಒತ್ತಲ್ಪಟ್ಟಿರುವ ಸಮುದಾಯಗಳನ್ನು ದೇಶಭ್ರಷ್ಟಗೊಳಿಸುವ ‘ಪೌರತ್ವ ತಿದ್ದುಪಡಿ ಕಾಯ್ದೆ’ ತಂದು, ದೇಶದಲ್ಲಿ ಅಶಾಂತಿಯ ಬೆಂಕಿ ಹಚ್ಚಲಾಗಿದೆ. ದೇಶ ದಿನದಿನಕ್ಕೆ ಅಧಃಪತನದತ್ತ ಜಾರಿಹೋಗುತ್ತಿದೆ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಈ ಎಲ್ಲ ದುರಾಡಳಿತ, ಸರ್ವಾಧಿಕಾರ, ದಿಕ್ಕುತಪ್ಪಿಸುವ ತಂತ್ರಗಳನ್ನು ವಿರೋಧಿಸುತ್ತ, ಜನತೆಯ ಬದುಕಿನ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಸುಸ್ಥಿರ ಆರ್ಥಿಕ ಕ್ರಮಗಳನ್ನು ಅನುಷ್ಠಾನಕ್ಕೆ ತಂದು ದೇಶವನ್ನು ಪುನಃ ಅಭಿವೃದ್ಧಿ ಹಾದಿಯಲ್ಲಿ ನಡೆಸುವಂತೆ ಸರಕಾರಕ್ಕೆ ಗಟ್ಟಿ ದನಿಯಲ್ಲಿ ಎಚ್ಚರಿಕೆ ನೀಡುವುದಕ್ಕಾಗಿ, ‘ಪ್ರಜಾಧಿಕಾರ ಹೋರಾಟ ಸಮಿತಿ’ ವೇದಿಕೆಯು  ಮಾರ್ಚ್‌ 14, 15, 16ರ ಶನಿವಾರ, ಭಾನುವಾರ ಮತ್ತು ಸೋಮವಾರ ಧರಣಿ ಸತ್ಯಾಗ್ರಹ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಲಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ. ಪ್ರಜ್ಞಾವಂತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...