Homeಮುಖಪುಟಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ...

ಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ ಮೂರು ದಿನಗಳ ಧರಣಿ.

ಮಾರ್ಚ್‌ 14, 15, 16ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರು ಜನತೆಯ ನೈಜ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆದ್ಯತೆಯಿಂದ ಗಮನ ಕೊಡಬೇಕೆಂದು ಆಗ್ರಹಿಸಿ ಮಾರ್ಚ್‌ 14, 15, 16ರಂದು ’ಪ್ರಜಾಧಿಕಾರ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ಜನಸಮಾನ್ಯರ ಸಮಸ್ಯೆಗಳು ‌ಮಿತಿ ಮೀರಿವೆ. ನಿರುದ್ಯೋಗ ತಾಂಡವವಾಡುತ್ತಿದೆ, ಉದ್ಯೋಗ ಕಲ್ಪಿಸುವ ಕೈಗಾರಿಕೆಗಳು, ಉದ್ಯಮ ಸಂಸ್ಥೆಗಳೆಲ್ಲ ಸರಕಾರದ ಕಾರ್ಪೊರೇಟ್-ಪರ ಆರ್ಥಿಕ ನೀತಿಗಳಿಂದಾಗಿ ಬಾಗಿಲು ಮುಚ್ಚುತ್ತಿವೆ. ರೈತರ, ವಿದ್ಯಾರ್ಥಿಗಳ, ಭೂಮಿ-ವಸತಿ ರಹಿತರ, ಸಣ್ಣಪುಟ್ಟ ವ್ಯಾಪಾರ-ವ್ಯವಹಾರಸ್ಥರ, ದಲಿತರ-ಹಿಂದುಳಿದವರ-ಮಹಿಳೆಯರ ಸಮಸ್ಯೆಗಳಿಗೆ ಸರಕಾರ ಯಾವುದೇ ಪರಿಹಾರೋಪಾಯ ರೂಪಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುರ್ಬಲರ ಮೇಲೆ, ಅಲ್ಪಸಂಖ್ಯಾತರ ಮೇಲೆ ಜಾತಿ-ಧರ್ಮಗಳ ನೆಲೆಯಲ್ಲಿ ಗುಂಪು ಹಿಂಸೆ, ಬಡಿದು ಕೊಲ್ಲುವಂತಹ ಕ್ರೌರ್ಯದ ಕೃತ್ಯಗಳು ಹಾದಿಬೀದಿಗಳಲ್ಲಿ ಜರುಗುತ್ತಿವೆ. ರಕ್ಷಣೆ ಕೊಡಬೇಕಾದ ಪೊಲೀಸರೇ ದೊಂಬಿಕೋರ ಗ್ಯಾಂಗುಗಳ ಜೊತೆ ಸೇರಿ ಅಶಕ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಯಾವ ಆಶ್ವಾಸನೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಮತ್ತಷ್ಟು ಸಮಸ್ಯೆಗಳನ್ನೇ ಹುಟ್ಟುಹಾಕಿದೆ. ತನ್ನ ವಿಫಲತೆಗಳನ್ನು ಮರೆಮಾಚಲು, ಜನರ ಬದುಕಿಗೆ ಸಂಬಂಧವಿಲ್ಲದ ಯಾವಯಾವುದೋ ಕ್ರಮಗಳನ್ನು ಜಾರಿಗೆ ತರುತ್ತ ದೇಶವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತ, ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯಕ್ಕೆ ನ್ಯಾಯವಾಗಿ ಸಲ್ಲಬೇಕಾದ ಸಂಪನ್ಮೂಲದ ಪಾಲು, ಪ್ರಕೃತಿ ವಿಕೋಪ ಪರಿಹಾರದ ನೆರವು ಮುಂತಾದ ಹಣಕಾಸಿನ ಬಾಬತ್ತನ್ನೆಲ್ಲ ವಿಪರೀತ ಕಡಿತಗೊಳಿಸಿ, ಅತಿಯಾಗಿ ತಾರತಮ್ಯ ಮಾಡುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮ ಪೂರ್ತಿ ಸ್ಥಗಿತಗೊಳ್ಳಲಿದೆಯೆಂದು ವರದಿಗಳು ಹೇಳಿವೆ. ಕೇಂದ್ರ ಸರಕಾರದ ನಿರಂಕುಶ ದಬ್ಬಾಳಿಕೆ, ದುರಾಡಳಿತಗಳನ್ನು ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಅವರ ವಿರುದ್ಧ ರಾಜದ್ರೋಹದ ಆಪಾದನೆ ಹೊರಿಸಿ ದೀರ್ಘಕಾಲ ಜೈಲಿಗೆ ತಳ್ಳಲಾಗುತ್ತಿದೆ ಎಂದು ದೊರೆಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಗಳನ್ನೂ ಒಳಗೊಂಡಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ, ಪ್ರಭಾವಿ ಮಾಧ್ಯಮಗಳನ್ನೂ ಸರಕಾರದ ಆಣತಿಗೆ ತಕ್ಕಂತೆ ಕುಣಿಯುವ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಬಗ್ಗದವರಿಗೆ ಸತತ ಕಿರುಕುಳ ನೀಡಲಾಗುತ್ತಿದೆ. ಇದೆಲ್ಲಕ್ಕೆ ಕಳಸವಿಟ್ಟಂತೆ ಇದೀಗ ದೇಶವನ್ನು ಧಾರ್ಮಿಕ ಆಧಾರದಲ್ಲಿ ಛಿದ್ರಛಿದ್ರಗೊಳಿಸುವ, ದಲಿತರು-ಆದಿವಾಸಿಗಳು-ಅಲೆಮಾರಿಗಳು ಮತ್ತಿತರ ಅಂಚಿಗೆ ಒತ್ತಲ್ಪಟ್ಟಿರುವ ಸಮುದಾಯಗಳನ್ನು ದೇಶಭ್ರಷ್ಟಗೊಳಿಸುವ ‘ಪೌರತ್ವ ತಿದ್ದುಪಡಿ ಕಾಯ್ದೆ’ ತಂದು, ದೇಶದಲ್ಲಿ ಅಶಾಂತಿಯ ಬೆಂಕಿ ಹಚ್ಚಲಾಗಿದೆ. ದೇಶ ದಿನದಿನಕ್ಕೆ ಅಧಃಪತನದತ್ತ ಜಾರಿಹೋಗುತ್ತಿದೆ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಈ ಎಲ್ಲ ದುರಾಡಳಿತ, ಸರ್ವಾಧಿಕಾರ, ದಿಕ್ಕುತಪ್ಪಿಸುವ ತಂತ್ರಗಳನ್ನು ವಿರೋಧಿಸುತ್ತ, ಜನತೆಯ ಬದುಕಿನ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಸುಸ್ಥಿರ ಆರ್ಥಿಕ ಕ್ರಮಗಳನ್ನು ಅನುಷ್ಠಾನಕ್ಕೆ ತಂದು ದೇಶವನ್ನು ಪುನಃ ಅಭಿವೃದ್ಧಿ ಹಾದಿಯಲ್ಲಿ ನಡೆಸುವಂತೆ ಸರಕಾರಕ್ಕೆ ಗಟ್ಟಿ ದನಿಯಲ್ಲಿ ಎಚ್ಚರಿಕೆ ನೀಡುವುದಕ್ಕಾಗಿ, ‘ಪ್ರಜಾಧಿಕಾರ ಹೋರಾಟ ಸಮಿತಿ’ ವೇದಿಕೆಯು  ಮಾರ್ಚ್‌ 14, 15, 16ರ ಶನಿವಾರ, ಭಾನುವಾರ ಮತ್ತು ಸೋಮವಾರ ಧರಣಿ ಸತ್ಯಾಗ್ರಹ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಲಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ. ಪ್ರಜ್ಞಾವಂತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...