HomeUncategorizedಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ

ಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ

- Advertisement -
- Advertisement -

ಸಮಾಜದಲ್ಲಿ ಸ್ವಲ್ಪ ಹೆಸರುಗಳಿಸಿಕೊಂಡು ಗಣ್ಯವ್ಯಕ್ತಿಗಳ ಸಾಲಿಗೆ ಸೇರಿದೊಡನೆಯೇ ಬಹಳಷ್ಟು ಜನ ತಾವು ಇತರರಿಗಿಂತ ತೀರ ಭಿನ್ನರೆಂಬ ರೀತಿಯಲ್ಲಿ ಸಾಮಾನ್ಯವಾಗಿ ವರ್ತಿಸುವುದುಂಟು. ಅಂಥವರ ನಡವಳಿಕೆಯೇ ಅವರ ಧೋರಣೆಯನ್ನು ಬಯಲು ಮಾಡುತ್ತದೆ. ಇನ್ನು ಸರ್ಕಾರದಲ್ಲಿರುವವರ ಸಖ್ಯ ಸ್ವಲ್ಪ ಸಿಕ್ಕಿದರು ಸಾಕು, ಅದು ಮತ್ತೊಂದು ಕಥೆಯಾಗುತ್ತದೆ.

ಆದರೆ ಕೆಲವರಿರುತ್ತಾರೆ ತಾವು ಎಷ್ಟೇ ಪ್ರಮುಖರೆನಿಸಿಕೊಂಡರೂ ಸಮಾಜದ ಇತರರಂತೆಯೇ ತಾವೂ ಒಬ್ಬರು ಅನ್ನುವುದನ್ನು ಎಂದಿಗೂ ಮರೆಯುವುದಿಲ್ಲ. ಎಲ್ಲರೊಡನೆಯು ಸೌಜನ್ಯಪೂರಿತ ನಡೆಯನ್ನೇ ತೋರಿಸುತ್ತಾರೆ. ಆ ಸೌಜನ್ಯವು ಸಹ ತೋರಿಕೆಯ ಸೌಜನ್ಯವಾಗಿರದೆ ಅಂಥವರ ವ್ಯಕ್ತಿತ್ವದ ಭಾಗವೇ ಆಗಿರುತ್ತದೆ. ಮಹಾನ್ ನಾಯಕರಾಗಿಯೂ ಅವರು ಅತಿ ಸಾಮಾನ್ಯರಂತೆಯೇ ಇರುತ್ತಾರೆ. ಶ್ರೀ ದೊರೆಸ್ವಾಮಿಯವರು ಇಂಥವರ ಸಾಲಿಗೆ ಸೇರಿದವರು. ನಾನು ಅವರನ್ನು ಭೇಟಿ ಮಾಡಿದ ದಿನದಿಂದಲೂ ಗುರುತಿಸಿದ್ದ ಅವರ ವಿಶಿಷ್ಟ ಗುಣವಿದು.

1980ರ ದಶಕದ ಮಧ್ಯ ಭಾಗದಲ್ಲಿ ಗೌರಿಬಿದನೂರಿನ ಸಮೀಪದ ಗಂಗಸಂದ್ರವೆಂಬ ಹಳ್ಳಿಯಲ್ಲಿ ಶ್ರೀಮತಿ ಗೌರಮ್ಮ ಎಂಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿಯವರ ಆಶ್ರಮದಲ್ಲಿ ನಮ್ಮ ’ಸಮುದಾಯ’ ತಂಡದ ಬೀದಿ ನಾಟಕದ ಪ್ರದರ್ಶನ ಏರ್ಪಟ್ಟಿತ್ತು. ಅದೇ ದಿನ ಅಲ್ಲಿಗೆ ಬಂದಿದ್ದ ಶ್ರೀ ದೊರೆಸ್ವಾಮಿಯವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ನಮ್ಮ ನಾಟಕವನ್ನು ನೋಡಿದ ಅವರು ಕೆಲವು ಪ್ರೋತ್ಸಾಹಕ ಮಾತುಗಳನ್ನು ಆಡಿದರು. ಆ ಮೊದಲ ಭೇಟಿಯಲ್ಲಿಯೇ ನಮ್ಮೆಲ್ಲರಿಗೆ ಅವರ ಬಗ್ಗೆ ಮತ್ತು ಅವರ ಸರಳತೆಯ ಬಗ್ಗೆ ಗೌರವ ಭಾವ ಮೂಡಿತು.

1990ರ ದಶಕದ ಪ್ರಾರಂಭದಿಂದ ದೇಶದಲ್ಲಿ ಜಾಗತೀಕರಣ, ಉದಾರೀಕರಣಗಳ ಗಾಳಿ ಬೀಸತೊಡಗಿತ್ತು. ಅಂದಿನ ಕಾಂಗ್ರೆಸ್ ಸರ್ಕಾರ ತನ್ನದೇ ಆದ ಕಾರಣಗಳಿಗಾಗಿ ದೇಶವನ್ನು ಮುಕ್ತಮಾರುಕಟ್ಟೆಯ ಆರ್ಥಿಕತೆಯ ತೆಕ್ಕೆಗೆ ದೂಡಿತು. ಇದರ ವಿರುದ್ಧ ದೇಶದಾದ್ಯಂತ ಎಡಪಂಥೀಯರು, ಗಾಂಧಿವಾದಿಗಳು, ರೈತಸಂಘಟನೆಗಳು ಹೋರಾಟದಲ್ಲಿ ನಿರತರಾದರು. ಬೆಂಗಳೂರಿನಲ್ಲಿ ನಡೆದ ಇಂಥ ಹಲವು ಪ್ರತಿಭಟನೆಗಳ ಮುಂಚೂಣಿಯಲ್ಲಿದ್ದವರು ದೊರೆಸ್ವಾಮಿಯವರು. 1997ರ ನಂತರ ಗೌರಿಬಿದನೂರಿನಿಂದ ಬೆಂಗಳೂರಿಗೆ
ವರ್ಗವಾಗಿ ಬಂದ ನಾನೂ ಸಹ ಅವರ ನೇತೃತ್ವದ ಸಾಮ್ರಾಜ್ಯಶಾಹಿ ವಿರೋಧಿ ಒಕ್ಕೂಟದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದೆ. ಸಾಮ್ರಾಜ್ಯಶಾಹಿಗಳ ನೇರ ಆಳ್ವಿಕೆಯ ವಿರುದ್ಧ ಹೋರಾಡಿ ಜೈಲು ವಾಸವನ್ನೂ ಅನುಭವಿಸಿದ್ದ ದೊರೆಸ್ವಾಮಿಗಳಿಗೆ ಸಾಮ್ರಾಜ್ಯಶಾಹಿಗಳ, ಬಂಡವಾಳಶಾಹಿಗಳ ಕೈಮೇಲಾಗುವ ಪರಿಣಾಮಗಳ ಸ್ಪಷ್ಟ ತಿಳುವಳಿಕೆ ಇತ್ತು. ಆ ಸ್ಪಷ್ಟ ಅರಿವಿನ ಆಧಾರದಲ್ಲಿಯೇ, ಅವರು ಹಿಂದೆ ಯಾವ ಪಕ್ಷದ ಸದಸ್ಯರಾಗಿದ್ದರೋ, ಅದೇ ಪಕ್ಷದ ಸರ್ಕಾರವನ್ನು ಎದುರಿಸಿ ನಿಂತರು.

1947ರಲ್ಲಿ ಅಧಿಕಾರ ಹಸ್ತಾಂತರವಾದರೂ ಇಲ್ಲಿನ ಬಹುಸಂಖ್ಯಾಂತರಿಗೆ ನಿಜವಾದ ಸ್ವಾತಂತ್ರ್ಯ ದೊರೆಯದಿರುವ ಬಗ್ಗೆ ದೊರೆಸ್ವಾಮಿಯವರಿಗೆ ಖೇದವಿತ್ತು. ಹಾಗಾಗಿ ಅವರು ಯಾವುದೇ ಲಾಭವಿರುವ ಹುದ್ದೆಗಳಿಗೆ ಆಸೆ ಪಡದೆ ತಮ್ಮಲ್ಲಿನ ಹೋರಾಟದ ಕಿಚ್ಚನ್ನು ಕಾಪಾಡಿಕೊಂಡು ಬಂದರು. ತಮ್ಮ ಸುತ್ತಲಿನ ಯಾವುದೇ ಜನ ವರ್ಗಕ್ಕೆ ಅನ್ಯಾಯವಾಗಿದ್ದು ಕಂಡರೂ, ಸರ್ಕಾರದಲ್ಲಿರುವವರು ಯಾರೇ ಆಗಿರಲಿ, ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಲು ಇತರರ ಜತೆ ಸೇರಿ, ಅದು ತಮ್ಮ ಪಾಲಿನ ಕರ್ತವ್ಯವೆಂದು, ಹೊಣೆಯೆಂದು ಎಂದು ಭಾವಿಸಿ ನಿಭಾಯಿಸುತ್ತಿದ್ದರು.

ಮುಂದಿನ ದಿನಗಳಲ್ಲಿ, ಅಜ್ಞಾತವಾಸದಲ್ಲಿದ್ದ ನಕ್ಸಲೀಯ ನಾಯಕರನ್ನು ಹೊರಬರುವಂತೆ ಮಾಡುವುದರಲ್ಲಿ ಅವರ ದೂರದೃಷ್ಟಿ ಸ್ಪಷ್ಟವಾಗುತ್ತದೆ. ಅವರು ಹೊರಬಂದು ತಮ್ಮ ಪಾಡಿಗೆ ತಾವು ಜೀವನ ನಡೆಸುವರೆಂದು ಅನ್ನಿಸಿರದಿದ್ದರೆ, ದೊರೆಸ್ವಾಮಿಗಳು ಆ ಕೆಲಸಕ್ಕೆ ಕೈ ಹಾಕುತ್ತಿರಲಿಲ್ಲ ಅನಿಸುತ್ತದೆ. ಮುಖ್ಯವಾಗಿ ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್ ’ಮುಖ್ಯವಾಹಿನಿ’ಯ ಭಾಗವಾಗಿ ಜನಪರ ಚಳುವಳಿಗಳನ್ನು ನಡೆಸಿಕೊಂಡು ಹೋಗುವವರೆಂಬ ವಿಶ್ವಾಸವಿದ್ದಿದ್ದರಿಂದಲೇ, ಗೌರಿ ಲಂಕೇಶ್ ಮತ್ತು ಎ.ಕೆ ಸುಬ್ಬಯ್ಯನವರೊಂದಿಗೆ ಸೇರಿ ಆ ದಿಕ್ಕಿನಲ್ಲಿ ತಮ್ಮೆಲ್ಲಾ ಶ್ರಮವನ್ನೂ ಧಾರೆ ಎರೆದರು. ಅವರ ಆ ನಿರೀಕ್ಷೆ ಹುಸಿಯಾಗಲಿಲ್ಲ. ಆ ಇಬ್ಬರೂ ಇಂದು ಹಲವಾರು ಜನಪರ ಹೋರಾಟಗಳ ಭಾಗವಾಗಿದ್ದಾರೆ.

ಅಂಥ ಹೋರಾಟಗಳಲ್ಲಿ ಅತಿ ಮುಖ್ಯವಾದದ್ದು ಭೂಮಿ ಮತ್ತು ವಸತಿ ವಂಚಿತರ ಚಳುವಳಿ. ಈ ಚಳುವಳಿಯ ಕೇಂದ್ರಬಿಂದು ದೊರೆಸ್ವಾಮಿಯವರು. ಇಂದಿಗೂ ಈ ಚಳುವಳಿ ತಾರ್ಕಿಕ ಅಂತ್ಯವನ್ನು ಕಾಣದಿದ್ದರೂ, ಅದಕ್ಕೊಂದು ಭದ್ರ ಬುನಾದಿಯನ್ನು ಹಾಕಿಕೊಟ್ಟವರು ದೊರೆಸ್ವಾಮಿಗಳು.

ಗೌರಿ ಲಂಕೇಶ್ ಹತ್ಯೆಯ ನಂತರ ಗೌರಿ ಮೆಮೋರಿಯಲ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ನಾನೂ ಭಾಗಿಯಾಗಿರುವ ಗೌರಿ ಮೀಡಿಯಾ ಟ್ರಸ್ಟ್‌ಗೂ ಅವರ ಕೊಡುಗೆ ಅಪಾರ. ಈ ಟ್ರಸ್ಟ್‌ಗಳ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ನನಗೆ ಅವರನ್ನು ಅಂತ್ಯಂತ ಹತ್ತಿರದಿಂದ ನೋಡುವ ಸದವಕಾಶ ಒದಗಿ ಬಂತು. ಜಯನಗರದಲ್ಲಿನ ಅವರ (ಬಾಡಿಗೆ) ಮನೆಗೆ ಹೋದಾಗಲೆಲ್ಲ ಆತ್ಮೀಯವಾಗಿ ’ಏನ್ ಮೇಷ್ಟ್ರೇ ಹೇಗಿದ್ದೀರಿ’ ಎಂದು ಅತ್ಯಂತ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಅವರಿಗಿಂತಲೂ ಮುವತ್ತು ವರ್ಷ ಚಿಕ್ಕವನಾದ ನನ್ನ ಜೊತೆ ದೇಶದ ರಾಜಕೀಯ, ಸಾಮಾಜಿಕ ಸಮಸ್ಯೆಗಳು ಮುಂತಾದ ಗಂಭೀರ ವಿಷಯಗಳನ್ನು ಚರ್ಚಿಸುತ್ತಿದ್ದರು. ಈ ವಿಷಯಗಳ ಬಗೆಗಿನ ಅವರ ಚಿಕಿತ್ಸಕ ದೃಷ್ಟಿ ನಮಗೆ ಅರಿವಾಗುತ್ತಿತ್ತು.

ಅವರ ಜೀವನದ ಕೊನೆಯ ದಿನಗಳಲ್ಲಿಯೂ, ಆಸ್ಪತ್ರೆಯ ಹಾಸಿಗೆಯ ಮೇಲಿದ್ದಾಗಲೂ ಅವರಿಗೆ ಜನರದ್ದೇ ಚಿಂತೆ. ದೇಶದ ರಾಜಕೀಯ ಭವಿಷ್ಯ ಏನಾಗಬಹುದು ಅನ್ನುವುದೇ ಅವರನ್ನು ಕಾಡುತ್ತಿದ್ದ ಪ್ರಶ್ನೆಯಾಗಿತ್ತು. ಅವರ ಅಂತಿಮ ದಿನಗಳಲ್ಲಿ ಕೊರೊನಾ ಕಾರಣದಿಂದಾಗಿ ಅವರನ್ನು ಭೇಟಿ ಮಾಡಲಾಗದ ಸ್ಥಿತಿ ಮತ್ತು ಮುಖ್ಯವಾಗಿ ಅವರ ನಿಧನದ ನಂತರ ಅವರ ಪಾರ್ಥಿವ ಶರೀರವನ್ನೂ ನೋಡಲಾಗಲಿಲ್ಲ ಅನ್ನುವ ಕೊರಗು ನನ್ನನ್ನು ಹಾಗೂ ನಮ್ಮ ಬಳಗದ ಹಲವರನ್ನು ಬಹುಕಾಲ ಕಾಡುತ್ತಲೇ ಇರುತ್ತದೆ. ಆದರೆ ಅತಿ ಸಾಮಾನ್ಯವಾಗಿದ್ದ ಆ ಮಹಾನ್ ವ್ಯಕ್ತಿಯ ನೆನಪು ಮಾತ್ರ ನಮ್ಮ ಜೀವನದುದ್ದಕ್ಕೂ ನಮ್ಮ ನೆನಪುಗಳ ಭಾಗವಾಗಿದ್ದು ಅವರ ಆದರ್ಶಗಳು ನಮ್ಮನ್ನು ಮುನ್ನಡೆಸುತ್ತವೆ ಅನ್ನುವ ಖಾತ್ರಿಯಂತೂ ಇದೆ. ದೊರೆಸ್ವಾಮಿಯವರಿಗೆ ಅತ್ಯಂತ ಗೌರವ ಪೂರ್ವಕ ನಮನಗಳು.

ಪ್ರೊ. ನಗರಗೆರೆ ರಮೇಶ್

ಪ್ರೊ. ನಗರಗೆರೆ ರಮೇಶ್

ಪ್ರೊ. ನಗರಗೆರೆ ರಮೇಶ್ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ನಗರಗೆರೆಯವರು. ನ್ಯಾಶನಲ್ ಕಾಲೇಜಿನಲ್ಲಿ ಇಂಗ್ಲೀಶ್ ಪ್ರಾಧ್ಯಾಪಕರಾಗಿದ್ದು ನಂತರ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಮಾನವ ಹಕ್ಕು ಸಂಘಟನೆಯಾದ ಪ್ರಜಾತಾಂತ್ರಿಕ ಜನರ ವೇದಿಕೆ ಮೊದಲಾದವುಗಳ ಭಾಗವಾಗಿದ್ದಾರೆ. ಎಲ್ಲ ಜನಪರ ಚಳುವಳಿಗಳ ದೀರ್ಘಕಾಲದ ಒಡನಾಡಿ.


ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...