Homeಮುಖಪುಟಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

- Advertisement -
- Advertisement -

ಗುಜರಾತ್‌ನ ಸೂರತ್‌ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದ್ದು, ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ.

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ಸಹಿಯಲ್ಲಿನ ವ್ಯತ್ಯಾಸದ ಕಾರಣ ನೀಡಿ ಭಾನುವಾರ ತಿರಸ್ಕರಿಸಲಾಗಿದೆ. ಸೂರತ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಮತ್ತು ಜಿಲ್ಲಾಧಿಕಾರಿ ಸೌರಭ್ ಪರ್ಘಿ ಅವರು ಭಾನುವಾರ  ನಾಮಪತ್ರದಲ್ಲಿ ಮೂವರು ಅನುಮೋದಕರ ಸಹಿಗಳಲ್ಲಿ ವ್ಯತ್ಯಾಸದ ಕಾರಣವನ್ನು ನೀಡಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಸೂರತ್‌ನ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನು ಕೂಡ ಇದೇ ಕಾರಣ ನೀಡಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಕ್ಷದ ಅಭ್ಯರ್ಥಿಯ ನಾಮಪತ್ರ ತಿರಸ್ಕಾರಗೊಂಡ ಬಗ್ಗೆ ಆಕ್ರೋಶಗೊಂಡ ಕಾಂಗ್ರೆಸ್‌,  ಇದರಲ್ಲಿ ಆಡಳಿತಾರೂಢ ಬಿಜೆಪಿಯ ಕೈವಾಡ ಎಂದು ಆರೋಪಿಸಿದೆ  ಮತ್ತು ಕ್ಷೇತ್ರದ ಚುನಾವಣೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಚುನಾವಣೆಗಳಲ್ಲಿ ಸೋಲನ್ನು ಗ್ರಹಿಸಿ ಆತಂಕಗೊಂಡಿರುವ ಬಿಜೆಪಿಯ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿಂಹ ಗೋಹಿಲ್ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ. ಈ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಮತ್ತು ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನ ಬಾಗಿಲು ತಟ್ಟುತ್ತೇವೆ ಎಂದು ಗೋಹಿಲ್ ಹೇಳಿದ್ದು, ಚುನಾವಣಾಧಿಕಾರಿಯು ಫೋರೆನ್ಸಿಕ್ ತಜ್ಞರ ಸಹಾಯವನ್ನು ಪಡೆಯಬೇಕು ಎಂದು ಹೇಳಿದ್ದಾರೆ.

ನೀಲೇಶ್ ಕುಂಭಾಣಿ ಅವರ ನಾಮಪತ್ರಕ್ಕೆ ಸಹಿ ಮಾಡಿಲ್ಲ ಎಂದು ಮೂವರು ಅನುಮೋದಕರು ಜಿಲ್ಲಾ ಚುನಾವಣಾಧಿಕಾರಿಗೆ ಅಫಿಡವಿಟ್‌ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಇದೇರೀತಿ ಸೂರತ್‌ನ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ಅನುಮೋದಕರು ಕೂಡ ನಾಮಪತ್ರದಲ್ಲಿ ಸಹಿ ಮಾಡಿರುವುದನ್ನು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಗುಜರಾತ್‌ನ ಎಲ್ಲಾ 26 ಲೋಕಸಭಾ ಸ್ಥಾನಗಳಿಗೆ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 19 ಆಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಸೌರಭ್, ಕುಂಭಣಿ ಮತ್ತು ಪಡಸಾಲ ಅವರು ಸಲ್ಲಿಸಿದ್ದ  ನಾಮಪತ್ರದಲ್ಲಿ ಅನುಮೋದಕರ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಅವು ಅಸಲಿ ಎಂದು ತೋರದ ಹಿನ್ನೆಲೆಯಲ್ಲಿ ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...