Homeಮುಖಪುಟಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

- Advertisement -
- Advertisement -

ಗುಜರಾತ್‌ನ ಸೂರತ್‌ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದ್ದು, ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ.

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ಸಹಿಯಲ್ಲಿನ ವ್ಯತ್ಯಾಸದ ಕಾರಣ ನೀಡಿ ಭಾನುವಾರ ತಿರಸ್ಕರಿಸಲಾಗಿದೆ. ಸೂರತ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಮತ್ತು ಜಿಲ್ಲಾಧಿಕಾರಿ ಸೌರಭ್ ಪರ್ಘಿ ಅವರು ಭಾನುವಾರ  ನಾಮಪತ್ರದಲ್ಲಿ ಮೂವರು ಅನುಮೋದಕರ ಸಹಿಗಳಲ್ಲಿ ವ್ಯತ್ಯಾಸದ ಕಾರಣವನ್ನು ನೀಡಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಸೂರತ್‌ನ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನು ಕೂಡ ಇದೇ ಕಾರಣ ನೀಡಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಕ್ಷದ ಅಭ್ಯರ್ಥಿಯ ನಾಮಪತ್ರ ತಿರಸ್ಕಾರಗೊಂಡ ಬಗ್ಗೆ ಆಕ್ರೋಶಗೊಂಡ ಕಾಂಗ್ರೆಸ್‌,  ಇದರಲ್ಲಿ ಆಡಳಿತಾರೂಢ ಬಿಜೆಪಿಯ ಕೈವಾಡ ಎಂದು ಆರೋಪಿಸಿದೆ  ಮತ್ತು ಕ್ಷೇತ್ರದ ಚುನಾವಣೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಚುನಾವಣೆಗಳಲ್ಲಿ ಸೋಲನ್ನು ಗ್ರಹಿಸಿ ಆತಂಕಗೊಂಡಿರುವ ಬಿಜೆಪಿಯ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿಂಹ ಗೋಹಿಲ್ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ. ಈ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಮತ್ತು ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನ ಬಾಗಿಲು ತಟ್ಟುತ್ತೇವೆ ಎಂದು ಗೋಹಿಲ್ ಹೇಳಿದ್ದು, ಚುನಾವಣಾಧಿಕಾರಿಯು ಫೋರೆನ್ಸಿಕ್ ತಜ್ಞರ ಸಹಾಯವನ್ನು ಪಡೆಯಬೇಕು ಎಂದು ಹೇಳಿದ್ದಾರೆ.

ನೀಲೇಶ್ ಕುಂಭಾಣಿ ಅವರ ನಾಮಪತ್ರಕ್ಕೆ ಸಹಿ ಮಾಡಿಲ್ಲ ಎಂದು ಮೂವರು ಅನುಮೋದಕರು ಜಿಲ್ಲಾ ಚುನಾವಣಾಧಿಕಾರಿಗೆ ಅಫಿಡವಿಟ್‌ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಇದೇರೀತಿ ಸೂರತ್‌ನ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ಅನುಮೋದಕರು ಕೂಡ ನಾಮಪತ್ರದಲ್ಲಿ ಸಹಿ ಮಾಡಿರುವುದನ್ನು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಗುಜರಾತ್‌ನ ಎಲ್ಲಾ 26 ಲೋಕಸಭಾ ಸ್ಥಾನಗಳಿಗೆ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 19 ಆಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಸೌರಭ್, ಕುಂಭಣಿ ಮತ್ತು ಪಡಸಾಲ ಅವರು ಸಲ್ಲಿಸಿದ್ದ  ನಾಮಪತ್ರದಲ್ಲಿ ಅನುಮೋದಕರ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಅವು ಅಸಲಿ ಎಂದು ತೋರದ ಹಿನ್ನೆಲೆಯಲ್ಲಿ ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...