Homeಮುಖಪುಟಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

- Advertisement -
- Advertisement -

ಗುಜರಾತ್‌ನ ಸೂರತ್‌ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದ್ದು, ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ.

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ಸಹಿಯಲ್ಲಿನ ವ್ಯತ್ಯಾಸದ ಕಾರಣ ನೀಡಿ ಭಾನುವಾರ ತಿರಸ್ಕರಿಸಲಾಗಿದೆ. ಸೂರತ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಮತ್ತು ಜಿಲ್ಲಾಧಿಕಾರಿ ಸೌರಭ್ ಪರ್ಘಿ ಅವರು ಭಾನುವಾರ  ನಾಮಪತ್ರದಲ್ಲಿ ಮೂವರು ಅನುಮೋದಕರ ಸಹಿಗಳಲ್ಲಿ ವ್ಯತ್ಯಾಸದ ಕಾರಣವನ್ನು ನೀಡಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಸೂರತ್‌ನ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನು ಕೂಡ ಇದೇ ಕಾರಣ ನೀಡಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಕ್ಷದ ಅಭ್ಯರ್ಥಿಯ ನಾಮಪತ್ರ ತಿರಸ್ಕಾರಗೊಂಡ ಬಗ್ಗೆ ಆಕ್ರೋಶಗೊಂಡ ಕಾಂಗ್ರೆಸ್‌,  ಇದರಲ್ಲಿ ಆಡಳಿತಾರೂಢ ಬಿಜೆಪಿಯ ಕೈವಾಡ ಎಂದು ಆರೋಪಿಸಿದೆ  ಮತ್ತು ಕ್ಷೇತ್ರದ ಚುನಾವಣೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಚುನಾವಣೆಗಳಲ್ಲಿ ಸೋಲನ್ನು ಗ್ರಹಿಸಿ ಆತಂಕಗೊಂಡಿರುವ ಬಿಜೆಪಿಯ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿಂಹ ಗೋಹಿಲ್ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ. ಈ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಮತ್ತು ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನ ಬಾಗಿಲು ತಟ್ಟುತ್ತೇವೆ ಎಂದು ಗೋಹಿಲ್ ಹೇಳಿದ್ದು, ಚುನಾವಣಾಧಿಕಾರಿಯು ಫೋರೆನ್ಸಿಕ್ ತಜ್ಞರ ಸಹಾಯವನ್ನು ಪಡೆಯಬೇಕು ಎಂದು ಹೇಳಿದ್ದಾರೆ.

ನೀಲೇಶ್ ಕುಂಭಾಣಿ ಅವರ ನಾಮಪತ್ರಕ್ಕೆ ಸಹಿ ಮಾಡಿಲ್ಲ ಎಂದು ಮೂವರು ಅನುಮೋದಕರು ಜಿಲ್ಲಾ ಚುನಾವಣಾಧಿಕಾರಿಗೆ ಅಫಿಡವಿಟ್‌ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಇದೇರೀತಿ ಸೂರತ್‌ನ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ಅನುಮೋದಕರು ಕೂಡ ನಾಮಪತ್ರದಲ್ಲಿ ಸಹಿ ಮಾಡಿರುವುದನ್ನು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಗುಜರಾತ್‌ನ ಎಲ್ಲಾ 26 ಲೋಕಸಭಾ ಸ್ಥಾನಗಳಿಗೆ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 19 ಆಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಸೌರಭ್, ಕುಂಭಣಿ ಮತ್ತು ಪಡಸಾಲ ಅವರು ಸಲ್ಲಿಸಿದ್ದ  ನಾಮಪತ್ರದಲ್ಲಿ ಅನುಮೋದಕರ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಅವು ಅಸಲಿ ಎಂದು ತೋರದ ಹಿನ್ನೆಲೆಯಲ್ಲಿ ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...