Homeಮುಖಪುಟಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

ಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ ಅವರು ಸ್ವಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಬಿಜೆಪಿ-ಶಿವಸೇನಾ ಸರ್ಕಾರದ ಜೊತೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೈ ಜೋಡಿಸಿದ್ದಾರೆ. ಈ ಮೂಲಕ ಮಹಾ ಮೈತ್ರಿ ಸರ್ಕಾರಕ್ಕೆ ಎನ್‌ಸಿಪಿ ಪಡೆ ಬೆಂಬಲ ನೀಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಜುಲೈ 2ರಂದು ರಾಜಭವನದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬೆನ್ನಲ್ಲೆ ಅಜಿತ್ ಪವಾರ್ ಅವರು ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದಾರೆ.

ಈ ಮಧ್ಯೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ನಿವಾಸದಲ್ಲಿ ಎನ್‌ಸಿಪಿ ನಾಯಕರ ಸಭೆಯನ್ನು ಏಕೆ ಕರೆಯಲಾಗಿದೆ ಎಂಬ ವಿವರಗಳನ್ನು ಕೇಳಿದಾಗ, ಶರದ್ ಪವಾರ್ ಅವರು ಪ್ರತಿಕ್ರಿಯಿಸಿ, ”ಈ ಸಭೆಯನ್ನು ಏಕೆ ಕರೆಯಲಾಗಿದೆ ಎಂದು ನನಗೆ ನಿಖರವಾಗಿ ತಿಳಿದಿಲ್ಲ ಆದರೆ ವಿರೋಧ ಪಕ್ಷದ ನಾಯಕನಾಗಿರುತ್ತೇನೆ. ಅವರು (ಅಜಿತ್ ಪವಾರ್) ಶಾಸಕರ ಸಭೆಯನ್ನು ಕರೆಯುವ ಹಕ್ಕನ್ನು ಹೊಂದಿದ್ದಾರೆ. ಅವರು ಅದನ್ನು ನಿಯಮಿತವಾಗಿ ಮಾಡುತ್ತಾರೆ. ಈ ಸಭೆಯ ಬಗ್ಗೆ ನನಗೆ ಹೆಚ್ಚಿನ ವಿವರಗಳಿಲ್ಲ” ಎಂದು ಹೇಳಿದ್ದಾರೆ.

ಸಭೆಯಲ್ಲಿ ಹಲವು ನಾಯಕರ ಜೊತೆ ಚರ್ಚಿಸಿರುವ ಅಜಿತ್ ಪವಾರ್ ಅವರು ಆಡಳಿತ ಪಕ್ಷ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಭೆ ಬಳಿಕ ನಾಯಕರ ಜೊತೆಗೆ ಅವರು ರಾಜಭವನಕ್ಕೆ ತಲುಪಿದ್ದಾರೆ. ರಾಜ್ಯಪಾಲರಿಗೆ ಶರದ್ ಪವಾರ್ ಅವರು ತಮ್ಮೊಂದಿಗೆ 29 ಶಾಸಕರ ಬೆಂಬಲ ಇರುವ ಬಗ್ಗೆ ಖಚಿತತೆಯ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶರದ್ ಪವಾರ್ ವಿರುದ್ಧ ಸಿಡಿದೆದ್ಧಿರುವ ಅಜಿತ್ ಪವಾರ್, ಇದೀಗ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬೆಂಬಲದ ಬೆನ್ನಲ್ಲೇ ಸಿಎಂ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾ‌ರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ಅಜಿತ್ ಪವಾರ್ ತಮ್ಮ ಬೆಂಬಲಿತ ಶಾಸಕರೊಂದಿಗೆ ರಾಜಭವನ ತೆರಳಿದ್ದರು. ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರಕ್ಕೆ ಸೇರ್ಪಡೆಯಾದರು. ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರವನ್ನು ಸೇರಿಕೊಂಡು ಮೂರನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಮೂಲಗಳ ಪ್ರಕಾರ, ಅವರು 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಹೊಂದಿದ್ದಾರೆ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಇತರ ಎನ್‌ಸಿಪಿ ನಾಯಕರಲ್ಲಿ ಪ್ರಫುಲ್ ಪಟೇಲ್, ಧನಂಜಯ್ ಮುಂಡೆ, ಅನಿಲ್ ಪಾಟೀಲ್ ಮತ್ತು ಅದಿತಿ ತತ್ಕರೆ ಸೇರಿದ್ದಾರೆ.

ಎನ್‌ಡಿಎ ಸರ್ಕಾರಕ್ಕೆ ಪವಾರ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಚಿವ ಸುಧೀರ್ ಮುಂಗಂತಿವಾರ್, ”40ಕ್ಕೂ ಹೆಚ್ಚು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ಬಹುತೇಕ ಸಂಪೂರ್ಣ ಎನ್‌ಸಿಪಿ ಸೇರಲಿದೆ” ಎಂದು ಹಯೇಳಿದ್ದಾರೆ.

”ಏಕತಾ ಸಭೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮತ್ತು ಮೈತ್ರಿ ಮಾಡಿಕೊಳ್ಳುವ ಶರದ್ ಪವಾರ್ ಅವರ ಏಕಪಕ್ಷೀಯ ನಿರ್ಧಾರದಿಂದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರೊಂದಿಗೆ ರಾಜಭವನಕ್ಕೆ ತೆರಳಿದ್ದ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ” ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...