Homeಮುಖಪುಟಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

ಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ ಅವರು ಸ್ವಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಬಿಜೆಪಿ-ಶಿವಸೇನಾ ಸರ್ಕಾರದ ಜೊತೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೈ ಜೋಡಿಸಿದ್ದಾರೆ. ಈ ಮೂಲಕ ಮಹಾ ಮೈತ್ರಿ ಸರ್ಕಾರಕ್ಕೆ ಎನ್‌ಸಿಪಿ ಪಡೆ ಬೆಂಬಲ ನೀಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಜುಲೈ 2ರಂದು ರಾಜಭವನದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬೆನ್ನಲ್ಲೆ ಅಜಿತ್ ಪವಾರ್ ಅವರು ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದಾರೆ.

ಈ ಮಧ್ಯೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ನಿವಾಸದಲ್ಲಿ ಎನ್‌ಸಿಪಿ ನಾಯಕರ ಸಭೆಯನ್ನು ಏಕೆ ಕರೆಯಲಾಗಿದೆ ಎಂಬ ವಿವರಗಳನ್ನು ಕೇಳಿದಾಗ, ಶರದ್ ಪವಾರ್ ಅವರು ಪ್ರತಿಕ್ರಿಯಿಸಿ, ”ಈ ಸಭೆಯನ್ನು ಏಕೆ ಕರೆಯಲಾಗಿದೆ ಎಂದು ನನಗೆ ನಿಖರವಾಗಿ ತಿಳಿದಿಲ್ಲ ಆದರೆ ವಿರೋಧ ಪಕ್ಷದ ನಾಯಕನಾಗಿರುತ್ತೇನೆ. ಅವರು (ಅಜಿತ್ ಪವಾರ್) ಶಾಸಕರ ಸಭೆಯನ್ನು ಕರೆಯುವ ಹಕ್ಕನ್ನು ಹೊಂದಿದ್ದಾರೆ. ಅವರು ಅದನ್ನು ನಿಯಮಿತವಾಗಿ ಮಾಡುತ್ತಾರೆ. ಈ ಸಭೆಯ ಬಗ್ಗೆ ನನಗೆ ಹೆಚ್ಚಿನ ವಿವರಗಳಿಲ್ಲ” ಎಂದು ಹೇಳಿದ್ದಾರೆ.

ಸಭೆಯಲ್ಲಿ ಹಲವು ನಾಯಕರ ಜೊತೆ ಚರ್ಚಿಸಿರುವ ಅಜಿತ್ ಪವಾರ್ ಅವರು ಆಡಳಿತ ಪಕ್ಷ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಭೆ ಬಳಿಕ ನಾಯಕರ ಜೊತೆಗೆ ಅವರು ರಾಜಭವನಕ್ಕೆ ತಲುಪಿದ್ದಾರೆ. ರಾಜ್ಯಪಾಲರಿಗೆ ಶರದ್ ಪವಾರ್ ಅವರು ತಮ್ಮೊಂದಿಗೆ 29 ಶಾಸಕರ ಬೆಂಬಲ ಇರುವ ಬಗ್ಗೆ ಖಚಿತತೆಯ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶರದ್ ಪವಾರ್ ವಿರುದ್ಧ ಸಿಡಿದೆದ್ಧಿರುವ ಅಜಿತ್ ಪವಾರ್, ಇದೀಗ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬೆಂಬಲದ ಬೆನ್ನಲ್ಲೇ ಸಿಎಂ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾ‌ರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ಅಜಿತ್ ಪವಾರ್ ತಮ್ಮ ಬೆಂಬಲಿತ ಶಾಸಕರೊಂದಿಗೆ ರಾಜಭವನ ತೆರಳಿದ್ದರು. ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರಕ್ಕೆ ಸೇರ್ಪಡೆಯಾದರು. ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರವನ್ನು ಸೇರಿಕೊಂಡು ಮೂರನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಮೂಲಗಳ ಪ್ರಕಾರ, ಅವರು 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಹೊಂದಿದ್ದಾರೆ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಇತರ ಎನ್‌ಸಿಪಿ ನಾಯಕರಲ್ಲಿ ಪ್ರಫುಲ್ ಪಟೇಲ್, ಧನಂಜಯ್ ಮುಂಡೆ, ಅನಿಲ್ ಪಾಟೀಲ್ ಮತ್ತು ಅದಿತಿ ತತ್ಕರೆ ಸೇರಿದ್ದಾರೆ.

ಎನ್‌ಡಿಎ ಸರ್ಕಾರಕ್ಕೆ ಪವಾರ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಚಿವ ಸುಧೀರ್ ಮುಂಗಂತಿವಾರ್, ”40ಕ್ಕೂ ಹೆಚ್ಚು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ಬಹುತೇಕ ಸಂಪೂರ್ಣ ಎನ್‌ಸಿಪಿ ಸೇರಲಿದೆ” ಎಂದು ಹಯೇಳಿದ್ದಾರೆ.

”ಏಕತಾ ಸಭೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮತ್ತು ಮೈತ್ರಿ ಮಾಡಿಕೊಳ್ಳುವ ಶರದ್ ಪವಾರ್ ಅವರ ಏಕಪಕ್ಷೀಯ ನಿರ್ಧಾರದಿಂದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರೊಂದಿಗೆ ರಾಜಭವನಕ್ಕೆ ತೆರಳಿದ್ದ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ” ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...