Homeಮುಖಪುಟಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

ಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ ಅವರು ಸ್ವಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಬಿಜೆಪಿ-ಶಿವಸೇನಾ ಸರ್ಕಾರದ ಜೊತೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೈ ಜೋಡಿಸಿದ್ದಾರೆ. ಈ ಮೂಲಕ ಮಹಾ ಮೈತ್ರಿ ಸರ್ಕಾರಕ್ಕೆ ಎನ್‌ಸಿಪಿ ಪಡೆ ಬೆಂಬಲ ನೀಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಜುಲೈ 2ರಂದು ರಾಜಭವನದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬೆನ್ನಲ್ಲೆ ಅಜಿತ್ ಪವಾರ್ ಅವರು ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದಾರೆ.

ಈ ಮಧ್ಯೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ನಿವಾಸದಲ್ಲಿ ಎನ್‌ಸಿಪಿ ನಾಯಕರ ಸಭೆಯನ್ನು ಏಕೆ ಕರೆಯಲಾಗಿದೆ ಎಂಬ ವಿವರಗಳನ್ನು ಕೇಳಿದಾಗ, ಶರದ್ ಪವಾರ್ ಅವರು ಪ್ರತಿಕ್ರಿಯಿಸಿ, ”ಈ ಸಭೆಯನ್ನು ಏಕೆ ಕರೆಯಲಾಗಿದೆ ಎಂದು ನನಗೆ ನಿಖರವಾಗಿ ತಿಳಿದಿಲ್ಲ ಆದರೆ ವಿರೋಧ ಪಕ್ಷದ ನಾಯಕನಾಗಿರುತ್ತೇನೆ. ಅವರು (ಅಜಿತ್ ಪವಾರ್) ಶಾಸಕರ ಸಭೆಯನ್ನು ಕರೆಯುವ ಹಕ್ಕನ್ನು ಹೊಂದಿದ್ದಾರೆ. ಅವರು ಅದನ್ನು ನಿಯಮಿತವಾಗಿ ಮಾಡುತ್ತಾರೆ. ಈ ಸಭೆಯ ಬಗ್ಗೆ ನನಗೆ ಹೆಚ್ಚಿನ ವಿವರಗಳಿಲ್ಲ” ಎಂದು ಹೇಳಿದ್ದಾರೆ.

ಸಭೆಯಲ್ಲಿ ಹಲವು ನಾಯಕರ ಜೊತೆ ಚರ್ಚಿಸಿರುವ ಅಜಿತ್ ಪವಾರ್ ಅವರು ಆಡಳಿತ ಪಕ್ಷ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಭೆ ಬಳಿಕ ನಾಯಕರ ಜೊತೆಗೆ ಅವರು ರಾಜಭವನಕ್ಕೆ ತಲುಪಿದ್ದಾರೆ. ರಾಜ್ಯಪಾಲರಿಗೆ ಶರದ್ ಪವಾರ್ ಅವರು ತಮ್ಮೊಂದಿಗೆ 29 ಶಾಸಕರ ಬೆಂಬಲ ಇರುವ ಬಗ್ಗೆ ಖಚಿತತೆಯ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶರದ್ ಪವಾರ್ ವಿರುದ್ಧ ಸಿಡಿದೆದ್ಧಿರುವ ಅಜಿತ್ ಪವಾರ್, ಇದೀಗ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬೆಂಬಲದ ಬೆನ್ನಲ್ಲೇ ಸಿಎಂ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾ‌ರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ಅಜಿತ್ ಪವಾರ್ ತಮ್ಮ ಬೆಂಬಲಿತ ಶಾಸಕರೊಂದಿಗೆ ರಾಜಭವನ ತೆರಳಿದ್ದರು. ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರಕ್ಕೆ ಸೇರ್ಪಡೆಯಾದರು. ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರವನ್ನು ಸೇರಿಕೊಂಡು ಮೂರನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಮೂಲಗಳ ಪ್ರಕಾರ, ಅವರು 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಹೊಂದಿದ್ದಾರೆ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಇತರ ಎನ್‌ಸಿಪಿ ನಾಯಕರಲ್ಲಿ ಪ್ರಫುಲ್ ಪಟೇಲ್, ಧನಂಜಯ್ ಮುಂಡೆ, ಅನಿಲ್ ಪಾಟೀಲ್ ಮತ್ತು ಅದಿತಿ ತತ್ಕರೆ ಸೇರಿದ್ದಾರೆ.

ಎನ್‌ಡಿಎ ಸರ್ಕಾರಕ್ಕೆ ಪವಾರ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಚಿವ ಸುಧೀರ್ ಮುಂಗಂತಿವಾರ್, ”40ಕ್ಕೂ ಹೆಚ್ಚು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ಬಹುತೇಕ ಸಂಪೂರ್ಣ ಎನ್‌ಸಿಪಿ ಸೇರಲಿದೆ” ಎಂದು ಹಯೇಳಿದ್ದಾರೆ.

”ಏಕತಾ ಸಭೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮತ್ತು ಮೈತ್ರಿ ಮಾಡಿಕೊಳ್ಳುವ ಶರದ್ ಪವಾರ್ ಅವರ ಏಕಪಕ್ಷೀಯ ನಿರ್ಧಾರದಿಂದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರೊಂದಿಗೆ ರಾಜಭವನಕ್ಕೆ ತೆರಳಿದ್ದ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ” ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...