Homeಮುಖಪುಟಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

ಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ ಅವರು ಸ್ವಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಬಿಜೆಪಿ-ಶಿವಸೇನಾ ಸರ್ಕಾರದ ಜೊತೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೈ ಜೋಡಿಸಿದ್ದಾರೆ. ಈ ಮೂಲಕ ಮಹಾ ಮೈತ್ರಿ ಸರ್ಕಾರಕ್ಕೆ ಎನ್‌ಸಿಪಿ ಪಡೆ ಬೆಂಬಲ ನೀಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಜುಲೈ 2ರಂದು ರಾಜಭವನದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬೆನ್ನಲ್ಲೆ ಅಜಿತ್ ಪವಾರ್ ಅವರು ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದಾರೆ.

ಈ ಮಧ್ಯೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ನಿವಾಸದಲ್ಲಿ ಎನ್‌ಸಿಪಿ ನಾಯಕರ ಸಭೆಯನ್ನು ಏಕೆ ಕರೆಯಲಾಗಿದೆ ಎಂಬ ವಿವರಗಳನ್ನು ಕೇಳಿದಾಗ, ಶರದ್ ಪವಾರ್ ಅವರು ಪ್ರತಿಕ್ರಿಯಿಸಿ, ”ಈ ಸಭೆಯನ್ನು ಏಕೆ ಕರೆಯಲಾಗಿದೆ ಎಂದು ನನಗೆ ನಿಖರವಾಗಿ ತಿಳಿದಿಲ್ಲ ಆದರೆ ವಿರೋಧ ಪಕ್ಷದ ನಾಯಕನಾಗಿರುತ್ತೇನೆ. ಅವರು (ಅಜಿತ್ ಪವಾರ್) ಶಾಸಕರ ಸಭೆಯನ್ನು ಕರೆಯುವ ಹಕ್ಕನ್ನು ಹೊಂದಿದ್ದಾರೆ. ಅವರು ಅದನ್ನು ನಿಯಮಿತವಾಗಿ ಮಾಡುತ್ತಾರೆ. ಈ ಸಭೆಯ ಬಗ್ಗೆ ನನಗೆ ಹೆಚ್ಚಿನ ವಿವರಗಳಿಲ್ಲ” ಎಂದು ಹೇಳಿದ್ದಾರೆ.

ಸಭೆಯಲ್ಲಿ ಹಲವು ನಾಯಕರ ಜೊತೆ ಚರ್ಚಿಸಿರುವ ಅಜಿತ್ ಪವಾರ್ ಅವರು ಆಡಳಿತ ಪಕ್ಷ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಭೆ ಬಳಿಕ ನಾಯಕರ ಜೊತೆಗೆ ಅವರು ರಾಜಭವನಕ್ಕೆ ತಲುಪಿದ್ದಾರೆ. ರಾಜ್ಯಪಾಲರಿಗೆ ಶರದ್ ಪವಾರ್ ಅವರು ತಮ್ಮೊಂದಿಗೆ 29 ಶಾಸಕರ ಬೆಂಬಲ ಇರುವ ಬಗ್ಗೆ ಖಚಿತತೆಯ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶರದ್ ಪವಾರ್ ವಿರುದ್ಧ ಸಿಡಿದೆದ್ಧಿರುವ ಅಜಿತ್ ಪವಾರ್, ಇದೀಗ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬೆಂಬಲದ ಬೆನ್ನಲ್ಲೇ ಸಿಎಂ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾ‌ರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ಅಜಿತ್ ಪವಾರ್ ತಮ್ಮ ಬೆಂಬಲಿತ ಶಾಸಕರೊಂದಿಗೆ ರಾಜಭವನ ತೆರಳಿದ್ದರು. ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರಕ್ಕೆ ಸೇರ್ಪಡೆಯಾದರು. ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರವನ್ನು ಸೇರಿಕೊಂಡು ಮೂರನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಮೂಲಗಳ ಪ್ರಕಾರ, ಅವರು 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಹೊಂದಿದ್ದಾರೆ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಇತರ ಎನ್‌ಸಿಪಿ ನಾಯಕರಲ್ಲಿ ಪ್ರಫುಲ್ ಪಟೇಲ್, ಧನಂಜಯ್ ಮುಂಡೆ, ಅನಿಲ್ ಪಾಟೀಲ್ ಮತ್ತು ಅದಿತಿ ತತ್ಕರೆ ಸೇರಿದ್ದಾರೆ.

ಎನ್‌ಡಿಎ ಸರ್ಕಾರಕ್ಕೆ ಪವಾರ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಚಿವ ಸುಧೀರ್ ಮುಂಗಂತಿವಾರ್, ”40ಕ್ಕೂ ಹೆಚ್ಚು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ಬಹುತೇಕ ಸಂಪೂರ್ಣ ಎನ್‌ಸಿಪಿ ಸೇರಲಿದೆ” ಎಂದು ಹಯೇಳಿದ್ದಾರೆ.

”ಏಕತಾ ಸಭೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮತ್ತು ಮೈತ್ರಿ ಮಾಡಿಕೊಳ್ಳುವ ಶರದ್ ಪವಾರ್ ಅವರ ಏಕಪಕ್ಷೀಯ ನಿರ್ಧಾರದಿಂದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರೊಂದಿಗೆ ರಾಜಭವನಕ್ಕೆ ತೆರಳಿದ್ದ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ” ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...