Homeಕರ್ನಾಟಕನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ದಶಕಗಳ ಅಯೋಧ್ಯೆ ವಿವಾದ ಬಗೆಹರಿದ ನಂತರ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಕೆಲಸ ಬಿರುಸಾಗಿ ನಡೆಯುತ್ತಿದ್ದು, ಇದಕ್ಕೆ ದೇಶದಾದ್ಯಂತ ದೇಣಿಗೆ ಸಂಗ್ರಹಿಸುವ ಕೆಲಸವೂ ನಡೆಯುತ್ತಿದೆ. ಆದರೆ ಈ ದೇಣಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಹಲವರು ಪ್ರಶ್ನೆಗಳನ್ನು ಕೇಳುತ್ತಿದ್ದು, ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹಿಸಿದ ಹಣ ಮತ್ತು ಇಟ್ಟಿಗೆಯ ಲೆಕ್ಕ ಏನಾಯ್ತು? ಎಂದು ಹಿಂದೂ ಸಂಘಟನೆಗಳು ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದು, “ರಾಮಮಂದಿರಕ್ಕೆ ದೇಣಿಗೆ ಕೊಡದವರ ಮನೆ ಗುರುತು ಹಾಕಿಕೊಳ್ಳಲಾಗುತ್ತಿದೆಯಂತೆ” ಎಂದು ಕಳವಳ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅಯೋಧ್ಯೆಯಲ್ಲಿ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ, ನಮ್ಮೂರಿನಲ್ಲಿ ಅಥವಾ ಬೇರೆ ಎಲ್ಲಾದರೂ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುತ್ತೇನೆ. ಇವರು ಸಂಗ್ರಹಿಸುವ ಹಣಕ್ಕೆ ರಸೀದಿ ಕೊಡುತ್ತಾರೆಯೇ? ಲೆಕ್ಕ ಕೊಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಒಳಗಾಗಿತ್ತು.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಸಿದ್ದರಾಮಯ್ಯನವರ ದೇಶನಿಷ್ಠೆಯ ಬಗ್ಗೆ ಸಂದೇಹವಾಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

ಚಿಂತಕರಾದ ನಾ ದಿವಾಕರ್ ತಮ್ಮ ಫೇಸ್‌ಬುಕ್‌ನಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, “ಸ್ವಾಮೀಜಿಯವರ ಮನುಜ ನಿಷ್ಠೆಯ ಬಗ್ಗೆ ಸಂದೇಹ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

ವಿನೋದ್ ಎಂಬುವವರು, “ದೇಶನಿಷ್ಠೆಯ ಮಾನದಂಡವೇನು? ಸಿದ್ಧರಾಮಯ್ಯ ದೇಶನಿಷ್ಠೆಯ ಬಗ್ಗೆ ನಮಗೆ ಸಂದೇಹವಿದೆ ಎಂದಿದ್ದಾರೆ ಪೇಜಾವರ ಶ್ರೀ! ಹಾಗೆಂದರೇನು? ದೇಶನಿಷ್ಠೆಗೆ ಇರುವ ಮಾನದಂಡವೇನು? ನಮಗೆ ಶಾಲೆ-ಕಾಲೇಜು ಎಲ್ಲಿಯೂ ದೇಶನಿಷ್ಠೆ ಬಗ್ಗೆ ಕಲಿಸಲಿಲ್ಲ. ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದನ್ನು ಕಲಿಸಿದರಷ್ಟೇ. ಈ ಮೂರರಲ್ಲಿ ಯಾವುದಾದರೂ ಒಂದಕ್ಕೆ ಮಾಜಿ ಸಿಎಂ ಅವರು ಅಗೌರವ ತೋರಿರುವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

ಉಡುಪಿಯ ಪೇಜಾವರ ಸ್ವಾಮಿಗೆ ಮನುವಾದದ ಪಿತ್ತ ನೆತ್ತಿಗೇರಿದೆ… ಶೂದ್ರಶಕ್ತಿಯಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ ಮನುವಾದಿಗಳಿಗೆ ದೇಶದ್ರೋಹಿಯಂತೆ ಕಾಣದೆ ಮತ್ತೆ ಹೇಗೆ ಕಂಡಾರು? ಮನುವಿನ ಸಂವಿಧಾನ ಈಗ ದೇಶಭಕ್ತಿಯ ಕವಚ ತೊಟ್ಟು ಜಾರಿಯಾಗುತ್ತಿದೆ.. ಎಂದು ಯತಿರಾಜ್ ಬ್ಯಾಲಹಳ್ಳಿ ಕಿಡಿಕಾರಿದ್ದಾರೆ.

ವಿಶ್ವ ಪೂಜಾರ ಎಂಬುವವರು ಸ್ವಾಮೀಜಿಯ ಹೇಳಿಕೆಯನ್ನು ಉಲ್ಲೇಖಿಸಿ, “ಹಿರಿಯ ಸ್ವಾಮಿಗಳ ( ದಿ. ವಿಶ್ವೇಶ್ವರ ತೀರ್ಥ ಸ್ವಾಮೀಜಿ) ಹಾದಿಯಲ್ಲಿಯೇ ಸಾಗುತ್ತಿರುವ ಕಿರಿಯ ಸ್ವಾಮಿಗಳು. ನಮ್ಮ ಹೆಮ್ಮೆ” ಎಂದು ಪೇಜಾವರ ಶ್ರೀಗಳ ಕಾಲೆಳೆದಿದ್ದಾರೆ.

ಎಂ ಆರ್ ಕೃಷ್ಣ ಎಂಬುವವರು ತಮ್ಮ ಪೋಸ್ಟ್‌ನಲ್ಲಿ, “ಇವರಿಗೆಲ್ಲಾ ಮಠಾಧಿಪತಿ ಅಂತ ಎಲ್ಲರೂ ಮರ್ಯಾದೆ ಕೊಡುತ್ತಾರೆ, ಆದರೆ ನಾಲಿಗೆ ಹರಿಬಿಡುವ ಇಂತಹವರು ಟೆಂಪಲ್ ಇಂಡಸ್ಟ್ರಿ ನಡೆಸುತ್ತಿದ್ದು ಟನ್‌ಗಟ್ಟಲೆ ಹಣ ಸಂಗ್ರಹಿಸುತ್ತಾರೆ, ಜನರಿಂದ, ರಾಜಕಾರಣಿಗಳಿಂದ, ಉದ್ಯಮಿಗಳಿಂದ ಮತ್ತು ಸರ್ಕಾರದಿಂದ ಕೂಡಾ. ಮಠಗಳು ರಾಜಕೀಯ ಮಾಡುವುದರಿಂದ ಈಗಾಗಲೆ ಸಮಾಜದ ವ್ಯವಸ್ಥೆ ಕೆಟ್ಟಿದೆ, ಇವರಿಗಿಲ್ಲದ ದೇಶಭಕ್ತಿ ಬಗ್ಗೆ ಹೇಳಿದರೆ ಇಲ್ಲಿ ಕೇಳುವರಾರು ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ರೇಣುಕಾರಾಧ್ಯ ಎಂಬುವವರು ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ಪುಸ್ತಕದಲ್ಲಿನ ವಿಷಯವನ್ನ ಉಲ್ಲೇಖಿಸಿ, “ಈ ವ್ಯಕ್ತಿ ಉತ್ತಾರಾಧಿಕಾರಿಯಾಗಿ ಆಯ್ಕೆಯಾದಾಗ ಹತ್ತು ಹನ್ನೆರಡು ವರ್ಷ ಇರಬೇಕೇನೋ ಆಗ ಮಠಕ್ಕೆ ಹೋಗಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಈತನನ್ನು ಕಂಡು “ಅಯ್ಯೋ ಪಾಪ ಹುಡುಗ” ಅಂದಿದ್ದರಂತೆ… ಮಾಸ್ತಿ ಅವತ್ತು ಅಯ್ಯೋ ಪಾಪ ಯಾಕಂದ್ರು ಅಂತ ಈ ಸ್ವಾಮಿಗೆ ಅವತ್ತು ಅರ್ಥ ಆಗಿದ್ರೆ ಚೆನ್ನಾಗಿರ್ತಿತ್ತು… ಸ್ವಾಮಿ ಆಗಿ ಮಠಕ್ಕೂ ದೇಶಕ್ಕೂ ವ್ಯತ್ಯಾಸ ಗೊತ್ತಿಲ್ಲ… ಅಯ್ಯೊ ಪಾಪ…. – ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ದಲ್ಲಿ ಈ ಬಗ್ಗೆ ವಿವರಗಳಿವೆ” ಎಂದು ವ್ಯಂಗ್ಯವಾಡಿದ್ದಾರೆ.

ನಿತಿನ್ ಎಂಬುವವರು, “ಇಂದಿಗೂ ಕೃಷ್ಣಮಠದಲ್ಲಿ ಪಂಕ್ತಿಭೇದದ ಮೂಲಕ ಹಿಂದೂ ಧರ್ಮದ ಕೆಳವರ್ಗದವರನ್ನು ಶೋಷಣೆ ಮಾಡುವ ನಿಮ್ಮ ಧರ್ಮನಿಷ್ಠೆಯ ಬಗ್ಗೆ ನನಗೆ ಸಂದೇಹವಿದೆ ಪೇಜಾವರ ಶ್ರೀಗಳೇ.. ಶ್ರೀಗಳು ತಮ್ಮ ಇತಿ-ಮಿತಿಗಳನ್ನು ಅರಿತು ಸಂನ್ಯಾಸ ಧರ್ಮ ಪಾಲನೆಯೊಂದಿಗೆ ಯಾವುದೇ ಪಕ್ಷದ ವಕ್ತಾರನಂತೆ ವರ್ತಿಸದಿದ್ದರೆ ಒಳ್ಳೆಯದು ಎಂಬುದು ನನ್ನ ಭಾವನೆ..” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ಭರತ್ ಹೆಬ್ಬಾಳ್ ತಮ್ಮ ಪೋಸ್ಟ್‌ನಲ್ಲಿ, ಈ ಹಿಂದೆ ಪೇಜಾವರ ಶ್ರೀ ರೈತರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದನ್ನು ಉಲ್ಲೇಖಿಸಿ “ರೈತರು ಹೊಲಗದ್ದೆಗಳಲ್ಲಿ ಕಷ್ಟಪಟ್ಟು ದುಡಿದು ತಂದು ಹಾಕಿದ ಬೆಳೆಗಳನ್ನು ಎಳ್ಳಷ್ಟೂ ಕೆಲಸ ಮಾಡದೆ ಜಾತಿವಾದಿ ಪಂಕ್ತಿ ಭೋಜನದಲ್ಲಿ ದನ ತಿನ್ನೊಂಗೆ ತಿಂದು, ಪ್ರತಿಭಟನೆ ಮಾಡುತ್ತಿರುವವರು ರೈತರೊ ಇಲ್ಲವೋ ಎಂಬ ಸಂಶಯ ವ್ಯಕ್ತಪಡಿಸುವುದು.. ತಿಂದ ಬಿಟ್ಟಿ ಊಟ ಜೀರ್ಣವಾಗದಿದ್ದಲ್ಲಿ ಇನ್ನೊಬ್ಬರ ದೇಶಭಕ್ತಿಯನ್ನು ಪ್ರಶ್ನಿಸುವುದು..” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಹೀಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೇಜಾವರ ಶ್ರೀಗಳ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ದೇಶ ಎಂದರೆ ಬ್ರಾಹ್ಮಣ್ಯ, ಭಾರತ ದೇಶ ಎಂದರೆ ಬಿಜೆಪಿ, ಭಾರತ ದೇಶ ಎಂದರೆ ‘ಇವರು ಮಾತ್ರ’ ಎನ್ನುವುದು ಕೆಲವು ಮೂಲಭೂತವಾದಿಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಭಾರತ ಎಂದರೆ ಬಹುತ್ವದ, ಬಹುಜನರ, ಸರ್ವ ಸಂಸ್ಕೃತಿಗಳ ದೇಶ ಎಂದು ಒಪ್ಪುವುದಕ್ಕೆ ಇವರು ತಯಾರಿಲ್ಲ.

ಈ ಮನಸ್ಥಿತಿಗಳೇ ಇಂದು, ರಾಮಮಂದಿರಕ್ಕೆ ದೇಣಿಗೆ ನೀಡದವರನ್ನು ದೇಶ ಭಕ್ತರಲ್ಲ ಎಂದು ಬಿಂಬಿಸುತ್ತದೆ. ಅವರ ಮನೆಯನ್ನು ಗುರುತು ಮಾಡಿಕೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರವನ್ನು ಟೀಕಿಸಿದರೆ, ಇದು ದೇಶದ್ರೋಹ ಎಂದು ಪ್ರಕರಣ ದಾಖಲಿಸಲಾಗುತ್ತದೆ. ಬಿಜೆಪಿಯ ವಿರುದ್ಧ ಪ್ರತಿಭಟನೆ ಮಾಡಿದರೆ, ಪ್ರಶ್ನಿಸಿದರೆ ಅವರೆಲ್ಲರೂ ದೇಶದ್ರೋಹಿಗಳಾಗುತ್ತಾರೆ. ಇದು ಈ ದೇಶದ ವಿಪರ್ಯಾಸವಲ್ಲದೆ ಮತ್ತೇನು?


ಇದನ್ನೂ ಓದಿ: ಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೆಲ್ಲಾ ಮನುವಾದವನ್ನು ವಿರೋಧಿಸುತ್ತಾರೋ, ಅವರೆಲ್ಲರೂ ಮನುವಾದಿಗಳ ಪ್ರಕಾರ “ದೇಶದ್ರೋಹಿಗಳು”. ಮಾನವತೆಯ ವಿರೋಧಿಗಳಾಗಿರುವ ಈ ಮನುವಾದಿಗಳು ದೇಶಪ್ರೇಮದ ಹೆಸರಿನಲ್ಲಿ ಮಾಡಬಾರದ್ದನ್ನೆಲ್ಲಾ ಮಾಡುತ್ತಿದ್ದಾರೆ. ದೇಶಪ್ರೇಮಕ್ಕಿಂತಲೂ ಮಿಗಿಲಾದುದು ಮಾನವತಾಪ್ರೇಮ ಎಂಬುದನ್ನು ಈ ಅವಿವೇಕಿಗಳು ಮೊದಲು ತಿಳಿದುಕೊಳ್ಳುವುದು ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...