Homeಕರ್ನಾಟಕನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ದಶಕಗಳ ಅಯೋಧ್ಯೆ ವಿವಾದ ಬಗೆಹರಿದ ನಂತರ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಕೆಲಸ ಬಿರುಸಾಗಿ ನಡೆಯುತ್ತಿದ್ದು, ಇದಕ್ಕೆ ದೇಶದಾದ್ಯಂತ ದೇಣಿಗೆ ಸಂಗ್ರಹಿಸುವ ಕೆಲಸವೂ ನಡೆಯುತ್ತಿದೆ. ಆದರೆ ಈ ದೇಣಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಹಲವರು ಪ್ರಶ್ನೆಗಳನ್ನು ಕೇಳುತ್ತಿದ್ದು, ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹಿಸಿದ ಹಣ ಮತ್ತು ಇಟ್ಟಿಗೆಯ ಲೆಕ್ಕ ಏನಾಯ್ತು? ಎಂದು ಹಿಂದೂ ಸಂಘಟನೆಗಳು ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದು, “ರಾಮಮಂದಿರಕ್ಕೆ ದೇಣಿಗೆ ಕೊಡದವರ ಮನೆ ಗುರುತು ಹಾಕಿಕೊಳ್ಳಲಾಗುತ್ತಿದೆಯಂತೆ” ಎಂದು ಕಳವಳ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅಯೋಧ್ಯೆಯಲ್ಲಿ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ, ನಮ್ಮೂರಿನಲ್ಲಿ ಅಥವಾ ಬೇರೆ ಎಲ್ಲಾದರೂ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುತ್ತೇನೆ. ಇವರು ಸಂಗ್ರಹಿಸುವ ಹಣಕ್ಕೆ ರಸೀದಿ ಕೊಡುತ್ತಾರೆಯೇ? ಲೆಕ್ಕ ಕೊಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಒಳಗಾಗಿತ್ತು.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಸಿದ್ದರಾಮಯ್ಯನವರ ದೇಶನಿಷ್ಠೆಯ ಬಗ್ಗೆ ಸಂದೇಹವಾಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

ಚಿಂತಕರಾದ ನಾ ದಿವಾಕರ್ ತಮ್ಮ ಫೇಸ್‌ಬುಕ್‌ನಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, “ಸ್ವಾಮೀಜಿಯವರ ಮನುಜ ನಿಷ್ಠೆಯ ಬಗ್ಗೆ ಸಂದೇಹ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

ವಿನೋದ್ ಎಂಬುವವರು, “ದೇಶನಿಷ್ಠೆಯ ಮಾನದಂಡವೇನು? ಸಿದ್ಧರಾಮಯ್ಯ ದೇಶನಿಷ್ಠೆಯ ಬಗ್ಗೆ ನಮಗೆ ಸಂದೇಹವಿದೆ ಎಂದಿದ್ದಾರೆ ಪೇಜಾವರ ಶ್ರೀ! ಹಾಗೆಂದರೇನು? ದೇಶನಿಷ್ಠೆಗೆ ಇರುವ ಮಾನದಂಡವೇನು? ನಮಗೆ ಶಾಲೆ-ಕಾಲೇಜು ಎಲ್ಲಿಯೂ ದೇಶನಿಷ್ಠೆ ಬಗ್ಗೆ ಕಲಿಸಲಿಲ್ಲ. ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದನ್ನು ಕಲಿಸಿದರಷ್ಟೇ. ಈ ಮೂರರಲ್ಲಿ ಯಾವುದಾದರೂ ಒಂದಕ್ಕೆ ಮಾಜಿ ಸಿಎಂ ಅವರು ಅಗೌರವ ತೋರಿರುವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

ಉಡುಪಿಯ ಪೇಜಾವರ ಸ್ವಾಮಿಗೆ ಮನುವಾದದ ಪಿತ್ತ ನೆತ್ತಿಗೇರಿದೆ… ಶೂದ್ರಶಕ್ತಿಯಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ ಮನುವಾದಿಗಳಿಗೆ ದೇಶದ್ರೋಹಿಯಂತೆ ಕಾಣದೆ ಮತ್ತೆ ಹೇಗೆ ಕಂಡಾರು? ಮನುವಿನ ಸಂವಿಧಾನ ಈಗ ದೇಶಭಕ್ತಿಯ ಕವಚ ತೊಟ್ಟು ಜಾರಿಯಾಗುತ್ತಿದೆ.. ಎಂದು ಯತಿರಾಜ್ ಬ್ಯಾಲಹಳ್ಳಿ ಕಿಡಿಕಾರಿದ್ದಾರೆ.

ವಿಶ್ವ ಪೂಜಾರ ಎಂಬುವವರು ಸ್ವಾಮೀಜಿಯ ಹೇಳಿಕೆಯನ್ನು ಉಲ್ಲೇಖಿಸಿ, “ಹಿರಿಯ ಸ್ವಾಮಿಗಳ ( ದಿ. ವಿಶ್ವೇಶ್ವರ ತೀರ್ಥ ಸ್ವಾಮೀಜಿ) ಹಾದಿಯಲ್ಲಿಯೇ ಸಾಗುತ್ತಿರುವ ಕಿರಿಯ ಸ್ವಾಮಿಗಳು. ನಮ್ಮ ಹೆಮ್ಮೆ” ಎಂದು ಪೇಜಾವರ ಶ್ರೀಗಳ ಕಾಲೆಳೆದಿದ್ದಾರೆ.

ಎಂ ಆರ್ ಕೃಷ್ಣ ಎಂಬುವವರು ತಮ್ಮ ಪೋಸ್ಟ್‌ನಲ್ಲಿ, “ಇವರಿಗೆಲ್ಲಾ ಮಠಾಧಿಪತಿ ಅಂತ ಎಲ್ಲರೂ ಮರ್ಯಾದೆ ಕೊಡುತ್ತಾರೆ, ಆದರೆ ನಾಲಿಗೆ ಹರಿಬಿಡುವ ಇಂತಹವರು ಟೆಂಪಲ್ ಇಂಡಸ್ಟ್ರಿ ನಡೆಸುತ್ತಿದ್ದು ಟನ್‌ಗಟ್ಟಲೆ ಹಣ ಸಂಗ್ರಹಿಸುತ್ತಾರೆ, ಜನರಿಂದ, ರಾಜಕಾರಣಿಗಳಿಂದ, ಉದ್ಯಮಿಗಳಿಂದ ಮತ್ತು ಸರ್ಕಾರದಿಂದ ಕೂಡಾ. ಮಠಗಳು ರಾಜಕೀಯ ಮಾಡುವುದರಿಂದ ಈಗಾಗಲೆ ಸಮಾಜದ ವ್ಯವಸ್ಥೆ ಕೆಟ್ಟಿದೆ, ಇವರಿಗಿಲ್ಲದ ದೇಶಭಕ್ತಿ ಬಗ್ಗೆ ಹೇಳಿದರೆ ಇಲ್ಲಿ ಕೇಳುವರಾರು ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ರೇಣುಕಾರಾಧ್ಯ ಎಂಬುವವರು ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ಪುಸ್ತಕದಲ್ಲಿನ ವಿಷಯವನ್ನ ಉಲ್ಲೇಖಿಸಿ, “ಈ ವ್ಯಕ್ತಿ ಉತ್ತಾರಾಧಿಕಾರಿಯಾಗಿ ಆಯ್ಕೆಯಾದಾಗ ಹತ್ತು ಹನ್ನೆರಡು ವರ್ಷ ಇರಬೇಕೇನೋ ಆಗ ಮಠಕ್ಕೆ ಹೋಗಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಈತನನ್ನು ಕಂಡು “ಅಯ್ಯೋ ಪಾಪ ಹುಡುಗ” ಅಂದಿದ್ದರಂತೆ… ಮಾಸ್ತಿ ಅವತ್ತು ಅಯ್ಯೋ ಪಾಪ ಯಾಕಂದ್ರು ಅಂತ ಈ ಸ್ವಾಮಿಗೆ ಅವತ್ತು ಅರ್ಥ ಆಗಿದ್ರೆ ಚೆನ್ನಾಗಿರ್ತಿತ್ತು… ಸ್ವಾಮಿ ಆಗಿ ಮಠಕ್ಕೂ ದೇಶಕ್ಕೂ ವ್ಯತ್ಯಾಸ ಗೊತ್ತಿಲ್ಲ… ಅಯ್ಯೊ ಪಾಪ…. – ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ದಲ್ಲಿ ಈ ಬಗ್ಗೆ ವಿವರಗಳಿವೆ” ಎಂದು ವ್ಯಂಗ್ಯವಾಡಿದ್ದಾರೆ.

ನಿತಿನ್ ಎಂಬುವವರು, “ಇಂದಿಗೂ ಕೃಷ್ಣಮಠದಲ್ಲಿ ಪಂಕ್ತಿಭೇದದ ಮೂಲಕ ಹಿಂದೂ ಧರ್ಮದ ಕೆಳವರ್ಗದವರನ್ನು ಶೋಷಣೆ ಮಾಡುವ ನಿಮ್ಮ ಧರ್ಮನಿಷ್ಠೆಯ ಬಗ್ಗೆ ನನಗೆ ಸಂದೇಹವಿದೆ ಪೇಜಾವರ ಶ್ರೀಗಳೇ.. ಶ್ರೀಗಳು ತಮ್ಮ ಇತಿ-ಮಿತಿಗಳನ್ನು ಅರಿತು ಸಂನ್ಯಾಸ ಧರ್ಮ ಪಾಲನೆಯೊಂದಿಗೆ ಯಾವುದೇ ಪಕ್ಷದ ವಕ್ತಾರನಂತೆ ವರ್ತಿಸದಿದ್ದರೆ ಒಳ್ಳೆಯದು ಎಂಬುದು ನನ್ನ ಭಾವನೆ..” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ಭರತ್ ಹೆಬ್ಬಾಳ್ ತಮ್ಮ ಪೋಸ್ಟ್‌ನಲ್ಲಿ, ಈ ಹಿಂದೆ ಪೇಜಾವರ ಶ್ರೀ ರೈತರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದನ್ನು ಉಲ್ಲೇಖಿಸಿ “ರೈತರು ಹೊಲಗದ್ದೆಗಳಲ್ಲಿ ಕಷ್ಟಪಟ್ಟು ದುಡಿದು ತಂದು ಹಾಕಿದ ಬೆಳೆಗಳನ್ನು ಎಳ್ಳಷ್ಟೂ ಕೆಲಸ ಮಾಡದೆ ಜಾತಿವಾದಿ ಪಂಕ್ತಿ ಭೋಜನದಲ್ಲಿ ದನ ತಿನ್ನೊಂಗೆ ತಿಂದು, ಪ್ರತಿಭಟನೆ ಮಾಡುತ್ತಿರುವವರು ರೈತರೊ ಇಲ್ಲವೋ ಎಂಬ ಸಂಶಯ ವ್ಯಕ್ತಪಡಿಸುವುದು.. ತಿಂದ ಬಿಟ್ಟಿ ಊಟ ಜೀರ್ಣವಾಗದಿದ್ದಲ್ಲಿ ಇನ್ನೊಬ್ಬರ ದೇಶಭಕ್ತಿಯನ್ನು ಪ್ರಶ್ನಿಸುವುದು..” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಹೀಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೇಜಾವರ ಶ್ರೀಗಳ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ದೇಶ ಎಂದರೆ ಬ್ರಾಹ್ಮಣ್ಯ, ಭಾರತ ದೇಶ ಎಂದರೆ ಬಿಜೆಪಿ, ಭಾರತ ದೇಶ ಎಂದರೆ ‘ಇವರು ಮಾತ್ರ’ ಎನ್ನುವುದು ಕೆಲವು ಮೂಲಭೂತವಾದಿಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಭಾರತ ಎಂದರೆ ಬಹುತ್ವದ, ಬಹುಜನರ, ಸರ್ವ ಸಂಸ್ಕೃತಿಗಳ ದೇಶ ಎಂದು ಒಪ್ಪುವುದಕ್ಕೆ ಇವರು ತಯಾರಿಲ್ಲ.

ಈ ಮನಸ್ಥಿತಿಗಳೇ ಇಂದು, ರಾಮಮಂದಿರಕ್ಕೆ ದೇಣಿಗೆ ನೀಡದವರನ್ನು ದೇಶ ಭಕ್ತರಲ್ಲ ಎಂದು ಬಿಂಬಿಸುತ್ತದೆ. ಅವರ ಮನೆಯನ್ನು ಗುರುತು ಮಾಡಿಕೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರವನ್ನು ಟೀಕಿಸಿದರೆ, ಇದು ದೇಶದ್ರೋಹ ಎಂದು ಪ್ರಕರಣ ದಾಖಲಿಸಲಾಗುತ್ತದೆ. ಬಿಜೆಪಿಯ ವಿರುದ್ಧ ಪ್ರತಿಭಟನೆ ಮಾಡಿದರೆ, ಪ್ರಶ್ನಿಸಿದರೆ ಅವರೆಲ್ಲರೂ ದೇಶದ್ರೋಹಿಗಳಾಗುತ್ತಾರೆ. ಇದು ಈ ದೇಶದ ವಿಪರ್ಯಾಸವಲ್ಲದೆ ಮತ್ತೇನು?


ಇದನ್ನೂ ಓದಿ: ಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೆಲ್ಲಾ ಮನುವಾದವನ್ನು ವಿರೋಧಿಸುತ್ತಾರೋ, ಅವರೆಲ್ಲರೂ ಮನುವಾದಿಗಳ ಪ್ರಕಾರ “ದೇಶದ್ರೋಹಿಗಳು”. ಮಾನವತೆಯ ವಿರೋಧಿಗಳಾಗಿರುವ ಈ ಮನುವಾದಿಗಳು ದೇಶಪ್ರೇಮದ ಹೆಸರಿನಲ್ಲಿ ಮಾಡಬಾರದ್ದನ್ನೆಲ್ಲಾ ಮಾಡುತ್ತಿದ್ದಾರೆ. ದೇಶಪ್ರೇಮಕ್ಕಿಂತಲೂ ಮಿಗಿಲಾದುದು ಮಾನವತಾಪ್ರೇಮ ಎಂಬುದನ್ನು ಈ ಅವಿವೇಕಿಗಳು ಮೊದಲು ತಿಳಿದುಕೊಳ್ಳುವುದು ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...