Homeಕರ್ನಾಟಕನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ದಶಕಗಳ ಅಯೋಧ್ಯೆ ವಿವಾದ ಬಗೆಹರಿದ ನಂತರ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಕೆಲಸ ಬಿರುಸಾಗಿ ನಡೆಯುತ್ತಿದ್ದು, ಇದಕ್ಕೆ ದೇಶದಾದ್ಯಂತ ದೇಣಿಗೆ ಸಂಗ್ರಹಿಸುವ ಕೆಲಸವೂ ನಡೆಯುತ್ತಿದೆ. ಆದರೆ ಈ ದೇಣಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಹಲವರು ಪ್ರಶ್ನೆಗಳನ್ನು ಕೇಳುತ್ತಿದ್ದು, ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹಿಸಿದ ಹಣ ಮತ್ತು ಇಟ್ಟಿಗೆಯ ಲೆಕ್ಕ ಏನಾಯ್ತು? ಎಂದು ಹಿಂದೂ ಸಂಘಟನೆಗಳು ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದು, “ರಾಮಮಂದಿರಕ್ಕೆ ದೇಣಿಗೆ ಕೊಡದವರ ಮನೆ ಗುರುತು ಹಾಕಿಕೊಳ್ಳಲಾಗುತ್ತಿದೆಯಂತೆ” ಎಂದು ಕಳವಳ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅಯೋಧ್ಯೆಯಲ್ಲಿ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ, ನಮ್ಮೂರಿನಲ್ಲಿ ಅಥವಾ ಬೇರೆ ಎಲ್ಲಾದರೂ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುತ್ತೇನೆ. ಇವರು ಸಂಗ್ರಹಿಸುವ ಹಣಕ್ಕೆ ರಸೀದಿ ಕೊಡುತ್ತಾರೆಯೇ? ಲೆಕ್ಕ ಕೊಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಒಳಗಾಗಿತ್ತು.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಸಿದ್ದರಾಮಯ್ಯನವರ ದೇಶನಿಷ್ಠೆಯ ಬಗ್ಗೆ ಸಂದೇಹವಾಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

ಚಿಂತಕರಾದ ನಾ ದಿವಾಕರ್ ತಮ್ಮ ಫೇಸ್‌ಬುಕ್‌ನಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, “ಸ್ವಾಮೀಜಿಯವರ ಮನುಜ ನಿಷ್ಠೆಯ ಬಗ್ಗೆ ಸಂದೇಹ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

ವಿನೋದ್ ಎಂಬುವವರು, “ದೇಶನಿಷ್ಠೆಯ ಮಾನದಂಡವೇನು? ಸಿದ್ಧರಾಮಯ್ಯ ದೇಶನಿಷ್ಠೆಯ ಬಗ್ಗೆ ನಮಗೆ ಸಂದೇಹವಿದೆ ಎಂದಿದ್ದಾರೆ ಪೇಜಾವರ ಶ್ರೀ! ಹಾಗೆಂದರೇನು? ದೇಶನಿಷ್ಠೆಗೆ ಇರುವ ಮಾನದಂಡವೇನು? ನಮಗೆ ಶಾಲೆ-ಕಾಲೇಜು ಎಲ್ಲಿಯೂ ದೇಶನಿಷ್ಠೆ ಬಗ್ಗೆ ಕಲಿಸಲಿಲ್ಲ. ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದನ್ನು ಕಲಿಸಿದರಷ್ಟೇ. ಈ ಮೂರರಲ್ಲಿ ಯಾವುದಾದರೂ ಒಂದಕ್ಕೆ ಮಾಜಿ ಸಿಎಂ ಅವರು ಅಗೌರವ ತೋರಿರುವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

ಉಡುಪಿಯ ಪೇಜಾವರ ಸ್ವಾಮಿಗೆ ಮನುವಾದದ ಪಿತ್ತ ನೆತ್ತಿಗೇರಿದೆ… ಶೂದ್ರಶಕ್ತಿಯಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ ಮನುವಾದಿಗಳಿಗೆ ದೇಶದ್ರೋಹಿಯಂತೆ ಕಾಣದೆ ಮತ್ತೆ ಹೇಗೆ ಕಂಡಾರು? ಮನುವಿನ ಸಂವಿಧಾನ ಈಗ ದೇಶಭಕ್ತಿಯ ಕವಚ ತೊಟ್ಟು ಜಾರಿಯಾಗುತ್ತಿದೆ.. ಎಂದು ಯತಿರಾಜ್ ಬ್ಯಾಲಹಳ್ಳಿ ಕಿಡಿಕಾರಿದ್ದಾರೆ.

ವಿಶ್ವ ಪೂಜಾರ ಎಂಬುವವರು ಸ್ವಾಮೀಜಿಯ ಹೇಳಿಕೆಯನ್ನು ಉಲ್ಲೇಖಿಸಿ, “ಹಿರಿಯ ಸ್ವಾಮಿಗಳ ( ದಿ. ವಿಶ್ವೇಶ್ವರ ತೀರ್ಥ ಸ್ವಾಮೀಜಿ) ಹಾದಿಯಲ್ಲಿಯೇ ಸಾಗುತ್ತಿರುವ ಕಿರಿಯ ಸ್ವಾಮಿಗಳು. ನಮ್ಮ ಹೆಮ್ಮೆ” ಎಂದು ಪೇಜಾವರ ಶ್ರೀಗಳ ಕಾಲೆಳೆದಿದ್ದಾರೆ.

ಎಂ ಆರ್ ಕೃಷ್ಣ ಎಂಬುವವರು ತಮ್ಮ ಪೋಸ್ಟ್‌ನಲ್ಲಿ, “ಇವರಿಗೆಲ್ಲಾ ಮಠಾಧಿಪತಿ ಅಂತ ಎಲ್ಲರೂ ಮರ್ಯಾದೆ ಕೊಡುತ್ತಾರೆ, ಆದರೆ ನಾಲಿಗೆ ಹರಿಬಿಡುವ ಇಂತಹವರು ಟೆಂಪಲ್ ಇಂಡಸ್ಟ್ರಿ ನಡೆಸುತ್ತಿದ್ದು ಟನ್‌ಗಟ್ಟಲೆ ಹಣ ಸಂಗ್ರಹಿಸುತ್ತಾರೆ, ಜನರಿಂದ, ರಾಜಕಾರಣಿಗಳಿಂದ, ಉದ್ಯಮಿಗಳಿಂದ ಮತ್ತು ಸರ್ಕಾರದಿಂದ ಕೂಡಾ. ಮಠಗಳು ರಾಜಕೀಯ ಮಾಡುವುದರಿಂದ ಈಗಾಗಲೆ ಸಮಾಜದ ವ್ಯವಸ್ಥೆ ಕೆಟ್ಟಿದೆ, ಇವರಿಗಿಲ್ಲದ ದೇಶಭಕ್ತಿ ಬಗ್ಗೆ ಹೇಳಿದರೆ ಇಲ್ಲಿ ಕೇಳುವರಾರು ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ರೇಣುಕಾರಾಧ್ಯ ಎಂಬುವವರು ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ಪುಸ್ತಕದಲ್ಲಿನ ವಿಷಯವನ್ನ ಉಲ್ಲೇಖಿಸಿ, “ಈ ವ್ಯಕ್ತಿ ಉತ್ತಾರಾಧಿಕಾರಿಯಾಗಿ ಆಯ್ಕೆಯಾದಾಗ ಹತ್ತು ಹನ್ನೆರಡು ವರ್ಷ ಇರಬೇಕೇನೋ ಆಗ ಮಠಕ್ಕೆ ಹೋಗಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಈತನನ್ನು ಕಂಡು “ಅಯ್ಯೋ ಪಾಪ ಹುಡುಗ” ಅಂದಿದ್ದರಂತೆ… ಮಾಸ್ತಿ ಅವತ್ತು ಅಯ್ಯೋ ಪಾಪ ಯಾಕಂದ್ರು ಅಂತ ಈ ಸ್ವಾಮಿಗೆ ಅವತ್ತು ಅರ್ಥ ಆಗಿದ್ರೆ ಚೆನ್ನಾಗಿರ್ತಿತ್ತು… ಸ್ವಾಮಿ ಆಗಿ ಮಠಕ್ಕೂ ದೇಶಕ್ಕೂ ವ್ಯತ್ಯಾಸ ಗೊತ್ತಿಲ್ಲ… ಅಯ್ಯೊ ಪಾಪ…. – ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ದಲ್ಲಿ ಈ ಬಗ್ಗೆ ವಿವರಗಳಿವೆ” ಎಂದು ವ್ಯಂಗ್ಯವಾಡಿದ್ದಾರೆ.

ನಿತಿನ್ ಎಂಬುವವರು, “ಇಂದಿಗೂ ಕೃಷ್ಣಮಠದಲ್ಲಿ ಪಂಕ್ತಿಭೇದದ ಮೂಲಕ ಹಿಂದೂ ಧರ್ಮದ ಕೆಳವರ್ಗದವರನ್ನು ಶೋಷಣೆ ಮಾಡುವ ನಿಮ್ಮ ಧರ್ಮನಿಷ್ಠೆಯ ಬಗ್ಗೆ ನನಗೆ ಸಂದೇಹವಿದೆ ಪೇಜಾವರ ಶ್ರೀಗಳೇ.. ಶ್ರೀಗಳು ತಮ್ಮ ಇತಿ-ಮಿತಿಗಳನ್ನು ಅರಿತು ಸಂನ್ಯಾಸ ಧರ್ಮ ಪಾಲನೆಯೊಂದಿಗೆ ಯಾವುದೇ ಪಕ್ಷದ ವಕ್ತಾರನಂತೆ ವರ್ತಿಸದಿದ್ದರೆ ಒಳ್ಳೆಯದು ಎಂಬುದು ನನ್ನ ಭಾವನೆ..” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ಭರತ್ ಹೆಬ್ಬಾಳ್ ತಮ್ಮ ಪೋಸ್ಟ್‌ನಲ್ಲಿ, ಈ ಹಿಂದೆ ಪೇಜಾವರ ಶ್ರೀ ರೈತರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದನ್ನು ಉಲ್ಲೇಖಿಸಿ “ರೈತರು ಹೊಲಗದ್ದೆಗಳಲ್ಲಿ ಕಷ್ಟಪಟ್ಟು ದುಡಿದು ತಂದು ಹಾಕಿದ ಬೆಳೆಗಳನ್ನು ಎಳ್ಳಷ್ಟೂ ಕೆಲಸ ಮಾಡದೆ ಜಾತಿವಾದಿ ಪಂಕ್ತಿ ಭೋಜನದಲ್ಲಿ ದನ ತಿನ್ನೊಂಗೆ ತಿಂದು, ಪ್ರತಿಭಟನೆ ಮಾಡುತ್ತಿರುವವರು ರೈತರೊ ಇಲ್ಲವೋ ಎಂಬ ಸಂಶಯ ವ್ಯಕ್ತಪಡಿಸುವುದು.. ತಿಂದ ಬಿಟ್ಟಿ ಊಟ ಜೀರ್ಣವಾಗದಿದ್ದಲ್ಲಿ ಇನ್ನೊಬ್ಬರ ದೇಶಭಕ್ತಿಯನ್ನು ಪ್ರಶ್ನಿಸುವುದು..” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಹೀಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೇಜಾವರ ಶ್ರೀಗಳ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ದೇಶ ಎಂದರೆ ಬ್ರಾಹ್ಮಣ್ಯ, ಭಾರತ ದೇಶ ಎಂದರೆ ಬಿಜೆಪಿ, ಭಾರತ ದೇಶ ಎಂದರೆ ‘ಇವರು ಮಾತ್ರ’ ಎನ್ನುವುದು ಕೆಲವು ಮೂಲಭೂತವಾದಿಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಭಾರತ ಎಂದರೆ ಬಹುತ್ವದ, ಬಹುಜನರ, ಸರ್ವ ಸಂಸ್ಕೃತಿಗಳ ದೇಶ ಎಂದು ಒಪ್ಪುವುದಕ್ಕೆ ಇವರು ತಯಾರಿಲ್ಲ.

ಈ ಮನಸ್ಥಿತಿಗಳೇ ಇಂದು, ರಾಮಮಂದಿರಕ್ಕೆ ದೇಣಿಗೆ ನೀಡದವರನ್ನು ದೇಶ ಭಕ್ತರಲ್ಲ ಎಂದು ಬಿಂಬಿಸುತ್ತದೆ. ಅವರ ಮನೆಯನ್ನು ಗುರುತು ಮಾಡಿಕೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರವನ್ನು ಟೀಕಿಸಿದರೆ, ಇದು ದೇಶದ್ರೋಹ ಎಂದು ಪ್ರಕರಣ ದಾಖಲಿಸಲಾಗುತ್ತದೆ. ಬಿಜೆಪಿಯ ವಿರುದ್ಧ ಪ್ರತಿಭಟನೆ ಮಾಡಿದರೆ, ಪ್ರಶ್ನಿಸಿದರೆ ಅವರೆಲ್ಲರೂ ದೇಶದ್ರೋಹಿಗಳಾಗುತ್ತಾರೆ. ಇದು ಈ ದೇಶದ ವಿಪರ್ಯಾಸವಲ್ಲದೆ ಮತ್ತೇನು?


ಇದನ್ನೂ ಓದಿ: ಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೆಲ್ಲಾ ಮನುವಾದವನ್ನು ವಿರೋಧಿಸುತ್ತಾರೋ, ಅವರೆಲ್ಲರೂ ಮನುವಾದಿಗಳ ಪ್ರಕಾರ “ದೇಶದ್ರೋಹಿಗಳು”. ಮಾನವತೆಯ ವಿರೋಧಿಗಳಾಗಿರುವ ಈ ಮನುವಾದಿಗಳು ದೇಶಪ್ರೇಮದ ಹೆಸರಿನಲ್ಲಿ ಮಾಡಬಾರದ್ದನ್ನೆಲ್ಲಾ ಮಾಡುತ್ತಿದ್ದಾರೆ. ದೇಶಪ್ರೇಮಕ್ಕಿಂತಲೂ ಮಿಗಿಲಾದುದು ಮಾನವತಾಪ್ರೇಮ ಎಂಬುದನ್ನು ಈ ಅವಿವೇಕಿಗಳು ಮೊದಲು ತಿಳಿದುಕೊಳ್ಳುವುದು ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...