Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...