Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...