Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...