Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...