Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...