Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...