Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...