Homeಮುಖಪುಟಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಕೋಟಾದ ಖಜೂರಿ ಗ್ರಾಮದ ಹೈಯರ್ ಸೀನಿಯರ್ ಸೆಕೆಂಡರಿ ಶಾಲೆಯ ಹಲವಾರು ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ ಆರೋಪದಲ್ಲಿ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ (SDM) ಕಚೇರಿಯ ಹೊರಗೆ ಜಮಾಯಿಸಿದ ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ತಮ್ಮ ಶಾಲೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಗ್ರಾಮದ ಸರಪಂಚ್ ಸೇರಿದಂತೆ 17 ಮಂದಿಯನ್ನು ಪಟ್ಟಿ ಮಾಡಿ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇವರು ತಮ್ಮ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ’ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಸಹಿ ಮಾಡಿದ ಜ್ಞಾಪಕ ಪತ್ರವನ್ನು ತಹಸೀಲ್ದಾರ್ ಮತ್ತು ಎಸ್‌ಡಿಎಂ ಅವರಿಗೆ ಹಸ್ತಾಂತರಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರ ಮೇಲಿನ ಎಲ್ಲಾ ಆರೋಪಗಳನ್ನು ರದ್ದುಪಡಿಸಿ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಖಜೂರಿನಲ್ಲಿರುವ ತಮ್ಮ ಹಳ್ಳಿಯ ಶಾಲೆಯಿಂದ ಸಂಗೋಡು ಪಟ್ಟಣದ ಎಸ್‌ಡಿಎಂ ಕಚೇರಿಗೆ ಹಲವಾರು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ನಡೆದುಕೊಂಡು ಬಂದಿದ್ದು, ಸುಳ್ಳು ಆರೋಪ ಮಾಡಿರುವ ಕೆಲ ವಿದ್ಯಾರ್ಥಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಗೋಡಿನ ಸೀನಿಯರ್ ಹೈಯರ್ ಸೆಕೆಂಡರಿ ಶಾಲೆಯ ಫಿರೋಜ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬ ಮೂವರು ಮುಸ್ಲಿಂ ಶಿಕ್ಷಕರು ಫೆಬ್ರವರಿ 21ರಂದು ಬುಧವಾರ ಶಿಕ್ಷಣ ಇಲಾಖೆಯಿಂದ ಅಮಾನತು ಆದೇಶವನ್ನು ಸ್ವೀಕರಿಸಿದ್ದಾರೆ. ಕೋಟಾದ ಜಿಲ್ಲಾ ಶಿಕ್ಷಣಾಧಿಕಾರಿ ಈ ಕುರಿತು ಆದೇಶವನ್ನು ಹೊರಡಿಸಿದ್ದರು.

ಈ ನಿರ್ಧಾರವು ಫೆಬ್ರವರಿ 20, ಮಂಗಳವಾರದಂದು ರಾಜ್ಯ ಶಿಕ್ಷಣ ಸಚಿವರ ಭೇಟಿಯ ಸಂದರ್ಭದಲ್ಲಿ ಕೋಟಾದಲ್ಲಿ ಹಿಂದೂ ಬಲಪಂಥೀಯ ಸಂಘಟನೆಗಳ ಸ್ಥಳೀಯ ಒಕ್ಕೂಟವಾದ ಸರ್ವ್ ಹಿಂದೂ ಸಮಾಜ (SHS) ಸಲ್ಲಿಸಿದ ಮನವಿ ಪತ್ರಕ್ಕೆ ಆಧರಿಸಿದೆ. ಇಸ್ಲಾಮಿಕ್ ಜಿಹಾದಿ ಚಟುವಟಿಕೆಗಳು, ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್‌ ಬಗ್ಗೆ ಶಿಕ್ಷಕರ ಬಗ್ಗೆ ಪತ್ರದಲ್ಲಿ ಆರೋಪಿಸಲಾಗಿತ್ತು.

2020ರಲ್ಲಿ ಮುಸ್ಲಿಂ ಹುಡುಗನನ್ನು ತನ್ನ ಸ್ವಂತ ಇಚ್ಛೆಯಿಂದ ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯೋರ್ವಳು ವಿವಾಹವಾಗಿದ್ದಳು. ಇದಕ್ಕೆ ಮುಸ್ಲಿಮ್‌ ಪ್ರಾದ್ಯಾಪಕರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ವಿದ್ಯಾರ್ಥಿನಿಯ ಕುಟುಂಬವು ಆಕೆಯ ಅಂತರ್‌ಧರ್ಮೀಯ ವಿವಾಹದ ಹಿಂದೆ ಈ ಮೂವರು ಮುಸ್ಲಿಂ ಶಿಕ್ಷಕರ ಕೈವಾಡವಿದೆ ಮತ್ತು ಬಲವಂತದ ಮತಾಂತರ ಎಂದು ಆರೋಪಿಸಿದ್ದಾರೆ.

ಪ್ರಾಂಶುಪಾಲ ಕಮಲೇಶ್ ಕುಮಾರ್ ಬರ್ವಾ ಅವರು ಅಮಾನತು ಆದೇಶವನ್ನು ಸ್ವೀಕರಿಸಿದ ಅದೇ ದಿನದಲ್ಲಿ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಹಂಗಾಮಿ ಪ್ರಾಂಶುಪಾಲರು ಮತ್ತು ಶಿಕ್ಷಕರುಗೆ ಸರ್ವ್ ಹಿಂದೂ ಸಮಾಜದ ಆರೋಪಗಳನ್ನು ನಿರಾಕರಿಸಿದ್ದಾರೆ.

ಶಾಲೆಯಲ್ಲಿನ 15 ಶಿಕ್ಷಕರಲ್ಲಿ 12 ಮಂದಿ ಹಿಂದೂಗಳಾಗಿದ್ದರು. ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಅಮಾನತುಗೊಂಡಿರುವ ಶಿಕ್ಷಕರು ‘ಧರ್ಮ ಪರಿವರ್ತನೆ,’ ‘ಲವ್ ಜಿಹಾದ್’ ಅಥವಾ ‘ನಮಾಜ್’ ನಂತಹ ಯಾವುದೇ ಚಟುವಟಿಕೆಯನ್ನು ಮಾಡಿಲ್ಲ ಎಂದು ಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಮತ್ತು ಯಾವುದೇ ‘ಧಾರ್ಮಿಕ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಶಿಕ್ಷಕರು ಒತ್ತಿ ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಕಮಲೇಶ್ ಸಿಂಗ್ ಬೆರ್ವಾ ಅವರು ಮಾತನಾಡಿದ್ದು, ಮೂವರೂ ಶಿಕ್ಷಕರು ಬಹಳ ದಕ್ಷರು, ಮುಜಾಹಿದ್ ಮಿರ್ಜಾ ಪಿಟಿ ಶಿಕ್ಷಕ, ಫಿರೋಜ್ ಖಾನ್ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಬಾನಾ ಮೇಡಮ್ ಅಕ್ಟೋಬರ್‌ನಲ್ಲಿ ಶಾಲೆಗೆ ಸೇರಿದವರು. ನಾನು 2021ರಲ್ಲಿ ಶಾಲೆಗೆ ಸೇರಿದ್ದೇನೆ ಮತ್ತು ಅಂದಿನಿಂದ ಅಮಾನತುಗೊಂಡ ಶಿಕ್ಷಕರು ಸೇರಿದಂತೆ ಯಾವುದೇ ಶಿಕ್ಷಕರ ಅಸಾಮಾನ್ಯ ನಡವಳಿಕೆ ಅಥವಾ ದುರ್ನಡತೆಯನ್ನು ನಾನು ಗಮನಿಸಿಲ್ಲ, ಅವರು ಶಿಕ್ಷಕರಾಗಿದ್ದು, ಯಾವುದೇ ಪಕ್ಷಪಾತವಿಲ್ಲದೆ ತಮ್ಮ ವಿಷಯಗಳನ್ನು ಚೆನ್ನಾಗಿ ಕಲಿಸುತ್ತಾರೆ. ಇದು ಅತ್ಯಂತ ದುರದೃಷ್ಟಕರ. ಈ ಶಿಕ್ಷಕರ ವಿರುದ್ಧ ಇಂತಹ ಆರೋಪಗಳ ಬಗ್ಗೆ ತಿಳಿದು ಆಶ್ಚರ್ಯವಾಯಿತು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 24ರಂದು ರಾಜಸ್ಥಾನದ ಕೋಟಾ ಜಿಲ್ಲೆಯ ಸಂಗೋಡ್ ಬ್ಲಾಕ್‌ನ ಖಜೂರಿ ಗ್ರಾಮದಲ್ಲಿ ತಮ್ಮ ಶಾಲೆಯ ಹೊರಗೆ ಮೂವರು ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಇಚ್ಛೆಯಿಂದ ಇಲ್ಲಿದ್ದೇವೆ ಮತ್ತು ನಮ್ಮ ಶಿಕ್ಷಕರ ಅಮಾನತು ಆದೇಶಗಳನ್ನು ಹಿಂತೆಗೆದುಕೊಂಡ ನಂತರ ಮತ್ತೆ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...