Homeಮುಖಪುಟಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಕೋಟಾದ ಖಜೂರಿ ಗ್ರಾಮದ ಹೈಯರ್ ಸೀನಿಯರ್ ಸೆಕೆಂಡರಿ ಶಾಲೆಯ ಹಲವಾರು ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ ಆರೋಪದಲ್ಲಿ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ (SDM) ಕಚೇರಿಯ ಹೊರಗೆ ಜಮಾಯಿಸಿದ ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ತಮ್ಮ ಶಾಲೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಗ್ರಾಮದ ಸರಪಂಚ್ ಸೇರಿದಂತೆ 17 ಮಂದಿಯನ್ನು ಪಟ್ಟಿ ಮಾಡಿ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇವರು ತಮ್ಮ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ’ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಸಹಿ ಮಾಡಿದ ಜ್ಞಾಪಕ ಪತ್ರವನ್ನು ತಹಸೀಲ್ದಾರ್ ಮತ್ತು ಎಸ್‌ಡಿಎಂ ಅವರಿಗೆ ಹಸ್ತಾಂತರಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರ ಮೇಲಿನ ಎಲ್ಲಾ ಆರೋಪಗಳನ್ನು ರದ್ದುಪಡಿಸಿ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಖಜೂರಿನಲ್ಲಿರುವ ತಮ್ಮ ಹಳ್ಳಿಯ ಶಾಲೆಯಿಂದ ಸಂಗೋಡು ಪಟ್ಟಣದ ಎಸ್‌ಡಿಎಂ ಕಚೇರಿಗೆ ಹಲವಾರು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ನಡೆದುಕೊಂಡು ಬಂದಿದ್ದು, ಸುಳ್ಳು ಆರೋಪ ಮಾಡಿರುವ ಕೆಲ ವಿದ್ಯಾರ್ಥಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಗೋಡಿನ ಸೀನಿಯರ್ ಹೈಯರ್ ಸೆಕೆಂಡರಿ ಶಾಲೆಯ ಫಿರೋಜ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬ ಮೂವರು ಮುಸ್ಲಿಂ ಶಿಕ್ಷಕರು ಫೆಬ್ರವರಿ 21ರಂದು ಬುಧವಾರ ಶಿಕ್ಷಣ ಇಲಾಖೆಯಿಂದ ಅಮಾನತು ಆದೇಶವನ್ನು ಸ್ವೀಕರಿಸಿದ್ದಾರೆ. ಕೋಟಾದ ಜಿಲ್ಲಾ ಶಿಕ್ಷಣಾಧಿಕಾರಿ ಈ ಕುರಿತು ಆದೇಶವನ್ನು ಹೊರಡಿಸಿದ್ದರು.

ಈ ನಿರ್ಧಾರವು ಫೆಬ್ರವರಿ 20, ಮಂಗಳವಾರದಂದು ರಾಜ್ಯ ಶಿಕ್ಷಣ ಸಚಿವರ ಭೇಟಿಯ ಸಂದರ್ಭದಲ್ಲಿ ಕೋಟಾದಲ್ಲಿ ಹಿಂದೂ ಬಲಪಂಥೀಯ ಸಂಘಟನೆಗಳ ಸ್ಥಳೀಯ ಒಕ್ಕೂಟವಾದ ಸರ್ವ್ ಹಿಂದೂ ಸಮಾಜ (SHS) ಸಲ್ಲಿಸಿದ ಮನವಿ ಪತ್ರಕ್ಕೆ ಆಧರಿಸಿದೆ. ಇಸ್ಲಾಮಿಕ್ ಜಿಹಾದಿ ಚಟುವಟಿಕೆಗಳು, ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್‌ ಬಗ್ಗೆ ಶಿಕ್ಷಕರ ಬಗ್ಗೆ ಪತ್ರದಲ್ಲಿ ಆರೋಪಿಸಲಾಗಿತ್ತು.

2020ರಲ್ಲಿ ಮುಸ್ಲಿಂ ಹುಡುಗನನ್ನು ತನ್ನ ಸ್ವಂತ ಇಚ್ಛೆಯಿಂದ ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯೋರ್ವಳು ವಿವಾಹವಾಗಿದ್ದಳು. ಇದಕ್ಕೆ ಮುಸ್ಲಿಮ್‌ ಪ್ರಾದ್ಯಾಪಕರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ವಿದ್ಯಾರ್ಥಿನಿಯ ಕುಟುಂಬವು ಆಕೆಯ ಅಂತರ್‌ಧರ್ಮೀಯ ವಿವಾಹದ ಹಿಂದೆ ಈ ಮೂವರು ಮುಸ್ಲಿಂ ಶಿಕ್ಷಕರ ಕೈವಾಡವಿದೆ ಮತ್ತು ಬಲವಂತದ ಮತಾಂತರ ಎಂದು ಆರೋಪಿಸಿದ್ದಾರೆ.

ಪ್ರಾಂಶುಪಾಲ ಕಮಲೇಶ್ ಕುಮಾರ್ ಬರ್ವಾ ಅವರು ಅಮಾನತು ಆದೇಶವನ್ನು ಸ್ವೀಕರಿಸಿದ ಅದೇ ದಿನದಲ್ಲಿ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಹಂಗಾಮಿ ಪ್ರಾಂಶುಪಾಲರು ಮತ್ತು ಶಿಕ್ಷಕರುಗೆ ಸರ್ವ್ ಹಿಂದೂ ಸಮಾಜದ ಆರೋಪಗಳನ್ನು ನಿರಾಕರಿಸಿದ್ದಾರೆ.

ಶಾಲೆಯಲ್ಲಿನ 15 ಶಿಕ್ಷಕರಲ್ಲಿ 12 ಮಂದಿ ಹಿಂದೂಗಳಾಗಿದ್ದರು. ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಅಮಾನತುಗೊಂಡಿರುವ ಶಿಕ್ಷಕರು ‘ಧರ್ಮ ಪರಿವರ್ತನೆ,’ ‘ಲವ್ ಜಿಹಾದ್’ ಅಥವಾ ‘ನಮಾಜ್’ ನಂತಹ ಯಾವುದೇ ಚಟುವಟಿಕೆಯನ್ನು ಮಾಡಿಲ್ಲ ಎಂದು ಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಮತ್ತು ಯಾವುದೇ ‘ಧಾರ್ಮಿಕ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಶಿಕ್ಷಕರು ಒತ್ತಿ ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಕಮಲೇಶ್ ಸಿಂಗ್ ಬೆರ್ವಾ ಅವರು ಮಾತನಾಡಿದ್ದು, ಮೂವರೂ ಶಿಕ್ಷಕರು ಬಹಳ ದಕ್ಷರು, ಮುಜಾಹಿದ್ ಮಿರ್ಜಾ ಪಿಟಿ ಶಿಕ್ಷಕ, ಫಿರೋಜ್ ಖಾನ್ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಬಾನಾ ಮೇಡಮ್ ಅಕ್ಟೋಬರ್‌ನಲ್ಲಿ ಶಾಲೆಗೆ ಸೇರಿದವರು. ನಾನು 2021ರಲ್ಲಿ ಶಾಲೆಗೆ ಸೇರಿದ್ದೇನೆ ಮತ್ತು ಅಂದಿನಿಂದ ಅಮಾನತುಗೊಂಡ ಶಿಕ್ಷಕರು ಸೇರಿದಂತೆ ಯಾವುದೇ ಶಿಕ್ಷಕರ ಅಸಾಮಾನ್ಯ ನಡವಳಿಕೆ ಅಥವಾ ದುರ್ನಡತೆಯನ್ನು ನಾನು ಗಮನಿಸಿಲ್ಲ, ಅವರು ಶಿಕ್ಷಕರಾಗಿದ್ದು, ಯಾವುದೇ ಪಕ್ಷಪಾತವಿಲ್ಲದೆ ತಮ್ಮ ವಿಷಯಗಳನ್ನು ಚೆನ್ನಾಗಿ ಕಲಿಸುತ್ತಾರೆ. ಇದು ಅತ್ಯಂತ ದುರದೃಷ್ಟಕರ. ಈ ಶಿಕ್ಷಕರ ವಿರುದ್ಧ ಇಂತಹ ಆರೋಪಗಳ ಬಗ್ಗೆ ತಿಳಿದು ಆಶ್ಚರ್ಯವಾಯಿತು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 24ರಂದು ರಾಜಸ್ಥಾನದ ಕೋಟಾ ಜಿಲ್ಲೆಯ ಸಂಗೋಡ್ ಬ್ಲಾಕ್‌ನ ಖಜೂರಿ ಗ್ರಾಮದಲ್ಲಿ ತಮ್ಮ ಶಾಲೆಯ ಹೊರಗೆ ಮೂವರು ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಇಚ್ಛೆಯಿಂದ ಇಲ್ಲಿದ್ದೇವೆ ಮತ್ತು ನಮ್ಮ ಶಿಕ್ಷಕರ ಅಮಾನತು ಆದೇಶಗಳನ್ನು ಹಿಂತೆಗೆದುಕೊಂಡ ನಂತರ ಮತ್ತೆ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...