Homeಮುಖಪುಟಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಕೋಟಾದ ಖಜೂರಿ ಗ್ರಾಮದ ಹೈಯರ್ ಸೀನಿಯರ್ ಸೆಕೆಂಡರಿ ಶಾಲೆಯ ಹಲವಾರು ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ ಆರೋಪದಲ್ಲಿ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ (SDM) ಕಚೇರಿಯ ಹೊರಗೆ ಜಮಾಯಿಸಿದ ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ತಮ್ಮ ಶಾಲೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಗ್ರಾಮದ ಸರಪಂಚ್ ಸೇರಿದಂತೆ 17 ಮಂದಿಯನ್ನು ಪಟ್ಟಿ ಮಾಡಿ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇವರು ತಮ್ಮ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ’ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಸಹಿ ಮಾಡಿದ ಜ್ಞಾಪಕ ಪತ್ರವನ್ನು ತಹಸೀಲ್ದಾರ್ ಮತ್ತು ಎಸ್‌ಡಿಎಂ ಅವರಿಗೆ ಹಸ್ತಾಂತರಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರ ಮೇಲಿನ ಎಲ್ಲಾ ಆರೋಪಗಳನ್ನು ರದ್ದುಪಡಿಸಿ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಖಜೂರಿನಲ್ಲಿರುವ ತಮ್ಮ ಹಳ್ಳಿಯ ಶಾಲೆಯಿಂದ ಸಂಗೋಡು ಪಟ್ಟಣದ ಎಸ್‌ಡಿಎಂ ಕಚೇರಿಗೆ ಹಲವಾರು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ನಡೆದುಕೊಂಡು ಬಂದಿದ್ದು, ಸುಳ್ಳು ಆರೋಪ ಮಾಡಿರುವ ಕೆಲ ವಿದ್ಯಾರ್ಥಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಗೋಡಿನ ಸೀನಿಯರ್ ಹೈಯರ್ ಸೆಕೆಂಡರಿ ಶಾಲೆಯ ಫಿರೋಜ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬ ಮೂವರು ಮುಸ್ಲಿಂ ಶಿಕ್ಷಕರು ಫೆಬ್ರವರಿ 21ರಂದು ಬುಧವಾರ ಶಿಕ್ಷಣ ಇಲಾಖೆಯಿಂದ ಅಮಾನತು ಆದೇಶವನ್ನು ಸ್ವೀಕರಿಸಿದ್ದಾರೆ. ಕೋಟಾದ ಜಿಲ್ಲಾ ಶಿಕ್ಷಣಾಧಿಕಾರಿ ಈ ಕುರಿತು ಆದೇಶವನ್ನು ಹೊರಡಿಸಿದ್ದರು.

ಈ ನಿರ್ಧಾರವು ಫೆಬ್ರವರಿ 20, ಮಂಗಳವಾರದಂದು ರಾಜ್ಯ ಶಿಕ್ಷಣ ಸಚಿವರ ಭೇಟಿಯ ಸಂದರ್ಭದಲ್ಲಿ ಕೋಟಾದಲ್ಲಿ ಹಿಂದೂ ಬಲಪಂಥೀಯ ಸಂಘಟನೆಗಳ ಸ್ಥಳೀಯ ಒಕ್ಕೂಟವಾದ ಸರ್ವ್ ಹಿಂದೂ ಸಮಾಜ (SHS) ಸಲ್ಲಿಸಿದ ಮನವಿ ಪತ್ರಕ್ಕೆ ಆಧರಿಸಿದೆ. ಇಸ್ಲಾಮಿಕ್ ಜಿಹಾದಿ ಚಟುವಟಿಕೆಗಳು, ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್‌ ಬಗ್ಗೆ ಶಿಕ್ಷಕರ ಬಗ್ಗೆ ಪತ್ರದಲ್ಲಿ ಆರೋಪಿಸಲಾಗಿತ್ತು.

2020ರಲ್ಲಿ ಮುಸ್ಲಿಂ ಹುಡುಗನನ್ನು ತನ್ನ ಸ್ವಂತ ಇಚ್ಛೆಯಿಂದ ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯೋರ್ವಳು ವಿವಾಹವಾಗಿದ್ದಳು. ಇದಕ್ಕೆ ಮುಸ್ಲಿಮ್‌ ಪ್ರಾದ್ಯಾಪಕರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ವಿದ್ಯಾರ್ಥಿನಿಯ ಕುಟುಂಬವು ಆಕೆಯ ಅಂತರ್‌ಧರ್ಮೀಯ ವಿವಾಹದ ಹಿಂದೆ ಈ ಮೂವರು ಮುಸ್ಲಿಂ ಶಿಕ್ಷಕರ ಕೈವಾಡವಿದೆ ಮತ್ತು ಬಲವಂತದ ಮತಾಂತರ ಎಂದು ಆರೋಪಿಸಿದ್ದಾರೆ.

ಪ್ರಾಂಶುಪಾಲ ಕಮಲೇಶ್ ಕುಮಾರ್ ಬರ್ವಾ ಅವರು ಅಮಾನತು ಆದೇಶವನ್ನು ಸ್ವೀಕರಿಸಿದ ಅದೇ ದಿನದಲ್ಲಿ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಹಂಗಾಮಿ ಪ್ರಾಂಶುಪಾಲರು ಮತ್ತು ಶಿಕ್ಷಕರುಗೆ ಸರ್ವ್ ಹಿಂದೂ ಸಮಾಜದ ಆರೋಪಗಳನ್ನು ನಿರಾಕರಿಸಿದ್ದಾರೆ.

ಶಾಲೆಯಲ್ಲಿನ 15 ಶಿಕ್ಷಕರಲ್ಲಿ 12 ಮಂದಿ ಹಿಂದೂಗಳಾಗಿದ್ದರು. ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಅಮಾನತುಗೊಂಡಿರುವ ಶಿಕ್ಷಕರು ‘ಧರ್ಮ ಪರಿವರ್ತನೆ,’ ‘ಲವ್ ಜಿಹಾದ್’ ಅಥವಾ ‘ನಮಾಜ್’ ನಂತಹ ಯಾವುದೇ ಚಟುವಟಿಕೆಯನ್ನು ಮಾಡಿಲ್ಲ ಎಂದು ಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಮತ್ತು ಯಾವುದೇ ‘ಧಾರ್ಮಿಕ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಶಿಕ್ಷಕರು ಒತ್ತಿ ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಕಮಲೇಶ್ ಸಿಂಗ್ ಬೆರ್ವಾ ಅವರು ಮಾತನಾಡಿದ್ದು, ಮೂವರೂ ಶಿಕ್ಷಕರು ಬಹಳ ದಕ್ಷರು, ಮುಜಾಹಿದ್ ಮಿರ್ಜಾ ಪಿಟಿ ಶಿಕ್ಷಕ, ಫಿರೋಜ್ ಖಾನ್ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಬಾನಾ ಮೇಡಮ್ ಅಕ್ಟೋಬರ್‌ನಲ್ಲಿ ಶಾಲೆಗೆ ಸೇರಿದವರು. ನಾನು 2021ರಲ್ಲಿ ಶಾಲೆಗೆ ಸೇರಿದ್ದೇನೆ ಮತ್ತು ಅಂದಿನಿಂದ ಅಮಾನತುಗೊಂಡ ಶಿಕ್ಷಕರು ಸೇರಿದಂತೆ ಯಾವುದೇ ಶಿಕ್ಷಕರ ಅಸಾಮಾನ್ಯ ನಡವಳಿಕೆ ಅಥವಾ ದುರ್ನಡತೆಯನ್ನು ನಾನು ಗಮನಿಸಿಲ್ಲ, ಅವರು ಶಿಕ್ಷಕರಾಗಿದ್ದು, ಯಾವುದೇ ಪಕ್ಷಪಾತವಿಲ್ಲದೆ ತಮ್ಮ ವಿಷಯಗಳನ್ನು ಚೆನ್ನಾಗಿ ಕಲಿಸುತ್ತಾರೆ. ಇದು ಅತ್ಯಂತ ದುರದೃಷ್ಟಕರ. ಈ ಶಿಕ್ಷಕರ ವಿರುದ್ಧ ಇಂತಹ ಆರೋಪಗಳ ಬಗ್ಗೆ ತಿಳಿದು ಆಶ್ಚರ್ಯವಾಯಿತು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 24ರಂದು ರಾಜಸ್ಥಾನದ ಕೋಟಾ ಜಿಲ್ಲೆಯ ಸಂಗೋಡ್ ಬ್ಲಾಕ್‌ನ ಖಜೂರಿ ಗ್ರಾಮದಲ್ಲಿ ತಮ್ಮ ಶಾಲೆಯ ಹೊರಗೆ ಮೂವರು ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಇಚ್ಛೆಯಿಂದ ಇಲ್ಲಿದ್ದೇವೆ ಮತ್ತು ನಮ್ಮ ಶಿಕ್ಷಕರ ಅಮಾನತು ಆದೇಶಗಳನ್ನು ಹಿಂತೆಗೆದುಕೊಂಡ ನಂತರ ಮತ್ತೆ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...